ಮಂಗಳೂರು: ನಗರದ ಪಾಂಡೇಶ್ವರದ ಶಿವನಗರ ಎಂಬಲ್ಲಿ ಮನೆ ಮಾಲೀಕರು ಮನೆ ಮೇಲೆ ಯಾವುದೇ ಪರವಾನಗಿ ಪಡೆಯದೇ ಅನಧಿಕೃತ ಕಟ್ಟಡ ನಿರ್ಮಿಸಿ ವಸತಿ ನಿಲಯವನ್ನು ವಾಣಿಜ್ಯ ಕಟ್ಟಡವನ್ನಾಗಿ ಮಾಡಿ ಸುಮಾರು 40 ಮಂದಿ ಪಿ.ಜಿ ವಿದ್ಯಾರ್ಥಿಗಳ ನ್ನು ಹಾಕಿ ಕಾನೂನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ.
ಇಲ್ಲಿ ಸರಿಯಾಗಿ ನೀರಿನ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೇ ಇದ್ದರೂ ವಿದ್ಯಾರ್ಥಿಗಳಿಂದ 4 ಸಾವಿರ ರೂ . ಹಣ ಪಡೆದು ಮಾಲೀಕರು ಮೆರೆಯುತ್ತಿದ್ದಾರೆ.
ಅಷ್ಟೇ ಅಲ್ಲ ಇಲ್ಲಿನ ವಿದ್ಯಾರ್ಥಿಗಳ ಬೈಕ್ ರೇಸ್ ನಂತೆ ಒಂದು ಬೈಕ್ ನಲ್ಲಿ ಮೂರು ಮೂರು ಮಂದಿ ಕುಳಿತು ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ
ಇದರಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾಗಿದ್ದು ಸ್ಥಳೀಯರು ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಸಂಭಂದಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಈ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅನಾಧಿಕೃತ ವ್ಯವಹಾರಗಳ ಬಗ್ಗೆ ಕ್ರಮ ಕೈಗೊಂಡು ಸ್ಥಳೀಯರಿಗೆ ಇದರಿಂದ ಮುಕ್ತಿ ನೀಡಬೇಕಾಗಿ ಮಾದ್ಯಮದ ಮೂಲಕ ವಿನಂತಿಸಿದ್ದಾರೆ
