ಬೆಂಗಳೂರು: ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ನೀಡದಿರುವುದು ಕಾಂಗ್ರೆಸ್ ಪಕ್ಷದ ಅತಿದೊಡ್ಡ ತಪ್ಪು, ಜಮೀರ್ ಅಹ್ಮದ್ ಖಾನ್ ಅವರಿಗೆ ಕೇವಲ ಮುಸ್ಲಿಂ ಸಮುದಾಯದವರಷ್ಟೇ ಅಲ್ಲದೆ, ಸರ್ವಧರ್ಮದ ಜನರ ಬೆಂಬಲವೂ ಇದೆ.ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ನಿಂದ ದೂರವಾದರೆ, ಪಕ್ಷವು ಬಹುಮತಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.ಜಮೀರ್ ಅಹ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದವರಿಗಷ್ಟೇ ಅಲ್ಲದೆ, ವಿವಿಧ ಧರ್ಮಗಳ ಜನರಲ್ಲಿಯೂ ಜನಪ್ರಿಯ ನಾಯಕರಾಗಿದ್ದಾರೆ. ಅವರಿಗೆ ಇನ್ನೂ ಯಾವುದೇ ಸಚಿವ ಸ್ಥಾನ ನೀಡದೆ ಮೂಲೆಗುಂಪು ಮಾಡಿದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಚುನಾವಣಾ ಮಟ್ಟದಲ್ಲಿ ಸಮಸ್ಯೆ ಎದುರಾಗಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ವರದಿಯಾಗಿದೆ.
