ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಏನಿದು ಘಟನೆ?ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ ಬಾಡಿಗೆ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೇ 21ರ ತಡರಾತ್ರಿ 1 ಗಂಟೆ ಸುಮಾರಿಗೆ ರಫೀಕ್ ತಮ್ಮ ಸ್ನೇಹಿತ ದೀಪಕ್ನನ್ನು ಪಿಕ್ ಅಪ್ ಮಾಡಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಹೋಗಿದ್ದರು. ದೀಪಕ್ನನ್ನು ಕರೆದುಕೊಂಡು ವಾಪಸ್ ಬರುತ್ತಿದ್ದಾಗ, ಬೇಗೂರು ಸಮೀಪ ಬಿಳಿ ಬಣ್ಣದ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬಂದ 5 ರಿಂದ 6 ಜನರ ಗ್ಯಾಂಗ್ ಇವರ ಕ್ಯಾಬ್ ಅನ್ನು ಅಡ್ಡಗಟ್ಟಿದೆ.ಚಾಕು ತೋರಿಸಿ ಕಿಡ್ನ್ಯಾಪ್, ದರೋಡೆಕಾರಿನಿಂದ ಇಳಿದ ದುಷ್ಕರ್ಮಿಗಳು ಚಾಕು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ ರಫೀಕ್ನನ್ನು ಬಲವಂತವಾಗಿ ಬೆಂಜ್ ಕಾರಿಗೆ ಎಳೆದುಕೊಂಡಿದ್ದಾರೆ. ಅವರ ಬಳಿಯಿದ್ದ 21,000 ರೂ. ನಗದು ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ನಗರದ ಕಡೆಗೆ ಚಲಿಸಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ರಫೀಕ್ನಿಂದ ಆತನ ಮತ್ತೊಬ್ಬ ಸ್ನೇಹಿತ ಜಾಬಿರ್ ಎಂಬುವವನಿಗೆ ಕರೆ ಮಾಡಿಸಿದ್ದಾರೆ. ತನಗೆ ಅಪಘಾತವಾಗಿದೆ ಎಂದು ಸುಳ್ಳು ಹೇಳಿಸಿ ಜಾಬಿರ್ನನ್ನು ಸ್ಥಳಕ್ಕೆ ಬರುವಂತೆ ಪ್ಲಾನ್ ಮಾಡಿದ್ದರು.ಸ್ನೇಹಿತ ಕರೆ ಮಾಡಿದ್ದಕ್ಕೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಜಾಬಿರ್ನನ್ನೂ ಸಹ ಈ ಗ್ಯಾಂಗ್ ಕಬ್ಬಿಣದ ರಾಡ್ಗಳಿಂದ ಬೆದರಿಸಿ, ಇಬ್ಬರನ್ನೂ ಖಾಲಿ ಸೈಟ್ವೊಂದಕ್ಕೆ ಕರೆದೊಯ್ದು ಮನಬಂದಂತೆ ಥಳಿಸಿದೆ. ಈ ವೇಳೆ ರಫೀಕ್ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಆಟೋರಿಕ್ಷಾ ಮೂಲಕ ಕೊಠಡಿಗೆ ಬಂದು ತಲುಪಿದ್ದಾರೆ. ನಂತರ ಮುಂಜಾನೆ 5 ಗಂಟೆ ಸುಮಾರಿಗೆ ಮತ್ತೊಬ್ಬ ಸ್ನೇಹಿತನ ಫೋನ್ ಬಳಸಿ ಪೊಲೀಸ್ ಹೆಲ್ಪ್ಲೈನ್ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ಪೊಲೀಸ್ ಕಾರ್ಯಾಚರಣೆಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಂಪಿಗೆಹಳ್ಳಿ ಪೊಲೀಸರು ಗಾಯಗೊಂಡಿದ್ದ ಜಾಬಿರ್ನನ್ನು ರಕ್ಷಿಸಿ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆಯಿಂದಾಗಿ ಜಾಬಿರ್ ಕಿಿವಿಗೆ ಬಲವಾದ ಗಾಯಗಳಾಗಿವೆ. ಸದ್ಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ಮಾಡಿದವರು ಮತ್ತು ದೂರುದಾರರಿಗೆ ಮುಂಚಿತವಾಗಿ ಪರಿಚಯ ಇರಲಿಲ್ಲ. ಆದರೆ ಮಹಿಳೆಯೊಬ್ಬರ ವಿಚಾರದಲ್ಲಿ ಇವರ ನಡುವೆ ಗಲಾಟೆಯಾಗಿದ್ದು, ಇದೇ ದ್ವೇಷದಲ್ಲಿ ಅಪಹರಣ ಮತ್ತು ದರೋಡೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ವೇಳೆ ಅಪಹರಣ: 112 ಕರೆ ಮೂಲಕ ಬಯಲಾಯ್ತು ಭೀಕರ ಘಟನೆ
ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಏನಿದು ಘಟನೆ?ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












