Author: News Editor
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…
-

ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಪ್ರಸಿದ್ಧ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೈವದ ಮೂರ್ತಿ ಹಾಗೂ ಆಭರಣಗಳನ್ನು ಕಳವು ಮಾಡಿದ್ದ ಗ್ಯಾಂಗ್ ಒಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳ ವಿವರ: ಜಾಹೀದ್ ಸಿನಾನ್ (36) – ಹೆಚ್.ಕೆ. ಮಂಜಿಲ್, ಹೆಜಮಾಡಿ ಗ್ರಾಮ, ಉಡುಪಿ.ಯಾಸೀನ್…
-

ಮಂಗಳೂರು: ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಚುನಾವಣಾ ಆಯೋಗದ ನೋಟೀಸು; ‘SIR’ ಕ್ರಮದ ವಿರುದ್ಧ ಮುನೀರ್ ಕಾಟಿಪಳ್ಳ ಆಕ್ರೋಶ
ಮಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದ A B ಇಬ್ರಾಹಿಂ ಅವರಿಗೆ ಚುನಾವಣಾ ಆಯೋಗ ನೋಟೀಸು ನೀಡಿದೆ. ಸಂಬಂಧ ಪಟ್ಟ ಅಧಿಕಾರಿ ಮುಂದೆ ನಿರ್ದಿಷ್ಟ ದಿನಾಂಕದಂದು ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹಳೆಯ ಹಾಗು ಈಗಿನ ಮತದಾರರ ಪಟ್ಟಿಯಲ್ಲಿ ನಮೂದಾದ ಹೆಸರಿನಲ್ಲಿನ ಸಣ್ಣ ವ್ಯತ್ಯಾಸದ ಕಾರಣಕ್ಕೆ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಚುನಾವಣಾ ಆಯೋಗಕ್ಕೆ ಅನುಮಾನ ಮೂಡಿದೆ. 35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ…
-

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್ನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…
-

ಉಡುಪಿ: ಜಾಮೀನು ಕೊಡಿಸುವ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ
ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
-

ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!
ಕಾಸರಗೋಡು: ಮರಳು ಸಾಗಣೆ ದೋಣಿಯ ಮೇಲೆ ಕರಾವಳಿ ಪೊಲೀಸರು ನಡೆಸಿದ ದಾಳಿಯ ವೇಳೆ ತಪ್ಪಿಸಿಕೊಳ್ಳಲು ನದಿಗೆ ಜಿಗಿದು ನಾಪತ್ತೆಯಾಗಿದ್ದ ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹೀಂ (35) ಎಂಬವರ ಮೃತದೇಹ ನಾಲ್ಕು ದಿನಗಳ ನಿರಂತರ ಹುಡುಕಾಟದ ಬಳಿಕ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಶಿರಿಯಾ ನದಿಯ ಅಳಿವಿನಬಾಗಿಲು ಪ್ರದೇಶದಲ್ಲಿ ಮೀನುಗಾರರ ಬಲೆಗೆ ಸಿಲುಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೆ.7ರಂದು ರಾತ್ರಿ 8 ಗಂಟೆ ಸುಮಾರಿಗೆ ಶಿರಿಯಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಗೆ ಕರಾವಳಿ ಪೊಲೀಸರು ದಾಳಿ ನಡೆಸಿದ್ದರು. ಈ…
-

ಪುತ್ತೂರು: ಆಟೋದಲ್ಲಿ ಮಾರ್ಗ ಬದಲಿಸಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಚಾಲಕ ವಶಕ್ಕೆ
ಪುತ್ತೂರು : ಪ್ರಯಾಣದ ವೇಳೆ ಪರಿಚಯದ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು, ಮಾರ್ಗ ಬದಲಿಸಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಆಟೋ ಚಾಲಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆಯು ಸೆಪ್ಟೆಂಬರ್ 9ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಈ ವೇಳೆ ತಮ್ಮ ಪರಿಚಯದವರೇ ಆದ ಬಾಲಕೃಷ್ಣ ಎಂಬುವವರ ಆಟೋ ರಿಕ್ಷಾದಲ್ಲಿ ಪುತ್ತೂರು ನಗರದ…
-

ಮಂಗಳೂರು: ತಿಂಗಳ ಹಿಂದೆ ಕೆಲಸದ ಸ್ಥಳದಲ್ಲಿ ಸಾವು: ಕೊಲೆ ಶಂಕಿಸಿ ತಂದೆಯಿಂದ ಪ್ರಕರಣ ದಾಖಲು
ಮಂಗಳೂರು:ತಿಂಗಳ ಹಿಂದೆ ತನ್ನ ಕೆಲಸದ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಅಜಯ್ ಅವರದ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಿ ಆತನ ತಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಜಯ್ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬೇರುಗಳಿಂದ ತಯಾರಿಸಲಾಗುವ ಕುರ್ಚಿ, ಟೇಬಲ್ ಗಳನ್ನು ಮಾರಾಟ ಮಾಡುವ ಅಂಗಡಿ ಹೊಂದಿದ್ದರು. ತಿಂಗಳ ಹಿಂದೆ ಅವರು ಅನಾರೋಗ್ಯಕ್ಕೀಡಾಗಿದ್ದ ಅಜಯ್ ನನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ…
-

ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್
ಮುಲ್ಕಿ: ಕಿಲ್ಪಾಡಿಯ ಪ್ರಸಿದ್ಧ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದ ಸುಮಾರು ₹36 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮೂಲ್ಕಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಪಡುಬಿದ್ರೆ ಕಂಚಿನಡ್ಕದ ಜಾಹಿದ್ ಸಿನಾನ್, ಕಾರ್ನಾಡ್ ನಿವಾಸಿ ಯಾಸಿನ್ ಹಾಗೂ ದಾವಣಗೆರೆಯ ಅಬ್ದುಲ್ ಜುಮಾಲ್ ಮತ್ತು ಮಹಮ್ಮದ್ ಆಫ್ರಿದ್ ಎಂದು ಗುರುತಿಸಲಾಗಿದೆ. ದೈವಸ್ಥಾನದಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಪೂರ್ವಯೋಜಿತವಾಗಿ ಕಳ್ಳತನ ನಡೆಸಲಾಗಿತ್ತು ಎನ್ನಲಾಗಿದ್ದು,…
-

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ನೇಮಕ
ಕರ್ನಾಟಕ ಕಾಂಗ್ರೆಸ್ನಲ್ಲಿ ಮೇಜರಿ ಸರ್ಜರಿ ನಡೆದಿದ್ದು ಹೊಸದಾಗಿ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಪ್ರಕಟಿಸಿದ್ದು ಹೊಸ ಮುಖಗಳಿಗೆ ಮತ್ತು ಯುವ ನಾಯಕರಿಗೆ ಮಣೆ ಹಾಕಲಾಗಿದೆ. ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕವಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಪೂಜಾರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು. ಕಳೆದ 8…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











