Author: News Editor
-

ನಕಲಿ ಔಷಧ ಮಾರಾಟ ಕಿಂಗ್ ಪಿನ್ ಪ್ರಶಾಂತ್ ಅರೆಸ್ಟ್..!!
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ನಕಲಿ ಮತ್ತು ಕಳಪೆ ಔಷಧ ಮಾರಾಟ ಜಾಲದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಗಳನ್ನು ಅಲ್ಲಿಂದ ಅತಿ ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಸಹಚರರು ನೀಡಿದ ಮಾಹಿತಿ ಮೇರೆಗೆ ಕಿಂಗ್ಪಿನ್ ಪ್ರಶಾಂತ್ನನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಹತ್ವದ ವಿಚಾರವನ್ನು…
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಪೊಲೀಸರ ಮೇಲೆ ಮದ್ಯಪಾನ ಆರೋಪ..!!
ಪುತ್ತೂರು: ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್ಸ್ಟೇಬಲ್ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯಪಾನ ಮಾಡಿಲ್ಲ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಪ್ರಕರಣದ ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಬಳಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ, ಅಲ್ಲಿ ಸೇರಿದ್ದ ಕೆಲವರು ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡಿರುವುದಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಆಲ್ಕೋಮೀಟರ್…
-

ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ…
-

ರಾಜ್ಯದಲ್ಲಿ ಕಳಪೆ ತಿಂಡಿ, ಅವಧಿ ಮೀರಿದ ಮಾತ್ರೆ ತಡೆಗೆ ‘ವಾಚ್ ಟೀಮ್’- ಸಚಿವ ಯು.ಟಿ.ಖಾದರ್
ಮಂಗಳೂರು: ರಾಜ್ಯಾದ್ಯಂತ ನಕಲಿ ಮಾತ್ರೆಗಳ ಮಾರಾಟ ಹಾಗೂ ಹೋಟೆಲ್ಗಳಲ್ಲಿನ ಅಶುಚಿತ್ವದ ಆಹಾರ ಪೂರೈಕೆಗೆ ಶಾಶ್ವತ ಕಡಿವಾಣ ಹಾಕಲು ಸಾರ್ವಜನಿಕರ ಸಹಭಾಗಿತ್ವದ ವಿನೂತನ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಪ್ರತಿ ತಾಲೂಕು ವ್ಯಾಪ್ತಿಯಲ್ಲೂ ನಿವೃತ್ತ ಹಿರಿಯ ನಾಗರಿಕರನ್ನೊಳಗೊಂಡ ‘ವಾಚ್ ಟೀಮ್’ (ಕಣ್ಗಾವಲು ಸಮಿತಿ) ರಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಂಗಳೂರಿನಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಲಾಯಿತು. ಏನಿದು ಹಿರಿಯರ ‘ವಾಚ್ ಟೀಮ್’? ಸದಸ್ಯರ ಆಯ್ಕೆ: 60 ವರ್ಷ ದಾಟಿದ ನಿವೃತ್ತ ವೈದ್ಯರು, ಪೌಷ್ಟಿಕತಜ್ಞರು, ಕಾಲೇಜು…
-

ಬೆಳ್ತಂಗಡಿ: ಪಿಲ್ಯ ಕಪ್ಪು ಕಲ್ಲಿನ ಗಣಿಗಾರಿಕೆ- ಪೋಲಿಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಸ್ಥಳಕ್ಕೆ ಭೇಟಿ
ಬೆಳ್ತಂಗಡಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಭೂಮಾಲೀಕ ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ…
-

ಅಮೃತ್ ನಗರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪಾಲಿಕೆ ತಕ್ಷಣ ಕ್ರಮ ಕೈಗೊಳ್ಳಲಿ: ಶರೀಫ್ ಪಾಂಡೇಶ್ವರ್
ಮಂಗಳೂರು: ಪಾಂಡೇಶ್ವರದ ಅಮೃತ್ ನಗರ ವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಒದಗಿಸಲು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಶರೀಫ್ ಪಾಂಡೇಶ್ವರ್ ಆಗ್ರಹಿಸಿದ್ದಾರೆ. ಅಮೃತ್ ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಮತ್ತೊಂದೆಡೆ ಪಾಲಿಕೆಯ ನೀರು ವಾಣಿಜ್ಯ ಉದ್ದೇಶಗಳಿಗೆ ಹಾಗೂ ಅನಧಿಕೃತ ಪಿ.ಜಿ.ಗಳಿಗೆ ಬಳಕೆಯಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಕುರಿತು ಪಾಲಿಕೆ ಅಧಿಕಾರಿಗಳು…
-

ಪುತ್ತೂರು: ಲ್ಯಾಮಿನೇಷನ್ ವೇಳೆ ದಾಖಲೆ ಸುಟ್ಟುಹೋಗಿದ್ದಕ್ಕೆ ಗಲಾಟೆ,ಪರಸ್ಪರ ಹಲ್ಲೆ- ಮೂರು ಪ್ರತ್ಯೇಕ ದೂರು ದಾಖಲು, ಓರ್ವನ ಬಂಧನ
ಪುತ್ತೂರು: ನಗರದ ದರ್ಬೆಯಲ್ಲಿರುವ ‘ಡ್ರೀಮ್ ಡೆಸ್ಟಿನೇಷನ್’ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ಶುರುವಾದ ಕ್ಷುಲ್ಲಕ ಕಾರಣದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 21ರಂದು ಮಧ್ಯಾಹ್ನ ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಎಂಬವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ದಾಖಲೆಗಳ ಪ್ರಿಂಟ್ ಮತ್ತು ಲ್ಯಾಮಿನೇಷನ್ಗಾಗಿ ದರ್ಬೆಯ ಜನಸೇವಾ ಕೇಂದ್ರಕ್ಕೆ ತೆರಳಿದ್ದರು. ಈ…
-

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ..!! ಸಾವಿನ ಬಗ್ಗೆ ಪೋಷಕರು ಅನುಮಾನ
ಬಿಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ. ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ…
-

ಉಡುಪಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ- ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು
ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ…
-

ನಕಲಿ ಔಷಧ ಕಿಂಗ್ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಪೊಲೀಸರಿಗೆ ಅನುಮಾನ
ಬೆಂಗಳೂರು: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್ಪಿನ್ ಪ್ರಶಾಂತ್ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆತ ಇದುವರೆಗೂ 40,000ಕ್ಕೂ ಹೆಚ್ಚು ನಕಲಿ ಕ್ಯಾನ್ಸರ್ ಔಷಧ ಬಾಟಲಿಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ಈ ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ಪ್ರಶಾಂತ್ನ ಪತ್ನಿ ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸಲಾಗಿದ್ದು, ಆತ ವಿದೇಶದಲ್ಲಿದ್ದಾನೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











