Author: News Editor
-

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ…
-

ಇದು 8 ವರ್ಷದ ಹಳೆಯ ವಿಡಿಯೋ : ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ, ರಾಮಚಂದ್ರರಾವ್ ಫಸ್ಟ್ ರಿಯಾಕ್ಷನ್
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಗುತ್ತಿದೆ ಇದೇ ವಿಚಾರವಾಗಿ ರಾಮಚಂದ್ರರಾವ್ ಎಂದು ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಚಂದ್ರರಾವ್, ಇದು ಹಳೆಯ ಹಳೆಯ ವಿಡಿಯೋ ಎಂಟು ವರ್ಷ ಹಳೆಯದು. ಆಗ ನಾನು ಬೆಳಗಾವಿಯಲ್ಲಿ ಇದ್ದೆ.…
-

ಕಚೇರಿಯಲ್ಲೇ ಮಹಿಳೆಯರ ಜೊತೆಗೆ ಡಿಜಿಪಿ ರಾಸಲೀಲೆ..!! ವಿಡಿಯೋ ವೈರಲ್
ಬೆಂಗಳೂರು: ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್…
-

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ..!!
ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ…
-

ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ನೀರಿಗಿಳಿದ ಇಬ್ಬರು ಯುವಕರ ದುರ್ಮರಣ
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ . ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು ಸುಜೀತ್ ಗೋಳಿಯಾಡಿ (26) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ‘ಅನುಗ್ರಹ ಎಂಟರ್ಪ್ರೈಸಸ್’ ಎಂಬ ಹಾರ್ಡ್ವೇರ್ ಅಂಗಡಿಯ ಮಾಲೀಕರಾಗಿದ್ದರು, ಸುಜೀತ್ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಹರಿಪ್ರಸಾದ್ ಮತ್ತು ಸುಜೀತ್ ಅವರು…
-

ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
ಬೆಟ್ಟಿಂಗ್ ಕಟ್ಟಿ 19 ಬಿಯರ್ ಕುಡಿದು ಇಬ್ಬರು ಸಾಫ್ಟ್ ವೇರ್ ಉದ್ಯೋಗಿಗಳು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆ.ವಿ.ಪಲ್ಲಿ ಮಂಡಲದ ಬಂಡ ಪಾಡಿಪಲ್ಲಿಯಲ್ಲಿ ನಡೆದಿದೆ. ರಾಯಚೋಟಿ ಡಿಎಸ್ಪಿ ಕೃಷ್ಣಮೋಹನ್ ಸಾವಿಗೆ ಕಾರಣ ಅತಿಯಾದ ಮದ್ಯಪಾನ ಎಂದು ಹೇಳಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಆರು ಸ್ನೇಹಿತರು ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯ ಸಮಯದಲ್ಲಿ, ಮಣಿಕುಮಾರ್ (34) ಮತ್ತು ಪುಷ್ಪರಾಜ್ (26) ಎಂಬ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳು ಪರಸ್ಪರ ಪೈಪೋಟಿ ನಡೆಸಿ ಮದ್ಯಪಾನ ಮಾಡಿದ್ದರು. ಕಳೆದ ಶನಿವಾರ ಮಧ್ಯಾಹ್ನ…
-

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಮಂಗಳೂರು: ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಯುವಕನೊಬ್ಬನನ್ನು ಬಂಧಿಸಿ ಎಂಡಿಎಮ್ಎ (MDMA) ಮಾದಕವಸ್ತು ಹಾಗೂ ಬೈಕ್ ವಶಪಡಿಸಿಕೊಂಡಿರುವ ಘಟನೆ ಜನವರಿ 17, 2026ರಂದು ನಡೆದಿದೆ. ಬಂಧಿತ ಆರೋಪಿಯನ್ನು ಜೂಡ್ ಮಾಥ್ಯೂ (20) ಎಂದು ಗುರುತಿಸಲಾಗಿದ್ದು, ಆತನು ಮನೋಜ್ ಜೊಸೆಫ್ ಅವರ ಪುತ್ರ. ಆರೋಪಿಯು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ, ಚುನಯಮಕ್ಕಿಲ್ ಹೌಸ್ ವಾಸಿಯಾಗಿದ್ದಾನೆ. ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಮಂಗಳೂರು ಪೂರ್ವ ಪೊಲೀಸ್…
-

ಇನ್ಮುಂದೆ ಮರ್ಯಾದೆ ಹತ್ಯೆ ನಡೆದ್ರೆ 10 ವರ್ಷ ಜೈಲು, 3ಲಕ್ಷ ದಂಡ ಫಿಕ್ಸ್ : ಹೊಸ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ
ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಹೆತ್ತ ಮಗಳನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯದಲ್ಲಿ ಮರ್ಯಾದಾ ಹತ್ಯೆ ಹಾಗೂ ಸಂಬಂಧಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಕಾನೂನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಾನ್ಯ ಎಂಬ ಯುವತಿಯು ಪರಿಶಿಷ್ಟ ಜಾತಿಯ ಹುಡುಗನನ್ನು ಮದುವೆಯಾದ ಕಾರಣ ಆಕೆಯ ತಂದೆ ಮತ್ತು ಸಂಬಂಧಿಕರು ಭೀಕರವಾಗಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಮಂದಿ…
-

ಲಂಚ ಸ್ವೀಕರಿಸುತ್ತಿದ್ದ ವೇಳೆ ಎಫ್ ಡಿಎ ಲೋಕಾಯುಕ್ತ ಬಲೆಗೆ
ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಘಟನೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದಿದೆ. ಬಂಧಿತನನ್ನು ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಎಂದು ಗುರುತಿಸಲಾಗಿದೆ. ಮಾಹಿತಿಯಂತೆ, ತಹಶೀಲ್ದಾರ್ ಅವರು ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಆದೇಶ ಪ್ರತಿ ನೀಡಲು ಫಲಾನುಭವಿಗಳಿಂದ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ನೀಡುವಂತೆ ನಿರಂತರವಾಗಿ ಒತ್ತಾಯಿಸಿದ್ದರಿಂದ ಕಿಶನ್ ರಾಠೋಡ್ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.…
-

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕೆಲವು ಪೊಲೀಸ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಆದರೆ 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆಗೆ ವಾರ್ಷಿಕ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಆಗಿದ್ದು ಇದು ಸರ್ಕಾರಕ್ಕೆ ಮಾತ್ರವಲ್ಲ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರಾಗಿದೆ ರಾಯಚೂರಿನ ಕವಿತಾಳ ಠಾಣೆ ದೇಶದಲ್ಲಿಯೇ ಮೂರನೇ ಸ್ಥಾನ ಪಡೆದುಕೊಂಡಿದೆ. ಪೊಲೀಸ ಅಧಿಕಾರಿಗಳಿಗೆ ಗೊತ್ತಾಗದೆ ಕ್ರೈಂ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











