Author: News Editor
-

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ
ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್ಸೈಕಲ್ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ…
-

ಮಂಗಳೂರು: ತಂಗಿ ಆತ್ಮಹತ್ಯೆ ದುರಂತ ಮಾಸುವ ಮುನ್ನವೇ ಅಣ್ಣ ಶವವಾಗಿ ಪತ್ತೆ!! ಏನಿದು ದುರಂತ ಈ ಸುದ್ದಿ ಓದಿ
ಮಂಗಳೂರು : ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ. ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ದುರ್ದೈವಿ. ಕಳೆದ ಜೂನ್ ತಿಂಗಳಿನಲ್ಲಿ ಪಾಲಾದ ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್…
-

‘SIR’ ಪ್ರಕ್ರಿಯೆ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ ವೋಟರ್ ಐಡಿ ಡಿಲೀಟ್
ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್ಐಆರ್ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಸ್ಯಾಂಡಲ್ವುಡ್ ಹಾಗೂ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ರದ್ದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯ ನೆಪದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 65 ಲಕ್ಷ ಜನರ ಮತದಾರರ ಹಕ್ಕನ್ನು…
-

ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್ಗೇಟ್ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು- ಸುಮಾರು ₹7 ಲಕ್ಷ ವಂಚನೆ ಯತ್ನ!!
ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಬ್ಬರ್ ಮರ ತುಂಬಿದ್ದ ಲಾರಿಯನ್ನು ಪಡುಬಿದ್ರೆ ಟೋಲ್ಗೇಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮುದ್ರಾಡಿಯ ಸುಜಾತ ಶೆಟ್ಟಿ, ವಿಜೇಂದ್ರ ಶೆಟ್ಟಿ ಅವರ ಮನೆ, ಮುದ್ರಾಡಿಯ ಆಶಾ ಆಚಾರ್ ಅವರ ಮನೆ ಹಾಗೂ ಮುನಿಯಾಲಿನ ಸೀಜು ಎಂಬವರ ಜಾಗದಲ್ಲಿದ್ದ ರಬ್ಬರ್…
-

ನದಿಗೆ ರಾಸಾಯನಿಕ ತ್ಯಾಜ್ಯ ಬಿಟ್ಟವರಿಗೆ ಬಿಗ್ ಶಾಕ್: ಕೈಗಾರಿಕೆ ಮುಚ್ಚಲು ಸೂಚನೆ
ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲೆ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H ಇಂಡಸ್ಟ್ರೀಸ್, ಮೆ. ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ. ಹಿಮಾಲಯ ಕೈಗಾರಿಕೆಗಳಿಗೆ ತತ್…
-

ದ.ಕ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿ ಹೆಸರು: ಮುಖ್ಯ ಕಾರ್ಯದರ್ಶಿಗೆ ದೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಪ್ರದರ್ಶಿಸಲಾಗಿದ್ದು, ಇದಕ್ಕೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ. ಆದರೆ ಇಲ್ಲಿ ಸಂಗಾತಿಯ ಹೆಸರು ಸೇರಿಸಿರುವುದು…
-

ಉಡುಪಿ: ಸಾಯಿರಾಜ್ ಸೊಸೈಟಿಯ CEO ನೇಣು ಬಿಗಿದು ಆತ್ಮಹತ್ಯೆ..!!
ಉಡುಪಿಯ ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ತಾವು ವಾಸವಿದ್ದ ಅಂಬಲಪಾಡಿ ಸಮೀಪದ ಫ್ಲಾಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.
-

ರಾಜ್ಯದ ಎಲ್ಲ ಹೋಟೆಲ್ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್
ರಾಜ್ಯದ ಹೋಟೆಲ್ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ. ಹೋಟೆಲ್ಗಳ ಅಡುಗೆ ಮನೆಯಲ್ಲಿ ಆಹಾರ ತಯಾರಿಸುವ ವಿಧಾನ ಮತ್ತು ಅಲ್ಲಿನ ನೈರ್ಮಲ್ಯವನ್ನು ಗ್ರಾಹಕರೇ ನೇರವಾಗಿ ವೀಕ್ಷಿಸುವಂತೆ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಹಕರಿಗೆ ಪೂರೈಸಲಾಗುವ ಆಹಾರ ಹೇಗೆ ಸಿದ್ಧವಾಗುತ್ತಿದೆ ಮತ್ತು ಅಲ್ಲಿ ನೈರ್ಮಲ್ಯ ಪಾಲನೆಯಾಗುತ್ತಿದೆಯೇ ಎಂಬ ಸಂಪೂರ್ಣ ಮಾಹಿತಿ…
-

ಹೋಟೆಲ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ವಿಚಾರ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಯುಟಿ ಖಾದರ್
ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಯು ಟಿ ಖಾದರ್ ಮಾತನಾಡಿ, ತಪಾಸಣೆ ನಮ್ಮ ಜವಾಬ್ದಾರಿ ಅದು ಮುಂದುವರಿಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳಷ್ಟು ಕಡೆ ದಾಳಿ ಮಾಡಿ ಸ್ಯಾಂಪಲ್ಸ್ ಗಳನ್ನು ಪಡೆಯಲಾಗಿದೆ. ಯಾವುದೇ ಪ್ರದೇಶಕ್ಕೆ ಈ ದಾಳಿಯನ್ನು ಸೀಮಿತ…
-

ಹೋಟೆಲ್ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ
ಬೆಂಗಳೂರಿನ ಪ್ರಮುಖ ನಕ್ಷತ್ರ (ಸ್ಟಾರ್) ಹೋಟೆಲ್ಗಳ ಅಡುಗೆ ಮನೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ದಿಢೀರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. “ಹೋಟೆಲ್ ಎಷ್ಟೇ ದೊಡ್ಡದಿದ್ದರೂ ಅಥವಾ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಕಾನೂನು ಎಲ್ಲರಿಗೂ ಒಂದೇ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡಿದರೆ ಉದ್ಯಮ ಪರವಾನಗಿ ರದ್ದುಪಡಿಸಿ ಜೈಲಿಗೆ ಕಳುಹಿಸುವುದು ಗ್ಯಾರಂಟಿ” ಎಂದು ಅವರು ಎಚ್ಚರಿಸಿದ್ದಾರೆ. ದಾಳಿಯ ಹಿನ್ನೆಲೆ ಮತ್ತು ಕಂಡುಬಂದ ಲೋಪಗಳು ಆಹಾರ ಸುರಕ್ಷತಾ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











