Author: News Editor
-

ಮಂಗಳೂರು: ಕಾಲೇಜಿನ ಕ್ಯಾಂಪಸ್ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ…
-

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್!!
ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ. 2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆತ ತಲೆಮರೆಸಿಕೊಂಡಿದ್ದ, ಬಂಧನದಿಂದ ತಪ್ಪಿಸಿಕೊಂಡಿದ್ದ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾಗಿದ್ದ ಮತ್ತು ಪತ್ತೆಯಾಗದಂತೆ ವಿಳಾಸ ಬದಲಾಯಿಸಿದ್ದ. ಆತನ ವಿರುದ್ಧ ನಾಪತ್ತೆ ಆರೋಪಪಟ್ಟಿ ಕೂಡ…
-

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್- FIR ದಾಖಲು
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ…
-

ಬೆಳ್ತಂಗಡಿ : ರಿಯಾಜ್ ಪರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ..!!
ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ…
-

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ..! ವಾಹನ ವಶ, ಆರೋಪಿಗಳು ಅರೆಸ್ಟ್
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನ ಮತ್ತು ಮರದ ಮೌಲ್ಯ ಅಂದಾಜು 10 ಲಕ್ಷ ರೂಪಾಯಿ ಅಗಿರುತ್ತದೆ. ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ರೋಹಿತ್.ಎಸ್(20) ಎಂಬಾತನ ವಿರುದ್ಧ ಪ್ರಕರಣ…
-

ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ
ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ್ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಎರಡು…
-

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ- ಭ್ರಷ್ಟಾಚಾರಿ ತುಳಸಿದಾಸ್ ನನ್ನು ವರ್ಗಾಯಿಸಿ ಸ್ಥಳೀಯರ ಪಟ್ಟು
ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಉಳ್ಳಾಲ ನರಸಭೆಯಲ್ಲಿ ಜೆ.ಇ…
-

ಉಳ್ಳಾಲ ಪೌರಾಯುಕ್ತ ಸಂತೋಷ್ ಉಡುಪಿಗೆ ವರ್ಗಾವಣೆ..!!
ಉಳ್ಳಾಲ: ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ನಗರಸಭೆಯ ಆಡಳಿತದಲ್ಲಿ ಕಡತಗಳನ್ನು ಸಮಗ್ರವಾಗಿ…
-

ಬೆಳ್ತಂಗಡಿಯಲ್ಲಿ ಮಾದಕ ವಸ್ತು ಸೇವನೆ; ಓರ್ವನ ವಿರುದ್ಧ ಎನ್ಡಿಪಿಎಸ್ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರ ಸಂಜೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ಅವರು ಸಿಬ್ಬಂದಿಯೊಂದಿಗೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಪ್ರದೇಶದಲ್ಲಿ ನಿಯಮಿತ ಗಸ್ತು ನಡೆಸುತ್ತಿದ್ದರು.…
-

5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!
ಜಮೀನಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. 10 ಲಕ್ಷ ರೂಪಾಯಿಗೆ ಬೇಡಿಕೆ! ಹೆಚ್.ಡಿ. ಕೋಟೆ ತಾಲೂಕಿನಲ್ಲಿರುವ ನಾಲ್ಕೂವರೆ ಎಕರೆ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಮೇಲ್ಮನವಿಯನ್ನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











