Author: News Editor

  • ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆಗೊಳಿಸಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
    ,

    ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆಗೊಳಿಸಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

    ನವದೆಹಲಿ: ನೀಟ್ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿ ರಾಜ್ಯದೆಲ್ಲೆಡೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಸುಪ್ರೀಂ ವಿದ್ಯಾರ್ಥಿಗಳನ್ನು ದಂಡನಾತ್ಮಕ ಕ್ರಮದಿಂದ ರಕ್ಷಿಸಿದೆ. ಮಂಗಳವಾರ, ಸುಪ್ರೀಂ ಕೋರ್ಟ್ ಕ್ರಿಮಿನಲ್ ದಾಖಲೆಗಳಿಲ್ಲದವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ…

    Continue Reading

  • ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆಗೆ ಬಿದ್ದು, ಮಹಿಳೆಗೆ 1.75 ಕೋಟಿ ಪಂಗನಾಮ..!!
    ,

    ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆಗೆ ಬಿದ್ದು, ಮಹಿಳೆಗೆ 1.75 ಕೋಟಿ ಪಂಗನಾಮ..!!

    ಸಾಮಾಜಿಕ ಜಾಲತಾಣಗಳಲ್ಲಿ ಅಜ್ಞಾತ ವ್ಯಕ್ತಿಗಳೊಂದಿಗೆ ಮುಖಾಮುಖಿಯಾಗದೆ ಬೆಳೆಸುವ ಆನ್‌ಲೈನ್ ಸ್ನೇಹ ಹಾಗೂ ದುಬಾರಿ ಉಡುಗೊರೆಗಳ ಆಸೆ ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಿಗಿಲು ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ. ಯಶವಂತಪುರದ ನಿವಾಸಿಯಾಗಿರುವ ಮಹಿಳೆಯೊಬ್ಬರು ದುಬಾರಿ ಸೀರೆ ಹಾಗೂ ವಜ್ರಾಭರಣಗಳ ಗಿಫ್ಟ್‌ನ ಮೋಹಕ್ಕೆ ಬಿದ್ದು, ಸೈಬರ್ ವಂಚಕರ ಜಾಲದಲ್ಲಿ ಸಿಲುಕಿ ಬರೋಬ್ಬರಿ 1.75 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಈ ಬೃಹತ್ ಆನ್‌ಲೈನ್ ವಂಚನೆಗೆ ಸಂಬಂಧಿಸಿದಂತೆ ಉತ್ತರ ವಿಭಾಗದ ಸೈಬರ್ ಕ್ರೈಂ (CEN) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

    Continue Reading

  • ಕೋಟ್ಯಾಂತರ ರೂ. ಮೌಲ್ಯದ ಡ್ರಗ್ಸ್ ಮಾರಾಟ ಪ್ರಕರಣ : 2 ಕಡೆ ED ದಾಳಿ
    ,

    ಕೋಟ್ಯಾಂತರ ರೂ. ಮೌಲ್ಯದ ಡ್ರಗ್ಸ್ ಮಾರಾಟ ಪ್ರಕರಣ : 2 ಕಡೆ ED ದಾಳಿ

     ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ನಗರದ ಎರಡು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ (NDPS) ಪ್ರಕರಣದ ಜಾಡು ಹಿಡಿದು ಹೊರಟಿರುವ ಅಧಿಕಾರಿಗಳು, ಅಕ್ರಮ ಹಣಕಾಸು ವಹಿವಾಟಿನ ಜಾಡನ್ನು ಪತ್ತೆಹಚ್ಚಲು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಜಂಟಿ ಕಾರ್ಯಾಚರಣೆಯ ಭಾಗವಾಗಿ ಹೈದರಾಬಾದ್‌ನ 7 ಪ್ರತ್ಯೇಕ ಸ್ಥಳಗಳ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿ,…

    Continue Reading

  • ಇನ್ಮುಂದೆ ಅಕ್ರಮ ಮರಳು ದಂಧೆಯಲ್ಲಿ ಸಿಕ್ಕಿಬಿದ್ರೆ ‘ಗೂಂಡಾ ಕೇಸ್’ ಫಿಕ್ಸ್.!
    ,

    ಇನ್ಮುಂದೆ ಅಕ್ರಮ ಮರಳು ದಂಧೆಯಲ್ಲಿ ಸಿಕ್ಕಿಬಿದ್ರೆ ‘ಗೂಂಡಾ ಕೇಸ್’ ಫಿಕ್ಸ್.!

    ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ…

    Continue Reading

  • ಮಂಗಳೂರು: ಗಂಗಾಧರ ಪಾಂಗಾಳ ಕೊಲೆ ಪ್ರಕರಣ- 12 ವರ್ಷಗಳ ಬಳಿಕ ಐತಿಹಾಸಿಕ ತೀರ್ಪು..!
    , ,

    ಮಂಗಳೂರು: ಗಂಗಾಧರ ಪಾಂಗಾಳ ಕೊಲೆ ಪ್ರಕರಣ- 12 ವರ್ಷಗಳ ಬಳಿಕ ಐತಿಹಾಸಿಕ ತೀರ್ಪು..!

    ಮಂಗಳೂರು: 2014ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಸಮೀಪ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿದಂತೆ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2014ರ ಮೇ 15ರಂದು ಗಂಗಾಧರ ಪಾಂಗಾಳ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ ಹಾಗೂ ಭಾಸ್ಕರ್ ಬೈಕಂಪಾಡಿ ಹಳೆ ದ್ವೇಷದ…

    Continue Reading

  • ಮೊಡಂಕಾಪು: ದೇವಸ್ಥಾನ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ
    , ,

    ಮೊಡಂಕಾಪು: ದೇವಸ್ಥಾನ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ

    ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಸ್ತುಗಳಲ್ಲಿ ಹಳೆಯ ಕೊಪ್ಪರಿಗೆ, ಆರು ದೀಪಗಳು,…

    Continue Reading

  • ಟೈಮಿಂಗ್ಸ್ ವಿಚಾರಕ್ಕೆ ಚಾಲಕರ ಕಿರಿಕ್; 15 ನಿಮಿಷ ಸಂಚಾರ ಅಸ್ತವ್ಯಸ್ತ,ಬಸ್‌ಗಳು ಪೊಲೀಸ್ ವಶಕ್ಕೆ
    , ,

    ಟೈಮಿಂಗ್ಸ್ ವಿಚಾರಕ್ಕೆ ಚಾಲಕರ ಕಿರಿಕ್; 15 ನಿಮಿಷ ಸಂಚಾರ ಅಸ್ತವ್ಯಸ್ತ,ಬಸ್‌ಗಳು ಪೊಲೀಸ್ ವಶಕ್ಕೆ

    ಕಾಪು : ಉಡುಪಿ ಮತ್ತು ಮಂಗಳೂರು ನಡುವೆ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳ ನಡುವಿನ ಟೈಮಿಂಗ್ಸ್ ಸ್ಪರ್ಧೆ ಮತ್ತೊಮ್ಮೆ ಮಿತಿಮೀರಿದ್ದು, ತುಂಬಿದ ಪ್ರಯಾಣಿಕರಿದ್ದಾಗಲೇ ಬಸ್‌ಗಳನ್ನು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ರಸ್ತೆ ತಡೆದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಭೀಕರ ಘಟನೆ ಸೋಮವಾರ (ಜುಲೈ 27) ಬೆಳಿಗ್ಗೆ ಕಾಪು ಬಸ್ ನಿಲ್ದಾಣದ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ. ಉಡುಪಿಯಿಂದ ಮಂಗಳೂರಿಗೆ ಹೊರಟಿದ್ದ ‘ಸಂದೇಶ್ ಟ್ರಾವೆಲ್ಸ್’ ಹಾಗೂ ‘ಆನಂದ್ ಟ್ರಾವೆಲ್ಸ್’ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಟೈಮಿಂಗ್ಸ್ ವಿಚಾರವಾಗಿ ಉದ್ಯಾವರದಿಂದಲೇ ಜಗಳ ಆರಂಭವಾಗಿತ್ತು.…

    Continue Reading

  • ಶಾಲಾ ವಾಹನದ ಫಿಟ್ನೆಸ್, ವಿಮೆ ಇಲ್ಲದ ಆರೋಪ: ಕಠಿಣ ತನಿಖೆಗೆ SDPI ಒತ್ತಾಯ
    , ,

    ಶಾಲಾ ವಾಹನದ ಫಿಟ್ನೆಸ್, ವಿಮೆ ಇಲ್ಲದ ಆರೋಪ: ಕಠಿಣ ತನಿಖೆಗೆ SDPI ಒತ್ತಾಯ

    ಬಂಟ್ವಾಳ: ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು 6 ವರ್ಷದ ಎಲ್ ಕೆ ಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಹಾಗೂ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರಂತ ಅತ್ಯಂತ ಆಘಾತಕಾರಿ ಮತ್ತು ದುಃಖಕರ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿಯ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಕ್ಕೆ ಅಗತ್ಯವಿರುವ ಫಿಟ್ನೆಸ್ ಪ್ರಮಾಣಪತ್ರ ಮತ್ತು ವಿಮೆ ಚಾಲ್ತಿಯಲ್ಲಿರಲಿಲ್ಲ ಎಂಬ ಮಾಹಿತಿ…

    Continue Reading

  • ಬಂಟ್ವಾಳದಲ್ಲಿ ತಡರಾತ್ರಿ ದರೋಡೆ; ವೃದ್ಧನ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಳವು

    ಬಂಟ್ವಾಳದಲ್ಲಿ ತಡರಾತ್ರಿ ದರೋಡೆ; ವೃದ್ಧನ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಳವು

    ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ ಕಳ್ಳತನ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ. ಇಡ್ಕಿದು ಗ್ರಾಮದ ನಿವಾಸಿ ಹಾಗೂ ನಿವೃತ್ತ ವೈದ್ಯರಾದ ಕೆ. ಸೂರ್ಯನಾರಾಯಣ (79) ಅವರು ಮನೆಯಲ್ಲಿ ಮಲಗಿದ್ದ ವೇಳೆ, ತಡರಾತ್ರಿ ಅಪರಿಚಿತರು ಮನೆಯೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ.ಶಬ್ದ ಕೇಳಿ ಎಚ್ಚರಗೊಂಡ ಸೂರ್ಯನಾರಾಯಣ ಅವರು ಮನೆಯೊಳಗೆ ಇಬ್ಬರು ಕಳ್ಳರು…

    Continue Reading

  • ‘ಪೆನ್ಷನ್ ಕಾರ್ಡ್’ ಆಮಿಷ; ಕಾರ್ಕಳದ ಹಿರಿಯರಿಗೆ ₹3.73 ಲಕ್ಷ ವಂಚನೆ
    , ,

    ‘ಪೆನ್ಷನ್ ಕಾರ್ಡ್’ ಆಮಿಷ; ಕಾರ್ಕಳದ ಹಿರಿಯರಿಗೆ ₹3.73 ಲಕ್ಷ ವಂಚನೆ

    ಕಾರ್ಕಳ : ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಒಂದನ್ನು ನಂಬಿ ನಿವೃತ್ತ ಪೆನ್ಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಕಾರ್ಕಳದ ಹಿರಿಯ ನಾಗರಿಕರೊಬ್ಬರು ₹3,73,000 ಹಣ ಕಳೆದುಕೊಂಡು ಸೈಬರ್ ವಂಚನೆಗೊಳಗಾಗಿದ್ದಾರೆ. ದಿನಾಂಕ 13-07-2026 ರಂದು ಸಂಜೆ 5:30 ರ ಸುಮಾರಿಗೆ ದೂರುದಾರರ ಫೇಸ್‌ಬುಕ್ ಖಾತೆಗೆ ‘ಕೆನರಾ ರಿಟೈರ್ಡ್ ಪೆನ್ಸನ್ ಕಾರ್ಡ್’ ಹೆಸರಿನ ಖಾತೆಯಿಂದ ಲಿಂಕ್ ಬಂದಿತ್ತು. ಅದನ್ನು ತೆರೆದ ಅವರು ಕಾರ್ಡ್‌ಗಾಗಿ ಅಪ್ಲೈ ಮಾಡಿದ್ದರು. ತಕ್ಷಣವೇ +91 6744250286, 8655389531 ಸಂಖ್ಯೆಗಳಿಂದ ಕರೆ ಮಾಡಿದ ವ್ಯಕ್ತಿ, ತಾನು ‘ಬ್ಯಾಂಕಿನ ಅಸಿಸ್ಟೆಂಟ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed