Author: News Editor
-

ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್.!! ವ್ಯಕ್ತಿ ಅರೆಸ್ಟ್
ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಪ್ರಕರಣದ ವಿವರ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ. ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.…
-

ಪುತ್ತೂರು ಬಳಿ ಟಾಟಾ ಏಸ್ ಪಲ್ಟಿ; 11 ವರ್ಷದ ಬಾಲಕನಿಗೆ ಗಾಯ
ಪುತ್ತೂರು: ಜುಲೈ 23 ರಂದು ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವಾಹನದ ಚಕ್ರಗಳು ರಸ್ತೆಯಂಚಿಗೆ ಇಳಿದು ಮಗುಚಿ ಬಿತ್ತು ಎಂದು ವರದಿಯಾಗಿದೆ.ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಮಜೀದ್ ಅವರ ಪುತ್ರ ಮೊಹಮ್ಮದ್ ಅಮೀನ್ (11) ಅಪಘಾತದಲ್ಲಿ ಗಾಯಗೊಂಡಿದ್ದಾರೆ.ಸ್ಥಳೀಯರ ಪ್ರಕಾರ, ಸ್ಥಳದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗಳು ಇತ್ತೀಚೆಗೆ ಪೂರ್ಣಗೊಂಡಿವೆ,…
-

ಬೆಳ್ತಂಗಡಿ: ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ನಗದು ದೋಚಿದ ಆರೋಪ!! ಇಬ್ಬರ ವಿರುದ್ಧ FIR
ಬೆಳ್ತಂಗಡಿ: ಶಿಬಾಜೆಯಲ್ಲಿರುವ ಮನೆಯೊಂದಕ್ಕೆ ಬಂದು, ಛಾವಣಿಯ ಹೆಂಚುಗಳಿಗೆ ಕಲ್ಲು ಎಸೆದು, ನಿವಾಸಿಗಳನ್ನು ನಿಂದಿಸಿ, ಜೀವ ಬೆದರಿಕೆ ಹಾಕಿ, ಹಣ ದೋಚಿದ್ದಾರೆ ಎಂಬ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಶಿಬಾಜೆ ನಿವಾಸಿ ಎಲಿಯಮ್ಮ ಥಾಮಸ್ (60) ದೂರು ನೀಡಿದ್ದವರು. ಆಕೆಯ ದೂರಿನ ಪ್ರಕಾರ, ಜುಲೈ 10 ರ ರಾತ್ರಿ ಈ ಘಟನೆ ನಡೆದಿದ್ದು, ಆಕೆ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ನಿವಾಸದಲ್ಲಿದ್ದಾಗ. ಮನೋಜ್ ಎನ್.ಕೆ ಮತ್ತು ರಾಜು ಎಂದು ಗುರುತಿಸಲಾದ ಆರೋಪಿಗಳು ಮನೆಯ…
-

ಹೆಣ್ಣು ಮಗುವೆಂದು 13 ದಿನದ ಕಂದಮ್ಮನನ್ನು ಸಂಪ್ಗೆ ಎಸೆದು ಕೊಂದ ರಾಕ್ಷಸ ತಂದೆ
ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಹುಡುಕಾಡುವ ನಾಟಕವಾಡಿದ್ದ ಆರೋಪಿ ಸ್ಥಳೀಯ ನಿವಾಸಿಗಳಾದ ಇಮ್ರಾನ್ ಹಾಗೂ ಮುಸ್ಕಾನ್ ದಂಪತಿಗೆ ಕೇವಲ 13 ದಿನಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಆದರೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ತಂದೆ ಇಮ್ರಾನ್, ಬುಧವಾರ (ಜುಲೈ 22) ತಡರಾತ್ರಿ ಕುಟುಂಬಸ್ಥರೆಲ್ಲರೂ ನಿದ್ರಿಸುತ್ತಿದ್ದ ವೇಳೆ ರಾಕ್ಷಸ ಕೃತ್ಯ…
-

ಮಂಗಳೂರು: ಪಾಂಡೇಶ್ವರ ಅಮೃತ ನಗರ ಪರಿಸರದಲ್ಲಿ ಅನಧಿಕೃತ ಪಿ.ಜಿ ಮತ್ತು ಸರ್ವಿಸ್ ಸ್ಟೇಷನ್..!! ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಮಂಗಳೂರು: ನಗರದ ಪಾಂಡೇಶ್ವರ ಅಮೃತ ನಗರ ಎಂಬಲ್ಲಿ ವಾಣಿಜ್ಯ ಕಟ್ಟಡವನ್ನು ಅನಧಿಕೃತ ಪಿ.ಜಿಯಾಗಿ ಬಳಕೆಯಾಗಿದ್ದು ಸುಮಾರು 40 ರಿಂದ 50 ಮಂದಿ ವಾಸ್ತವ್ಯ ಇದ್ದಾರೆ ಎಂದು ಮಾಹಿತಿ ಇದೆ.ಸಾರ್ವಜನಿಕರ ಆರೋಪ ಪ್ರಕಾರ ಈ ಕಟ್ಟಡವನ್ನು ಅಕ್ರಮವಾಗಿ ಮತ್ತು ಯಾವುದೇ ಪಿ.ಜಿ ಪರವಾನಿಗೆ ಇಲ್ಲದೇ ನಡೆಸಲಾಗುತ್ತಿದೆ. ಮತ್ತು ಇಲ್ಲಿ ನೀರಿನ ಅಭಾವ ಇರುವ ಕಾರಣ ಈ ಪಿ.ಜಿಗೆ ಅತೀ ಹೆಚ್ಚು ನೀರು ಬಳಕೆಯಾಗುತ್ತಿದೆ. ಮತ್ತು ಸ್ವಚ್ಚತಾ ದೃಷ್ಟಿಯಿಂದಲ್ಲೋ ಇಲ್ಲಿನ ಪರಿಸರ ಮಾಲಿನ್ಯವಾಗಿದ್ದು , ಕಾನೂನು ಪ್ರಕಾರ ಪಿ ಜಿ…
-

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಜೂನ್ 13ರಂದು ಕೆನರಾ ಬ್ಯಾಂಕ್ನ ಮೇಲ್ಪಾವಣಿಯನ್ನು ಕೊರೆದು ಒಳನುಗ್ಗಿದ ದುಷ್ಕರ್ಮಿಗಳು ಬ್ಯಾಂಕ್ನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ…
-

AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!
ಸೂರತ್ : ನೀವು ನಿಮ್ಮ ಮೊಬೈಲ್ನಲ್ಲಿ ಬಳಸುತ್ತಿರುವುದು ಅಸಲಿ ಬ್ಯಾಂಕಿಂಗ್ ಆ್ಯಪ್ ಗಳೇ? ಒಮ್ಮೆ ತಪಾಸಣೆ ಮಾಡಿಕೊಳ್ಳಿ! ಕೃತಕ ಬುದ್ಧಿಮತ್ತೆ (AI) ಮತ್ತು ಟೆಲಿಗ್ರಾಂ ಬಳಸಿ ಬರೋಬ್ಬರಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ಗಳನ್ನು ತಯಾರಿಸಿ, ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ 17 ವರ್ಷದ ಯುವಕನನ್ನು ಸೂರತ್ ಸೈಬರ್ ಕ್ರೈಮ್ ಪೋಲಿಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದ 11ನೇ ತರಗತಿ ಡ್ರಾಪೌಟ್ ವಿದ್ಯಾರ್ಥಿ ರೋಹಿತ್ ವೀರೇಂದ್ರಸಿಂಗ್ ಶಾಕ್ಯ ಬಂಧಿತ ಆರೋಪಿ. ಈತ ತಯಾರಿಸಿದ ನಕಲಿ ಆ್ಯಪ್…
-

ಸೌಜನ್ಯ ಅತ್ಯಾಚಾರ-ಕೊಲೆ ಕೇಸ್: CBIಗೆ ಸುಪ್ರೀಂ ಕೋರ್ಟ್ ತರಾಟೆ, ಮರುತನಿಖೆ ಆದೇಶ ಕಾಯ್ದಿರಿಸಿದ ಪೀಠ
ನವದೆಹಲಿ/ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳದ (CBI) ಅಪೂರ್ಣ ತನಿಖೆಯ ಶೈಲಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಆಕ್ಷೇಪಿಸಿದ್ದು, ಸಿಬಿಐಗೆ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ದೇಶದ ಅತ್ಯುನ್ನತ ನ್ಯಾಯಾಲಯ, ಯಾವ ರೀತಿ ಮರುತನಿಖೆ ನಡೆಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ಪ್ರಕರಣದ ಸುದೀರ್ಘ ವಿಚಾರಣೆ…
-

ದಂಪತಿ ಮಧ್ಯೆ ಕಲಹವಿದ್ದರೂ ತಂದೆ, ಮಗಳ ಉನ್ನತ ಶಿಕ್ಷಣ ವೆಚ್ಚ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ
ಪತಿ ಹಾಗೂ ಪತ್ನಿ ನಡುವೆ ಕೌಟುಂಬಿಕ ಭಿನ್ನಾಭಿಪ್ರಾಯ ಅಥವಾ ಕಲಹಗಳಿದ್ದ ಮಾತ್ರಕ್ಕೆ, ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರಾಪ್ತ ವಯಸ್ಸಿನ ಮಗಳ ವ್ಯಾಸಂಗದ ವೆಚ್ಚವನ್ನು ಭರಿಸಲು ತಂದೆ ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಮಕ್ಕಳಿಗೆ 18 ವರ್ಷ ತುಂಬಿ ಪ್ರಾಪ್ತ ವಯಸ್ಕರಾದ ತಕ್ಷಣವೇ ಅವರಿಗೆ ಮೂಲಭೂತ ಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಒದಗಿಸುವ ಹೆತ್ತವರ ಬಾಧ್ಯತೆ ಹಾಗೂ ನೈತಿಕ ಕರ್ತವ್ಯ ಮುಗಿಯುವುದಿಲ್ಲ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ. ಸ್ನಾತಕೋತ್ತರ ವೈದ್ಯಕೀಯ…
-

ಇನ್ಮುಂದೆ ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಸಚಿವ ಯು.ಟಿ.ಖಾದರ್ ಘೋಷಣೆ
ರಾಜ್ಯದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಕ್ಕೀಡಾಗುವ ಅಪರಿಚಿತ ವ್ಯಕ್ತಿಗಳು ಸೇರಿದಂತೆ ಪ್ರತಿಯೊಬ್ಬ ಸಂತ್ರಸ್ತನಿಗೂ ತಕ್ಷಣ ಉಚಿತ ತುರ್ತು ವೈದ್ಯಕೀಯ ನೆರವು ನೀಡುವ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಸಚಿವ ಯು.ಟಿ. ಖಾದರ್ ಪ್ರಕಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜೀವ ರಕ್ಷಣೆಗೆ ಆದ್ಯತೆ ನೀಡುವ ಈ ನೂತನ ಯೋಜನೆಯ ರೂಪುರೇಷೆಗಳನ್ನು ಹಂಚಿಕೊಂಡರು. ಮೊದಲ 7 ದಿನ ₹2.5 ಲಕ್ಷದವರೆಗೆ ಸಂಪೂರ್ಣ ಉಚಿತ ಚಿಕಿತ್ಸೆ ಈ ನೂತನ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











