Author: News Editor

  • ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಸಿನಿಮಾ ಶೈಲಿಯಲ್ಲಿ ಪರಾರಿ..!!
    ,

    ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಸಿನಿಮಾ ಶೈಲಿಯಲ್ಲಿ ಪರಾರಿ..!!

    ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಬೆನ್ನಲ್ಲೇ, ಆರೋಪಿಯೊಬ್ಬನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central Jail) ಕರೆದೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಆಡುಗೋಡಿ ಗ್ರಾಮದ ನಿವಾಸಿಯಾದ ವೆಂಕಟೇಶ್ (36) ಎಂಬಾತನೇ ಸಿಬ್ಬಂದಿ ವಶದಿಂದ ಎಸ್ಕೇಪ್ ಆಗಿರುವ ಆರೋಪಿಯಾಗಿದ್ದಾನೆ. ಅಕ್ರಮ ನಾಟಾ ಸಾಗಾಟದ ಆರೋಪಿ ವೆಂಕಟೇಶ್ ಅರಣ್ಯ ಇಲಾಖೆಯ ಅಕ್ರಮ ನಾಟಾ (ಲಾಟು) ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

    Continue Reading

  • ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!
    , ,

    ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!

    ಬಂಟ್ವಾಳ : ಬಿಸಿ ರೋಡ್‌ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹತ್ಯೆ ನಡೆಸಿ ಪರಾರಿಯಾಗಿದ ಘಟನೆ ನಡೆದಿದೆ ಮೃತ ಯುವತಿಯನ್ನು ಕಕ್ಕೆಪದವು ಪದವು ನಿವಾಸಿ ಬಾಳಪ್ಪ ಗೌಡರ ಮಗಳು ಲಾವಣ್ಯ ಎಂದು ತಿಳಿದು ಬಂದಿದೆ.ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಳಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾಳೆಂದು ತಿಳಿದುಬಂದಿದೆ. ಮಾಹಿತಿ…

    Continue Reading

  • ಉಪ್ಪಿನಂಗಡಿ: ಖೋಟಾನೋಟು ತಯಾರಕಾ ಜಾಲ ಪತ್ತೆ..!! ಏಳು ಮಂದಿ ಅರೆಸ್ಟ್
    , ,

    ಉಪ್ಪಿನಂಗಡಿ: ಖೋಟಾನೋಟು ತಯಾರಕಾ ಜಾಲ ಪತ್ತೆ..!! ಏಳು ಮಂದಿ ಅರೆಸ್ಟ್

    ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ರಾಹಿಂ (60), ಶರೀಪ್(51), ಸಂದೀಪ ಪುಂಡಲಿಕ ಶೋಳಂಬಿ(30), ಮಹಮ್ಮದ್ ನಬಾಸ್(37), ಸಲ್ಮಾನ್ ಫಾರೀಸ್(25), ಸಿರಾಜುದ್ದೀನ್(34) ಹಾಗೂ ಇರ್ಷಾದ್(31) ಅವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ…

    Continue Reading

  • ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ- 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರ ಬಂಧನ
    , ,

    ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ- 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರ ಬಂಧನ

    ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ  ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧನ ಮಾಡಿ ಅವರಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ…

    Continue Reading

  • ಇನ್ಮುಂದೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರಿಗೆ ಬಿಗ್ ಶಾಕ್: 1 ವರ್ಷ ಜೈಲು ಶಿಕ್ಷೆ ಫಿಕ್ಸ್!
    ,

    ಇನ್ಮುಂದೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರಿಗೆ ಬಿಗ್ ಶಾಕ್: 1 ವರ್ಷ ಜೈಲು ಶಿಕ್ಷೆ ಫಿಕ್ಸ್!

    ಸಾಮಾಜಿಕ ಜಾಲತಾಣಗಳಲ್ಲಿ (Social Media) ಅಶ್ಲೀಲ ಹಾಗೂ ಅವಹೇಳನಕಾರಿ ಕಮೆಂಟ್‌ಗಳನ್ನು ಮಾಡುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದು, ‘ಕಮೆಂಟ್ ಶೂರರಿಗೆ’ ಬಿಸಿ ಮುಟ್ಟಿಸಲು ನೂತನ ಕಾಯ್ದೆಯೊಂದನ್ನು ಜಾರಿಗೆ ತರಲಾಗಿದೆ. 2024ರ ಜುಲೈ 1ರಿಂದ ಜಾರಿಗೆ ಬಂದಿರುವ ನೂತನ ಐಟಿ ಕಾಯ್ದೆಗಳನ್ವಯ (IT Act), ಇನ್ಮುಂದೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿ ಸಿಕ್ಕಿಬಿದ್ದರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ. ಈ ಹೊಸ ನಿಯಮದ ಪ್ರಕಾರ, ಸಾಮಾಜಿಕ ಜಾಲತಾಣಗಳಲ್ಲಿ…

    Continue Reading

  • ಟೈಮಿಂಗ್ಸ್ ಜಗಳಕ್ಕೆ ರಾಡ್ ಎತ್ತಿದ ನಿರ್ವಾಹಕ; ಉಪ್ಪಿನಂಗಡಿಯಲ್ಲಿ ಭೀಕರ ಗಲಾಟೆ
    , ,

    ಟೈಮಿಂಗ್ಸ್ ಜಗಳಕ್ಕೆ ರಾಡ್ ಎತ್ತಿದ ನಿರ್ವಾಹಕ; ಉಪ್ಪಿನಂಗಡಿಯಲ್ಲಿ ಭೀಕರ ಗಲಾಟೆ

    ಉಪ್ಪಿನಂಗಡಿ: ಖಾಸಗಿ ಬಸ್‌ಗಳ ನಡುವಿನ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್ಸಿನೊಳಗೇ ನುಗ್ಗಿದ ಮತ್ತೊಂದು ಬಸ್ ನ ನಿರ್ವಾಹಕನೊಬ್ಬ ಕಬ್ಬಿಣದ ರಾಡ್‌ನಿಂದ ಮತ್ತೊಬ್ಬ ನಿರ್ವಾಹಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದು, ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ನಿರ್ವಾಹಕರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮಂಗಳೂರು-ಉಪ್ಪಿನಂಗಡಿ ಮಾರ್ಗದ ‘ಅರಾಫಾ’ ಬಸ್ ನಿರ್ವಾಹಕ ನೌಶಾದ್ ಹಾಗೂ ‘ಲಕ್ಷ್ಮೀ’ ಬಸ್ ನಿರ್ವಾಹಕ ಖಲಂದರ ಯಾನೆ ಶಾಹೀದ್ ಪರಸ್ಪರ ಹಲ್ಲೆ ಮಾಡಿಕೊಂಡವರು . ಮಂಗಳವಾರ ಸಂಜೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ…

    Continue Reading

  • ನಾಯಿಯನ್ನು ಕೊಂದು ದರೋಡೆಗೆ ಯತ್ನಿಸಿದ ಪ್ರಕರಣ; 7 ಆರೋಪಿಗಳಿಗೆ ನ್ಯಾಯಾಲಯದಿಂದ ಖುಲಾಸೆ
    , ,

    ನಾಯಿಯನ್ನು ಕೊಂದು ದರೋಡೆಗೆ ಯತ್ನಿಸಿದ ಪ್ರಕರಣ; 7 ಆರೋಪಿಗಳಿಗೆ ನ್ಯಾಯಾಲಯದಿಂದ ಖುಲಾಸೆ

    ಬೆಳ್ತಂಗಡಿ ತಾಲ್ಲೂಕು ಕಲ್ಟಿಂಜ ಗ್ರಾಮದ ನಿಡಿಗಲ್ ಎಂಬಲ್ಲಿರುವ ಕೃಷಿ ಹಾಗೂ ಧರ್ಮಸ್ಥಳದ ದೇವಸ್ಥಾನದಲ್ಲಿ ರೆವೆನ್ಯೂ ವಿಭಾಗದ ವ್ಯವಸ್ಥಾಪಕರಾಗಿರುವ ಶುಭ ಚಂದ್ರರಾಜರವರ ಮನೆಗೆ ದರೋಡೆ ಮಾಡಲು ಬಂದು ಮನೆಯವರು ಎಚ್ಚರಗೊಂಡಾಗ ಅವರ ಮನೆಯ ನಾಯಿಯನ್ನು ಕೊಂದು ಹಾಕಿದ್ದ ಪ್ರಕರಣದಲ್ಲಿ ಆರೋಪಿಗಳಾದ ಪಿ. ಇರ್ಫಾನ್, ಚಿದಾನಂದ ಗೌಡ ಡಿ., ಮೊಹಮ್ಮದ್ ತೌಸೀಫ್, ಮೋಹನ, ನಿತಿನ್ ಕೋಟ್ಯಾನ್, ಮೊಹಮ್ಮದ್ ಆಶಿಕ್, ತೌಷಿರ್ @ ಪತ್ತೊಂಜಿ ತೌಷಿರ್‌ರವರುಗಳನ್ನು ಮಾನ್ಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದ ಸಾರಾಂಶ :…

    Continue Reading

  • ಬೆಳ್ತಂಗಡಿ: ಬುರುಡೆ ಪ್ರಕರಣ, ಕೋರ್ಟ್‌ಗೆ 7,005 ಪುಟಗಳ ಅಂತಿಮ ವರದಿ ಸಲ್ಲಿಸಿದ SIT!
    , ,

    ಬೆಳ್ತಂಗಡಿ: ಬುರುಡೆ ಪ್ರಕರಣ, ಕೋರ್ಟ್‌ಗೆ 7,005 ಪುಟಗಳ ಅಂತಿಮ ವರದಿ ಸಲ್ಲಿಸಿದ SIT!

    ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ದ (ಮೊಕದ್ದಮೆ ಸಂಖ್ಯೆ: 39/2025) ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (SIT), ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು ಹಸ್ತಾಂತರಿಸಿದೆ. 12 ಫೈಲ್‌ಗಳ ಬೃಹತ್ ತನಿಖಾ ವರದಿ ಸಲ್ಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗಿ,…

    Continue Reading

  • ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್‌ಲೈನ್ ಮೂಲಕ ಲೂಟಿ..!!
    , ,

    ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್‌ಲೈನ್ ಮೂಲಕ ಲೂಟಿ..!!

    ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್‌ವರ್ಕ್ ಅನ್ನು ಕೆಲ ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಿ (SIM Swap), ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ಸಾಲದ ರೂಪದಲ್ಲಿ ಒಟ್ಟು ₹ 23,98,138 ಹಣವನ್ನು ಆನ್‌ಲೈನ್ ಮೂಲಕ ಲೂಟಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ದೂರುದಾರಿಗೆ ಜುಲೈ…

    Continue Reading

  • ಬೆಳ್ತಂಗಡಿ: ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಗಂಭೀರ
    ,

    ಬೆಳ್ತಂಗಡಿ: ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಗಂಭೀರ

    ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಶಿಹಾಬ್ ಎಂಬವರ ಪುತ್ರಿ ಫಾತಿಮತ್ ಸಅದಿಯಾ(4) ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡ ಬಾಲಕಿ. ಮಾಹಿತಿಯ ಪ್ರಕಾರ ಫಾತಿಮತ್ ಸಅದಿಯಾ ಎಂದಿನಂತೆ ಮಂಗಳವಾರವೂ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed