Author: News Editor
-

ಮಂಗಳೂರು: ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿ ಅರೆಸ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ 66(C), 66(D)ಹಾಗೂ **ಭಾರತೀಯ ನ್ಯಾಯ ಸಂಹಿತೆ (BNS)**ಯ 126(2), 308(6), 318(4), 319(2) ಮತ್ತು 3(5) ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು 2026ರ…
-

ಬಂಟ್ವಾಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ..!! ಪೊಲೀಸರ ದಾಳಿ- ವಾಹನ, ಯಂತ್ರೋಪಕರಣಗಳ ವಶಕ್ಕೆ..!!
ಬಂಟ್ವಾಳ: ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 2ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಠಾಣಾ ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶಕ್ಕೆ ತೆರಳಿದ ವೇಳೆ, ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳ…
-

ಗೋವಾದಲ್ಲಿ ಉಡುಪಿಯ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣ: ಯುವತಿಯ ಬಂಧನ!!
ಉಡುಪಿ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಅಕ್ಷತಾ ಎಂ.ಕೆ. ಎಂದು ಗುರುತಿಸಲಾಗಿದ್ದು, ಮೂಲತಃ ಮಂಗಳೂರಿನವರಾದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ನಿವಾಸಿಯಾಗಿದ್ದ ಸಂದೀಪ್ ಸಾಲಿಯಾನ್ ಕೆಲ ದಿನಗಳ ಹಿಂದೆ ಪ್ರವಾಸಕ್ಕಾಗಿ ಗೋವಾಗೆ ತೆರಳಿದ್ದರು. ಬಳಿಕ ಕ್ಯಾಲಂಗುಟ್ನ ಅತಿಥಿ ಗೃಹವೊಂದರಲ್ಲಿ ಅವರ ಮೃತದೇಹ…
-

ಮಂಗಳೂರು: ಹೈವೇ ದರೋಡೆ, ಅಪಹರಣ ಪ್ರಕರಣ- ಮೂವರ ಬಂಧನ
ಮಂಗಳೂರು : ನಗರದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ಮುಂಜಾನೆ ಮಹಾರಾಷ್ಟ್ರದ ಕುಟುಂಬವೊಂದನ್ನು ತಡೆದು, ತಲವಾರು ತೋರಿಸಿ ಬೆದರಿಸಿ, ಚಿನ್ನಾಭರಣ ದೋಚಿ ಹೆಂಡತಿ-ಮಗನನ್ನು ಅಪಹರಿಸಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇಂಟರ್ಸ್ಟೇಟ್ ಗ್ಯಾಂಗ್ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ನಿಮಿಲ್ ಆರ್.ಕೆ (37) ಹಾಗೂ ದರೋಡೆಕೋರರಿಗೆ ಆಶ್ರಯ ಮತ್ತು ವಾಹನ ನೀಡಿ ಕೃತ್ಯಕ್ಕೆ ಸಹಕರಿಸಿದ ಕೊಡಗು ಜಿಲ್ಲೆಯ ಇರ್ಷಾದ್ (40) ಮತ್ತು ಮುಸ್ತಾಫ (49) ಬಂಧಿತ ಆರೋಪಿಗಳು. ಮಹಾರಾಷ್ಟ್ರ ಮೂಲದ ವಿಕಾಸ್ ಸುಬ್ಬರಾವ್…
-

ಸಾರ್ವಜನಿಕ ಬಸ್ ತಂಗುದಾಣವನ್ನು ಸೌದೆ ಸಂಗ್ರಹಿಸುವ ದಾಸ್ತಾನುವಾಗಿ ಬಳಕೆ..!! ಸಾರ್ವಜನಿಕರ ಆಕ್ರೋಶ, ಮೌನವಾದ ಜಿಲ್ಲಾಡಳಿತ
ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಬಡಬಾಳು ರಾಜ್ಯ ಹೆದ್ದಾರಿ ಪಕ್ಕದಲ್ಲಿ ಸರ್ಕಾರಿ ಅನುದಾನದಲ್ಲಿ ನಿರ್ಮಿಸಲಾದ ಬಸ್ ತಂಗುದಾಣವನ್ನು ಖಾಸಗಿ ವ್ಯಕ್ತಿಯೊಬ್ಬರು ಸೌದೆ ಸಂಗ್ರಹಿಸುವ ಕೊಟ್ಟಿಗೆಯಾಗಿ ಬಳಸುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಲಾದ ಈ ಬಸ್ ತಂಗುದಾಣವು ಇದೀಗ ತನ್ನ ಮೂಲ ಉದ್ದೇಶ ಕಳೆದುಕೊಂಡಿದೆ. ತಂಗುದಾಣದ ಒಳಗೆ ಸೌದೆ ರಾಶಿ ಹಾಕಿರುವುದರಿಂದ ಬಸ್ ಕಾಯಲು ಸ್ಥಳವೇ ಇಲ್ಲದಂತಾಗಿದೆ. ಮಳೆ ಹಾಗೂ ಬಿಸಿಲಿನಿಂದ ಆಶ್ರಯ ಪಡೆಯಬೇಕಾದ ಸ್ಥಳವೇ ಈಗ ಅಸೌಕರ್ಯದ ಕೇಂದ್ರವಾಗಿರುವುದಾಗಿ…
-

13,000 ಲಂಚ ಸ್ವೀಕರಿಸುತ್ತಿದ್ದ ಅಕೌಂಟೆಂಟ್ ಜನರಲ್ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ!
ಬೆಂಗಳೂರು: ನ್ಯಾಯಾಲಯದ ಆದೇಶದನ್ವಯ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಲ್ಲಿನ ಅಕೌಂಟೆಂಟ್ ಜನರಲ್ (AG) ಕಚೇರಿಯ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ (ಲೋಕಾಯುಕ್ತ) ಬಲೆಗೆ ಬಿದ್ದಿದ್ದಾರೆ. ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ: ನ್ಯಾಯಾಲಯದ ಆದೇಶದ ಪ್ರಕಾರ ಸಾರ್ವಜನಿಕರೊಬ್ಬರಿಗೆ ಸೇರಬೇಕಿದ್ದ 13.90 ಲಕ್ಷ ರೂಪಾಯಿ ಮೊತ್ತದ ಹಣವನ್ನು ಬಿಡುಗಡೆ ಮಾಡಿಕೊಡಲು ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಒಟ್ಟು 16,000 ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಲಂಚ…
-

ಬೇಬಿ ಕೇರ್ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ:ಇಬ್ಬರ ಬಂಧನ
ಬೆಂಗಳೂರು: ಬೇಬಿ ಕೇರ್ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು, ಬಿಂದು ಎಂಬವರ ಪಾತ್ರ ಮೇಲ್ನೋಟಕ್ಕೆ ಇಲ್ಲ ಅನ್ನೋದು ಖಾತರಿಯಾಗಿದೆ. ಹಾಗಾಗಿ, ಇಂದು ಮತ್ತೆ ವಿಚಾರಣೆಗೆ ಬರಲು ಮೂವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಇಬ್ಬರನ್ನು ಬಂಧಿಸಿ ಬೆಳಗ್ಗೆ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜಡ್ಜ್ ಆದೇಶಿಸಿದ್ದಾರೆ. ಬೆಂಗಳೂರಿನ…
-

ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ: ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು
ಮಂಗಳೂರು: ನಗರದ ಕೋಡಿಯಾಲ್ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್ಐಎಸ್ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್ರಾಜ್ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಗುರುವಾರ ಮುಂಜಾನೆ ಸುಮಾರು 4:20ರ ವೇಳೆಗೆ ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಅನುಮಾನಾಸ್ಪದ ವಸ್ತುವನ್ನು ಅಪರಿಚಿತ ವ್ಯಕ್ತಿಯೊಬ್ಬ ಎಸೆದಿರುವುದನ್ನು ಕರ್ತವ್ಯನಿರತ ಕೆಎಸ್ಐಎಸ್ಎಫ್ ಆರ್ಪಿಸಿ ಕಿರಣ್ ಎಂಬವರು ಗಮನಿಸಿದರು. ಹಾಗೇ ಎಎಸ್ಸೆಗೆ ಮಾಹಿತಿ ನೀಡಿ ಸುಮಾರು 500 ಮೀಟರ್ ದೂರದವರೆಗೆ…
-

ಕ್ವಾರಿ ದುರಂತ: ಮಾಲೀಕರು ಸೇರಿ 7 ಜನರ ವಿರುದ್ಧ FIR ದಾಖಲು!
ತಾವರೆಕೆರೆ ವ್ಯಾಪ್ತಿಯಲ್ಲಿ ನಡೆದ 7 ಕಾರ್ಮಿಕರ ಸಾವಿಗೆ ಕಾರಣವಾದ ಭೀಕರ ಕ್ವಾರಿ ದುರಂತಕ್ಕೆ ಸಂಬಂಧಿಸಿದಂತೆ, ಕ್ರಷರ್ ಮಾಲೀಕರು ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಪೊಲೀಸರು ಎಫ್ಐಆರ್ (FIR) ದಾಖಲಿಸಿದ್ದಾರೆ. ಯಾರ್ಯಾರ ವಿರುದ್ಧ ಎಫ್ಐಆರ್ ದಾಖಲಾಗಿದೆ? ದುರಂತಕ್ಕೆ ಕಾರಣವಾದ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಕಾರ್ಮಿಕರಾದ ಗೋಪಿಕೃಷ್ಣನ್ ಟಿ. ಅವರು ನೀಡಿದ ಅಧಿಕೃತ ದೂರಿನ ಮೇರೆಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಹೂಡಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಈ ಕೆಳಗಿನವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ: ಆಸ್ಪತ್ರೆಗೆ ಸಚಿವ ಕೃಷ್ಣಬೈರೇಗೌಡ ಭೇಟಿ ಮತ್ತೊಂದೆಡೆ,…
-

ಉಳ್ಳಾಲ: ಆವರಣ ಗೋಡೆ ಕುಸಿದು ಮನೆ ನೆಲಸಮ- ಇಂಜಿನಿಯರ್ ತುಳಸಿ ವಿರುದ್ಧ ಕ್ರಮಕ್ಕೆ ಆಗ್ರಹ
ಉಳ್ಳಾಲ : ತೊಕ್ಕೊಟ್ಟು ಸಮೀಪದ ಕೆರೆಬೈಲ್ ಎಂಬಲ್ಲಿ ಎಸ್ಟೇಟ್ ಒಂದರ ಕಾಂಕ್ರೀಟ್ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ ಪಕ್ಕದಲ್ಲಿದ್ದ ಕಿಶೋರ್ ಎಂಬವರ ಒಂಟಿ ಮನೆ ಸಂಪೂರ್ಣ ನೆಲಸಮಗೊಂಡಿದೆ. ಅಪಾಯದ ಮುನ್ಸೂಚನೆ ಸಿಕ್ಕಿದ್ದರಿಂದ ಆ ಮನೆಯಲ್ಲಿದ್ದ ಕುಟುಂಬದ ಐವರು ಸದಸ್ಯರು ಎರಡು ವಾರಗಳ ಹಿಂದಷ್ಟೆ ಸ್ಥಳಾಂತರಗೊಂಡಿದ್ದರಿಂದ ಅನಾಹುತ ತಪ್ಪಿದೆ. ಕೆರೆಬೈಲ್ ನ ಗುಡ್ಡದ ತುದಿಯಲ್ಲಿ ಡೆಲ್ಟಾ ಇನ್ಫ್ರಾಲಾಜಿಸ್ಟಿಕ್ಸ್ ವರ್ಲ್ಡ್ ವೈಡ್ ಲಿಮಿಟೆಡ್ ಕಂಪನಿ ಮಾಲಕರಾದ ಅಹಮ್ಮದ್ ಮೊಯ್ದಿನ್ ಎಂಬವರು ಕೆಲವು ವರುಷಗಳ ಹಿಂದೆ ಬೃಹತ್ ಐಷಾರಾಮಿ ಎಸ್ಟೇಟ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











