Author: News Editor
-

ಫುಟ್ಪಾತ್ ವ್ಯಾಪಾರಿಗಳ ಮೇಲೆ ಪಾಲಿಕೆ ದಾಳಿ: ‘ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯವೇ?
ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವ್ಯಾಪಾರವನ್ನು ಮಹಾನಗರ ಪಾಲಿಕೆ ತೆರವುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಹಾನಗರ ಪಾಲಿಕೆ ತೆರವುಗೊಳಿಸುತ್ತಿರುವುದು ಕೇವಲ ಬಡವರ, ಅಂಗವಿಕಲರ ಹಾಗೂ ಊಟಕ್ಕಾಗಿ ವ್ಯಾಪಾರವನ್ನು ಅವಲಂಬಿಸಿರುವರದ್ದನ್ನೇ.ಯಾಕೆಂದರೆ ಅವರಿಗೆ ಯಾವುದೇ ರಾಜಕೀಯ ಇನ್ಫ್ಲುಯೆನ್ಸ್ ಇಲ್ಲ ಹಾಗೂ ಹಣದ ಬಲವೂ ಇಲ್ಲ. ಇದೇ ವೇಳೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿವೆ.ಕಟ್ಟಡ ಪರವಾನಿಗೆ ರೂಲ್ಸ್ ಬ್ರೇಕ್ ಮಾಡಿ ಫುಟ್ಪಾತ್ನಲ್ಲಿ ಬಿಲ್ಡಿಂಗ್ಗಳನ್ನು, ಮಾರ್ಕೆಟ್ ರೋಡ್ಗಳಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ಈ ವಿಚಾರಗಳು ಮಹಾನಗರ ಪಾಲಿಕೆ ಕಮಿಷನರ್…
-

ಮದುವೆ ಸಂಭ್ರಮಕ್ಕೆ ಹೊರಟಿದ್ದ ಯುವಕನಿಗೆ ದುರಂತ ಅಂತ್ಯ: ಅಪಘಾತದಲ್ಲಿ ಸಾವು
ಕಾಸರಗೋಡು: ಮಲಪ್ಪುರಂ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ತೋಕೆ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಮೃತರನ್ನು ತೋಕೆ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಬದ್ರುಲ್ ಹಫೀಝ್(24) ಎಂದು ಗುರುತಿಸಲಾಗಿದೆ.ಮಲಪ್ಪುರಂನಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದ ಹಫೀಝ್, ಸೋಮವಾರ ನಡೆಯಲಿರುವ ಕುಟುಂಬದ ಮದುವೆಯೊಂದರಲ್ಲಿ ಭಾಗಿಯಾಗುವ ಉದ್ದೇಶದಿಂದ ಶನಿವಾರ ಬೈಕಿನಲ್ಲಿ ಊರಿಗೆ ಹೊರಟಿದ್ದರು. ಈ ಸಂದರ್ಭ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಹಫೀಝ್…
-

ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ನೋ ಎಂಟ್ರಿ- ನೀಟ್ ಪರೀಕ್ಷೆಯಲ್ಲಿ ಕಠಿಣ ನಿಯಮ ಜಾರಿ
ಬೆಂಗಳೂರು: ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು…
-

ನೋಟಿಸ್ ಇಲ್ಲದೆ ಸ್ಟಾಲ್ ತೆರವು ಮಾಡಿದ ನಗರಪಾಲಿಕೆ: ವಿಕಲಚೇತನ ವ್ಯಾಪಾರಿಗಳ ಕಣ್ಣೀರು
ಮಂಗಳೂರು: ಪಡೀಲ್ ನ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 12 ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ ವಿಕಲಚೇತನ ಬೀದಿಬದಿ ವ್ಯಾಪಾರಿಗಳ ಸ್ಟಾಲ್ ಗಳನ್ನು ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವುದು ವಿವಾದಕ್ಕೆ ಕಾರಣವಾಗಿದೆ.75% ಅಂಗವೈಕಲ್ಯ ಹೊಂದಿರುವ ಚಂದ್ರಹಾಸ್ ಹಾಗೂ ವಿಧವೆ ಸುನೀತಾ, ಯಾವುದೇ ನೋಟಿಸ್ ಅಥವಾ ಪರ್ಯಾಯ ವ್ಯವಸ್ಥೆ ನೀಡದೆ ತಮ್ಮ ತಳ್ಳುಗಾಡಿ ಮತ್ತು ವ್ಯಾಪಾರ ಸಾಮಗ್ರಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ವ್ಯಾಪಾರಿಗಳ…
-

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಆರೋಪ; ತಾಯಿಯ ಆತ್ಮಹತ್ಯೆಯಿಂದ ಪ್ರಕರಣಕ್ಕೆ ವಿಷಾದಕರ ತಿರುವು
ಬೆಳಗಾವಿ : ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನನ್ನೇ ಕೊಲೆ ಮಾಡಿದ್ದ ಪತ್ನಿಯ ಕೃತ್ಯಕ್ಕೆ ಮನನೊಂದು, ಆಕೆಯ ತಾಯಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ನಡೆದಿದೆ.ಮಾಜಿ ಯೋಧ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಗಳು ಪೊಲೀಸರಿಂದ ಬಂಧನಕ್ಕೊಳಗಾಗುತ್ತಿದ್ದಂತೆ ತೀವ್ರ ಆಘಾತಕ್ಕೊಳಗಾಗಿದ್ದ ಮಹಾದೇವಿ ಅವರು, ಮರ್ಯಾದೆಗೆ…
-

ಕೆರೆಗೆ ಬಿದ್ದು ಅವಳಿ ಸಹೋದರರ ದಾರುಣ ಸಾವು – ಆಟವಾಡುತ್ತಿದ್ದ ವೇಳೆ ದುರ್ಘಟನೆ
ಸುಳ್ಯ: ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟ ಘಟನೆ ಸುಳ್ಯ ಸಮೀಪದ ಮುರುಳ್ಯ ಗ್ರಾಮದ ಕಡೀರದಲ್ಲಿ ವರದಿಯಾಗಿದೆ.ಕಡೀರ ನಿವಾಸಿ ವೆಲ್ಡಿಂಗ್ ಕೆಲಸ ಮಾಡುವ ವಸಂತ ಎಂಬವರ ಮಕ್ಕಳಾದ ಯಶ್ವಿನ್ ಹಾಗೂ ಜಶ್ವಿನ್ ಮೃತರು ಎಂದು ತಿಳಿದು ಬಂದಿದೆ. ಮಕ್ಕಳು ಆಟ ವಾಡುತ್ತಿದ್ದಾಗ ಮನೆ ಸಮೀಪದ ಕೆರೆಗೆ ಬಿದ್ದರೆಂದೂ ತಿಳಿದು ಬಂದಿದೆ. ಇದೀಗ ಮೃತದೇಹ ಮೇಲೆತ್ತಿರುವುದಾಗಿ ತಿಳಿದುಬಂದಿದೆ.
-

ಎರಡು ವರ್ಷದ ಮಗು ಅನಾಥ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಶಂಕೆ
ಕಡಬ: ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಮಧ್ಯಾಹ್ನ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಕಾರು ಕಜೆಯಲ್ಲಿ ನಡೆದಿದೆ.ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು.ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಈ…
-

ಕುಂಬಳೆ ಸಮೀಪ ಕಟ್ಟಡ ಕಾಮಗಾರಿಯಲ್ಲಿ ದುರಂತ; 47 ವರ್ಷದ ಕಾರ್ಮಿಕ ಮೃತ್ಯು
ಕುಂಬಳೆ: ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ನಡೆದಿದೆ. ಬೇಳ ಕೊಳಂಬೆ ಯ ಫ್ರಾನ್ಸಿಸ್ ಡಿ’ಸೋಜ (47) ಮೃತರು.ನಾಯ್ಕಾಪು ಮುಂಜಾಂಗಾವು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಫ್ರಾನ್ಸಿಸ್ ರವರನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-

ಕರಾವಳಿಯ ಹೆಗ್ಗುರುತು ಅಂತ್ಯ: ಇತಿಹಾಸ ಸೇರಲಿರುವ ಕಡಲತೀರದ ಭಗವತಿ ಪ್ರೇಮ್ ಹಡಗು
ಸುರತ್ಕಲ್: ಸುರತ್ಕಲ್ನ ಗುಡ್ಡೆಕೊಪ್ಲ ಕಡಲತೀರದಲ್ಲಿ ಕಳೆದ ಕೆಲವು ವರ್ಷಗಳಿಂದ ಬಂದು ನಿಂತಿದ್ದ “ಭಗವತಿ ಪ್ರೇಮ್” ಎಂಬ ಬೃಹತ್ ಗಾತ್ರದ ಡ್ರೆಡ್ಜರ್ ಹಡಗನ್ನು ಕತ್ತರಿಸಿ ಒಡೆಯುವ ಕಾರ್ಯ ಭರದಿಂದ ಸಾಗಿದ್ದು, ಇಷ್ಟು ದಿನ ಪ್ರವಾಸಿಗರ ಗಮನ ಸೆಳೆಯುತ್ತಿದ್ದ ಕರಾವಳಿಯ ಪ್ರಸಿದ್ಧ ಸೆಲ್ಫಿ ಪಾಯಿಂಟ್ ಇನ್ಮುಂದೆ ಮಾಯವಾಗಲಿದೆ.ಕೆಲವು ವರ್ಷಗಳ ಹಿಂದೆ ಮಳೆಗಾಲದ ಭೀಕರ ಗಾಳಿ-ಮಳೆಗೆ ಸಿಲುಕಿ ಎನ್ಎಂಪಿಟಿ (NMPT) ಬಂದರಿನಲ್ಲಿ ಲಂಗರು ಹಾಕಿದ್ದ ಈ ಡ್ರೆಡ್ಜರ್ ಹಡಗು, ಆ್ಯಂಕರ್ ಕಿತ್ತುಕೊಂಡು ಬಂದು ಸುರತ್ಕಲ್ನ ಗುಡ್ಡೆಕೊಪ್ಲ ತೀರದಲ್ಲಿ ಹೂತುಕೊಂಡಿತ್ತು. ತಾಂತ್ರಿಕ ಕಾರಣಗಳಿಂದಾಗಿ…
-

ಮಂಗಳೂರು: ಕಲುಷಿತ ನೀರು ದೂರು ಬೆನ್ನಲ್ಲೇ ಪೈಪ್ಲೈನ್ ಸೋರಿಕೆ ಪತ್ತೆ, ದುರಸ್ತಿ ಮಾಡಿದ ಎಂಸಿಸಿ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯ ನಿವಾಸಿಗಳಿಗೆ ಪೂರೈಸಲಾಗುವ ಕುಡಿಯುವ ನೀರನ್ನು ಶುದ್ಧೀಕರಣ ಘಟಕಗಳಲ್ಲಿ ಸಂಸ್ಕರಿಸಿದ ಬಳಿಕವೇ ಮನೆಗಳಿಗೆ ಸರಬರಾಜು ಮಾಡಲಾಗುತ್ತದೆ. ರಿನ ಸುರಕ್ಷತೆ ಮತ್ತು ಶುದ್ಧತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ವಾರ್ಡ್ಗಳಲ್ಲಿ ಕಾಲಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ ಎಂದು ಎಂಸಿಸಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಾರ್ಡ್ ನಂ. 31ರ ಭಟ್ಟಗುಡ್ಡ 5ನೇ ಕ್ರಾಸ್ ರಸ್ತೆಯ ಕೆಲವು ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ ಎಂಬ ದೂರುಗಳು ಎಂಸಿಸಿಗೆ ಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











