Author: News Editor
-

ಎರಡು ಕಾರು–ಬೈಕ್ ನಡುವೆ ಡಿಕ್ಕಿ; ಅಪಘಾತದ ರಭಸಕ್ಕೆ ಕಾರು ಪಲ್ಟಿ
ಬೆಳ್ತಂಗಡಿ: ಎರಡು ಕಾರುಗಳು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಾರು ಮತ್ತು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಡಿಕ್ಕಿಯ ಬಲಕ್ಕೆ ಒಂದು ಕಾರು…
-

ಮಂಗಳೂರು: ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ! ಮ.ನ.ಪಾ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಸಾರ್ವಜನಿಕರಿಂದ ಹಿಡಿಶಾಪ
ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಕರಾವಳಿಯ ನಾಗರಿಕರು ಭಾರಿ ಬೆಲೆ ತೆರುವಂತಾಗಿದೆ. ಪಾಲಿಕೆಯಿಂದ ಸರಬರಾಜಾಗುತ್ತಿರುವ ಕಲುಷಿತ ಕುಡಿಯುವ ನೀರನ್ನು ಸೇವಿಸಿ ನಗರದ ನೂರಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ತೀವ್ರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಜನರ ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದ ಬಿಜೈ ನ್ಯೂರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರು-ನಾಲ್ಕು ವಾರಗಳಿಂದ ಮನೆಯ ಟ್ಯಾಪ್ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರನ್ನು ಬಳಸಿದ…
-

ಕೋರ್ಟ್ ವಿಚಾರಣೆಗೆ ಹಾಜರಾಗದ ಆರೋಪಿ ಅರೆಸ್ಟ್: ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ
ಪುತ್ತೂರು: ಕಳ್ಳತನ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಯಾನೆ ಕೆ.ಎಂ ಸಲಾಂ ಯಾನೆ ಡಾಲರ್ ಸಲಾಂ ಬಂಧಿತ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 24/2020 Se. 457.380 IPC ಮತ್ತು ಅ.ಕ್ರ ನಂ: 34/2022 ಕಲಂ. 457.380. IPC ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಪುತ್ತೂರು ರೈಲ್ವೆ…
-

ಆಸ್ಪತ್ರೆಯಲ್ಲಿ ಸರಣಿ ಸಾವು; ಮೃತರ ಸಂಬಂಧಿಕರಿಂದ ವೈದ್ಯರ ವಿರುದ್ಧ ಆಕ್ರೋಶ
ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11 ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಳೆದ 24 ಗಂಟೆಗಳಲ್ಲಿ 11 ಮಂದಿ ಸಾವನ್ನಪ್ಪಿರುವುದು ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ರೋಗಿಗಳ ಸರಣಿ…
-

ಕಾರಿನೊಳಗೆ ಅಡಗಿಸಿದ್ದ ನಿಷೇಧಿತ ಸರಕು; ಪೊಲೀಸ್ ದಾಳಿಯಲ್ಲಿ ಬಯಲಾದ ಜಾಲ
ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ…
-

ಡೆಬಿಟ್ ಕಾರ್ಡ್ ಬಳಸಿ ಭರ್ಜರಿ ವಂಚನೆ:ವ್ಯಕ್ತಿಯ ಖಾತೆಯಿಂದ ₹2.12 ಲಕ್ಷ ದೋಚಿದ ಖದೀಮರು
ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್ಗೆ…
-

ಮಂಗಳೂರಿನಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ: 6.35 ಲಕ್ಷ ಮೌಲ್ಯದ ಮರಳು ವಶಕ್ಕೆ
ಮಂಗಳೂರು: ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಬಜ್ಪೆ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಪ್ರತ್ಯಕ್ಷದರ್ಶಿಗಳ ಸಮ್ಮುಖದಲ್ಲಿ ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಫಲ್ಗುಣಿ ನದಿಯ ಕಡೆಗೆ ಹೋಗುವ ರಸ್ತೆಯ ಬಲಭಾಗದಲ್ಲಿರುವ ತೆರೆದ ಜಾಗದಲ್ಲಿ ಸುಮಾರು 20 ಲೋಡ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿರುವುದನ್ನು ಪೊಲೀಸರು…
-

ದರೋಡೆ ಕೇಸ್ನಲ್ಲಿ ಆರೋಪ ಸಾಬೀತು: ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಪುತ್ತೂರು: ದರೋಡೆ ಪ್ರಕರಣದ ಇಬ್ಬರು ಆರೋಪಿಗಳಿಗೆ ತಲಾ 10000 ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ , ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೆ ಗುರಿಯಾದವರು.ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ಮಾರ್ಚ್ 20, 2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು…
-

ಧರ್ಮಸ್ಥಳ ಕೇಸ್ನ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ!
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಕಾರು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಹಾಗೂ ಚಾಲಕ ಸೇರಿ ನಾಲ್ವರು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸಲ್ಲಿಸಿರುವ ಹೈಕೋರ್ಟ್ ರಿಟ್ ಅರ್ಜಿಯ ಕುರಿತು ಚರ್ಚಿಸಲು, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
-

ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು, ತನಿಖೆ ಆರಂಭ
ಧರ್ಮಸ್ಥಳ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಂಗಳವಾರ ಬೆಳಿಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ, ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿ ರಮೇಶ್ ಅವರ ಪುತ್ರಿ ಶ್ವೇತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಐದು ವರ್ಷಗಳಿಂದ ಶ್ವೇತಾ ಅವರ ಪೋಷಕರು ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಮಾಹಿತಿಯ ಪ್ರಕಾರ, ಶ್ವೇತಾ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











