Author: News Editor

  • ಮೆಸೇಜ್ ಕಳುಹಿಸಿದ ಬಳಿಕ ನಾಪತ್ತೆಯಾದ ಉದ್ಯಮಿ; ಪ್ರಕರಣ ದಾಖಲು
    , ,

    ಮೆಸೇಜ್ ಕಳುಹಿಸಿದ ಬಳಿಕ ನಾಪತ್ತೆಯಾದ ಉದ್ಯಮಿ; ಪ್ರಕರಣ ದಾಖಲು

    ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ಔಷಧಕ್ಕೆ ಸಂಬಂಧಿತ ಕಚೇರಿಯನ್ನುನಡೆಸುತ್ತಿದ್ದ ಉದ್ಯಮಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಸುನೀಲ್ ಬಿ. ಎಸ್. (36) ಎಂದು ಗುರುತಿಸಲಾಗಿದೆ. ಅವರು ಬಿಜೈನಲ್ಲಿರುವ ಪಿಜಿ ಯೊಂದರಲ್ಲಿ ವಾಸಿಸುತ್ತಿದ್ದರು.ಕುಟುಂಬದವರು ನೀಡಿರುವ ದೂರಿನ ಪ್ರಕಾರ, ಸುನೀಲ್ ಜೂನ್ 12 ರ ಸಂಜೆ ತಮ್ಮ ಕಚೇರಿಯ ಕೆಲಸವನ್ನು ಮುಗಿಸಿ, ರಾತ್ರಿ ಸುಮಾರು 9 ಗಂಟೆಗೆ ತಮ್ಮ ಸಹೋದರಿಯ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದರು.ಆ ಸಂದೇಶ ಕಳುಹಿಸಿದ ತಕ್ಷಣವೇ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ.…

    Continue Reading

  • ಮುಂಗಾರು ಎಫೆಕ್ಟ್: ಗಡಾಯಿಕಲ್ಲು ಚಾರಣಕ್ಕೆ ಮತ್ತೆ ಬ್ರೇಕ್, ಪ್ರವಾಸಿಗರಿಗೆ ನಿರ್ಬಂಧ
    , ,

    ಮುಂಗಾರು ಎಫೆಕ್ಟ್: ಗಡಾಯಿಕಲ್ಲು ಚಾರಣಕ್ಕೆ ಮತ್ತೆ ಬ್ರೇಕ್, ಪ್ರವಾಸಿಗರಿಗೆ ನಿರ್ಬಂಧ

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ಮತ್ತೆ ನಿರ್ಬಂಧ ಹೇರಿದೆ. ಮಳೆಯ ಕಾರಣ ಕಲ್ಲುಗಳು ಜಾರುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜೂನ್ 14ರಿಂದ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆ ಹೊರಡಿಸಿದ್ದು, ಸುರಕ್ಷತಾ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.ಈ ಹಿಂದೆ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಹಾಗೂ ಇತರ ಅನಾಹುತಗಳನ್ನು ತಡೆಗಟ್ಟುವ…

    Continue Reading

  • ಮಹಜರಿಗೆ ತೆರಳಿದ ವೇಳೆ ಹೈಡ್ರಾಮಾ: ಹಲ್ಲೆ ಮಾಡಿದ ಆರೋಪಿಗೆ ಪೊಲೀಸ್ ಫೈರಿಂಗ್
    , ,

    ಮಹಜರಿಗೆ ತೆರಳಿದ ವೇಳೆ ಹೈಡ್ರಾಮಾ: ಹಲ್ಲೆ ಮಾಡಿದ ಆರೋಪಿಗೆ ಪೊಲೀಸ್ ಫೈರಿಂಗ್

    ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್‌ನಲ್ಲಿ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ನರಸಿಂಹ ಕೊಲೆ ಕೇಸ್ ಆರೋಪಿ ಮಧು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಕೇಸ್ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಮೇಲೆ ಆರೋಪಿ ಮಧು ಹಲ್ಲೆ ಮಾಡಿದ್ದಾನೆ. ಏರ್ ಫೈರ್ ಮಾಡಿ ವಾರ್ನ್ ಮಾಡಿದರೂ ಮಾತು ಕೇಳದ ಹಿನ್ನೆಲೆ ಕೋಟೆ…

    Continue Reading

  • 99 ವರ್ಷದ ವೃದ್ಧೆ ಬಾವಿಗೆ ಬಿದ್ದು ಸಾವು; ಇಣುಕಿ ನೋಡುತ್ತಿದ್ದಾಗ ಜಾರಿ ಬಿದ್ದ ದುರಂತ
    , ,

    99 ವರ್ಷದ ವೃದ್ಧೆ ಬಾವಿಗೆ ಬಿದ್ದು ಸಾವು; ಇಣುಕಿ ನೋಡುತ್ತಿದ್ದಾಗ ಜಾರಿ ಬಿದ್ದ ದುರಂತ

    ಮೂಡುಬಿದಿರೆ: ವೃದ್ಧೆಯೋವ೯ರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಶನಿವಾರ ನಡೆದಿದೆ.ಮೂಡಬಿದ್ರೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆಯ ಕಮಲ (99) ಮೃತಪಟ್ಟವರು. ಶನಿವಾರ ಬಾವಿಗೆ ಇಣುಕಿ ನೋಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಗಂಭೀರ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಮೂಡಬಿದ್ರೆಯ ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

  • ಸಂಜೆಯಿಂದ ಮನೆಗೆ ಮರಳದ ಇಬ್ಬರು ಬಾಲಕರು ; ಸುಳಿವು ನೀಡುವಂತೆ ಮನವಿ
    , ,

    ಸಂಜೆಯಿಂದ ಮನೆಗೆ ಮರಳದ ಇಬ್ಬರು ಬಾಲಕರು ; ಸುಳಿವು ನೀಡುವಂತೆ ಮನವಿ

    ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ.ಕುಂಜತ್ತೂರು ಸ್ವಾಗತ್ ಹೊಟೇಲ್ ಸಮೀಪದ ಯಾಸಿನ್ ( 13) ಮತ್ತು ಸುಲ್ತಾನ್ (14) ನಾಪತ್ತೆಯಾದವರು. ಶನಿವಾರ ಸಂಜೆ ಐದು ಗಂಟೆ ಬಳಿಕ ನಾಪತ್ತೆಯಾಗಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಾಲಕರ ಬಗ್ಗೆ ಗುರುತು, ಸುಳಿವು ಲಭಿಸಿದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

    Continue Reading

  • ಕುತ್ತಿಗೆ ಕೊಯ್ದು ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಜೋಕಟ್ಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ
    , ,

    ಕುತ್ತಿಗೆ ಕೊಯ್ದು ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಜೋಕಟ್ಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ

    ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್‌ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ…

    Continue Reading

  • ಜಮೀನು ಖಾತೆ ಮಾಡಿಕೊಡಲು 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್‌ಪೆಕ್ಟರ್!
    ,

    ಜಮೀನು ಖಾತೆ ಮಾಡಿಕೊಡಲು 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್‌ಪೆಕ್ಟರ್!

    ಜಮೀನಿನ ಪೋಡಿ ಹಾಗೂ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ರೆವಿನ್ಯೂ ಇನ್ಸ್‌ಪೆಕ್ಟರ್ (ಕಂದಾಯ ನಿರೀಕ್ಷಕ) ಮಧುಸೂದನ್ ಲೋಕಾಯುಕ್ತ ದಾಳಿಗೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಜಮೀನು ಕೆಲಸಕ್ಕಾಗಿ ಸಾರ್ವಜನಿಕರನ್ನು ಅಲೆದಾಡಿಸಿ, ಹಣಕ್ಕಾಗಿ ಪೀಡಿಸುತ್ತಿದ್ದ ಇವರು, ಇಂದು ಮುಂಗಡ ಹಣ ಪಡೆಯುವಾಗ…

    Continue Reading

  • 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ
    ,

    27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ

    ಸರ್ಕಾರಿ ಒಡೆತನದ ಆಹಾರ ಗೋದಾಮುಗಳ ಮೇಲೆ ಇಂದು ಏಕಾಯಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೋಕಾಯುಕ್ತ ಪೊಲೀಸರಿಂದ ಏಕಕಾಲಕ್ಕೆ 27 ಕಡೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸರಿಯಾದ ಲೆಕ್ಕ ನೀಡದೆ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ. ಕೆಲವು ಕಡೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೆ ಅಧಿಕಾರಿಗಳು ಗೈರು ಆಗಿದ್ದಾರೆ. ಇದು ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ

    Continue Reading

  • ಬಜಪೆ: ನೆರೆಮನೆಯವನಿಂದ ಅಪ್ರಾಪ್ತ ಬಾಲಕಿಗೆ ನಿರಂತರ ಅತ್ಯಾಚಾರ, ಬೆದರಿಕೆ!! ಪೋಕ್ಸೋ ಪ್ರಕರಣ ದಾಖಲು
    , ,

    ಬಜಪೆ: ನೆರೆಮನೆಯವನಿಂದ ಅಪ್ರಾಪ್ತ ಬಾಲಕಿಗೆ ನಿರಂತರ ಅತ್ಯಾಚಾರ, ಬೆದರಿಕೆ!! ಪೋಕ್ಸೋ ಪ್ರಕರಣ ದಾಖಲು

    ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ…

    Continue Reading

  • ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ
    , ,

    ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ

    ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಗಾಗಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed