Author: News Editor
-

ಬಿಲ್ಲವ ಸಮುದಾಯವನ್ನು ಅವಮಾನಿಸುತ್ತಿರುವ ಅನಿತಾ ಕಾಸರಗೋಡು ಅರೆಸ್ಟ್!!
ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಮಾಡುತ್ತಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಬೆಂಗಳೂರಿನಲ್ಲಿ ಪೋಲಿಸರು ಬಂಧಿಸಿದ್ದಾರೆ. ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾನತೆಯ ತತ್ವಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿರುವ ಬಿಲ್ಲವ ಸಮುದಾಯಕ್ಕೆ ಅತೀವ ನೋವುಂಟು ಮಾಡಿದ್ದು, ಆದರೂ ಇದಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು…
-

ಬಂಟ್ವಾಳದಲ್ಲಿ ಲಿಫ್ಟ್ ಅವ್ಯವಸ್ಥೆ ಬಯಲು: 45 ನಿಮಿಷ ಒಳಗೇ ಸಿಲುಕಿ ಒದ್ದಾಟ
ಬಂಟ್ವಾಳ: ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಫ್ಟ್ ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು, ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ನಡೆದಿದೆ.ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಲಿಫ್ಟ್ ನ್ನು ಸಾರ್ವಜನಿಕರು ಬಳಸುತ್ತಿದ್ದು, ಗುರುವಾರ ಮಧ್ಯಾಹ್ನ ಸುಮಾರು 12.45 ರಿಂದ 1.30 ರ ವರೆಗೆ ಕಚೇರಿಗೆ ಬಂದಿದ್ದ ಸಾರ್ವಜನಿಕರಿಬ್ಬರು ಲಿಫ್ಟ್ ನೊಳಗೆ ಸಿಲುಕಿಹಾಕಿಕೊಂಡಿದ್ದಾರೆ. ಬಳಿಕ ಅವರು ಸ್ನೇಹಿತರಿಗೆ ಪೋನ್ ಮೂಲಕ ವಿಚಾರ ತಿಳಿಸಿ, ಅವರು ತಹಶೀಲ್ದಾರ್ ಅವರನ್ನು ಸಂಪರ್ಕ…
-

ವಿದ್ಯುತ್ ಕಂಬ ದುರಸ್ತಿ ಕಾರ್ಯ ಮುಗಿಸಿ ತೆರಳುತ್ತಿದ್ದ ಮೆಸ್ಕಾಂ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ
ಬಂಟ್ವಾಳ: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ. ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ( 55) ಮೃತಪಟ್ಟ ವ್ಯಕ್ತಿ.ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕಾನಿಕ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಬುಧವಾರ ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.ಅ ಬಳಿಕ ಅಲ್ಲಿಂದ ಇನ್ನೊಂದು…
-

ನದಿ ತೀರದಲ್ಲಿ ಮಣ್ಣು ಹಾಕಿ ಒತ್ತುವರಿ ಕಾಮಗಾರಿ : ನದಿಗಳನ್ನೇ ಕಳೆದುಕೊಳ್ಳುತ್ತಾದಾ ಮಂಗಳೂರು?
ಮಂಗಳೂರು: ಸುಲ್ತಾನ್ ಬತ್ತೇರಿ ಪ್ರದೇಶದಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ನದಿಯ ತೀರ ಭಾಗದಲ್ಲಿ ಮಣ್ಣು ತುಂಬಿಸಿ ಹೊಸ ಕಾಮಗಾರಿ ಆರಂಭಿಸಿರುವ ಕುರಿತು ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ. ನದಿಯ ಸ್ವಾಭಾವಿಕ ಹರಿವು ಮತ್ತು ಅಸ್ತಿತ್ವವನ್ನು ಕಾಪಾಡಬೇಕಾದ ಪ್ರದೇಶದಲ್ಲೇ ಭೂಭರ್ತಿ ಕಾಮಗಾರಿ ನಡೆಯುತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಕಳವಳ ಮೂಡಿಸಿದೆ.ಸ್ಥಳೀಯರ ಪ್ರಕಾರ, ನದಿ ತೀರದ ಪ್ರದೇಶಕ್ಕೆ ಮಣ್ಣು ಹಾಕಿ ಕಾಮಗಾರಿ ನಡೆಸುತ್ತಿರುವುದು ನದಿಯ ಮೂಲ ಸ್ವರೂಪದ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ. ಒಮ್ಮೆ ರಾಜಕಾಲುವೆಗಳು ಮತ್ತು ನೈಸರ್ಗಿಕ ಜಲಮಾರ್ಗಗಳು ಒತ್ತುವರಿ…
-

ತಲೆಮರೆಸಿಕೊಂಡಿದ್ದ ಪೋಕ್ಸೋ ಆರೋಪಿ ಪತ್ತೆ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್
ಪುತ್ತೂರು: 2018 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ದಾಖಲಾಗಿ ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ 32 ವರ್ಷದ ವ್ಯಕ್ತಿಯನ್ನು ಪುತ್ತೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುತ್ತೂರಿನ ನರಿಮೊಗೇರು ನಿವಾಸಿ ನಮನ್ ನಾಯಕ್ (32) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಬೆಂಗಳೂರಿನ ಕೂಡ್ಲು ಗೇಟ್ನಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.ನಮನ್ ನಾಯಕ್ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 53/2018 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ)…
-

ಜೀವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಜೈಲು ಪಾಲು
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.ಪತ್ರಿಕಾ ಪ್ರಕಟಣೆಯ ಪ್ರಕಾರ, ಜೂನ್ 7 ರಂದು ಸಲ್ಲಿಸಿದ ದೂರಿನಲ್ಲಿ ಸಂತ್ರಸ್ತೆ ನೀಡಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಸಂಬಂಧಿ ಸುರೇಶ್ ಎಂಬ ಆರೋಪಿ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಧರ್ಮಸ್ಥಳ…
-

ಜಮೀರ್ ಅಹ್ಮದ್ ಖಾನ್ ಕಡೆಗಣನೆ ಕಾಂಗ್ರೆಸ್ಗೆ ಮುಳುವಾಗಲಿದೆಯೇ?
ಬೆಂಗಳೂರು: ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ನೀಡದಿರುವುದು ಕಾಂಗ್ರೆಸ್ ಪಕ್ಷದ ಅತಿದೊಡ್ಡ ತಪ್ಪು, ಜಮೀರ್ ಅಹ್ಮದ್ ಖಾನ್ ಅವರಿಗೆ ಕೇವಲ ಮುಸ್ಲಿಂ ಸಮುದಾಯದವರಷ್ಟೇ ಅಲ್ಲದೆ, ಸರ್ವಧರ್ಮದ ಜನರ ಬೆಂಬಲವೂ ಇದೆ.ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ನಿಂದ ದೂರವಾದರೆ, ಪಕ್ಷವು ಬಹುಮತಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.ಜಮೀರ್ ಅಹ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದವರಿಗಷ್ಟೇ ಅಲ್ಲದೆ, ವಿವಿಧ ಧರ್ಮಗಳ ಜನರಲ್ಲಿಯೂ ಜನಪ್ರಿಯ…
-

ಅಝಾನ್ ಹೇಳುತ್ತಿದ್ದಾಗಲೇ ಕುಸಿದು ಬಿದ್ದ ಮೌಲ್ವಿ; ಮಸೀದಿಯಲ್ಲೇ ಹೃದಯಾಘಾತಕ್ಕೆ ಬಲಿ
ಹೊನ್ನಾವರ: ಮಸೀದಿಯಲ್ಲಿ ಅಸರ್ ನಮಾಜ್ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಮಕ್ಕಳಿಗೆ ಇಸ್ಲಾಮಿಕ್ ಧಾರ್ಮಿಕ ಹಾಗೂ ಮದರಸಾ ಶಿಕ್ಷಣ ನೀಡುವ ಉದ್ದೇಶದಿಂದ ಅವರು ಸುಮಾರು ಆರು ತಿಂಗಳ ಹಿಂದೆ ಹೊನ್ನಾವರಕ್ಕೆ ಆಗಮಿಸಿ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮಂಗಳವಾರ ಸಂಜೆ ವಾಡಿಕೆಯಂತೆ ಅಸರ್ ನಮಾಜ್ಗೆ…
-

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು…
-

ಯು.ಟಿ. ಖಾದರ್ ಎಚ್ಚರಿಕೆ ಬಳಿಕ ಮಂಗಳೂರಿನ ಅನೇಕ ಇಂಜಿನಿಯರ್ಗಳಿಗೆ ಇನ್ನು ಜೈಲು ಗತಿಯಾ?
ಮಂಗಳೂರು: ರಸ್ತೆ ಗುಂಡಿಗಳಿಗೆ ಬಿದ್ದು ಸಾರ್ವಜನಿಕರು ಪ್ರಾಣ ಕಳೆದುಕೊಂಡರೆ ಸಂಬಂಧಪಟ್ಟ ಇಂಜಿನಿಯರ್ಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂಬ ಸಚಿವ ಯು.ಟಿ. ಖಾದರ್ ಅವರ ಕಠಿಣ ಎಚ್ಚರಿಕೆ ರಾಜ್ಯಾದ್ಯಂತ ಗಮನ ಸೆಳೆದಿದೆ. ಈ ಹೇಳಿಕೆಯ ಬಳಿಕ ಮಂಗಳೂರಿನಲ್ಲಿ ನಡೆದಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ನೋಡಿದರೆ ಅಧಿಕ ಇಂಜಿನಿಯರ್ಸ್ ಗಳಿಗೆ ಜೈಲೇ ಗತಿ ಎಂದು ಕಾಣಿಸುತ್ತಿದೆ.ನಗರದ ಹಲವು ರಸ್ತೆಗಳಲ್ಲಿ ಇಂದಿಗೂ ದೊಡ್ಡ ದೊಡ್ಡ ಗುಂಡಿಗಳು, ಹಾಳಾದ ಡಾಂಬರು ಮತ್ತು ಮಳೆ ನೀರು ನಿಲ್ಲುವ ಸಮಸ್ಯೆಗಳು ಮುಂದುವರಿದಿವೆ. ಕೋಟ್ಯಂತರ ರೂಪಾಯಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











