Author: News Editor
-

ಅಕ್ಬರ್ ಅಕ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ:ಹಲವು ಅಧಿಕಾರಿಗಳ ಪಾತ್ರದ ಶಂಕೆ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಮುಡಾದ ಇಂಜಿನಿಯರ್ ಆಗಿದ್ದ ಅಕ್ಬರ್ ಅಕ್ತರ್ ಪಾಷಾ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದ ಇಂದು ಬೆಳ್ಳಗಿನ ವರೆಗೆ ಪಾಷಾರವರ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಕೊಣಾಜೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮುಡಾಗೆ ಸಂಬಂಧಿಸಿದ ಜಮೀನು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಅಧಿಕಾರಿಗಳ…
-

ಬಂಟ್ವಾಳದಲ್ಲಿ ಮತ್ತೊಂದು ಡ್ರಗ್ಸ್ ಪ್ರಕರಣ: ಕಾರು ತಪಾಸಣೆಯಲ್ಲಿ ಭಾರಿ ಪ್ರಮಾಣದ ಎಂಡಿಎಂಎ ಪತ್ತೆ
ಬಂಟ್ವಾಳ: ಕಾರಿನಲ್ಲಿ ಮಾದಕವಸ್ತು ಎಂಡಿಎಂಎ ಸಾಗಾಟ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, 7,64,000 ರೂ. ಮೌಲ್ಯದ ಎಂಡಿಎಂಎ ಅನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.ಬಂಟ್ವಾಳ ಪುದು ನಿವಾಸಿ ಎ,ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಂಟ್ವಾಳ ಬಿ ಮೂಡ ನಿವಾಸಿ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಂದಾಜು 7,64,000ರೂ. ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ…
-

ಮಂಗಳೂರು ಮುಡಾ ಇಂಜಿನಿಯರ್ ಆಗಿದ್ದ ಅಕ್ಬರ್ ಪಾಷಾರವರ ಮನೆಗೆ ಲೋಕಾಯುಕ್ತ ದಾಳಿ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ) ದ ಇಂಜಿನಿಯರ್ ಆಗಿದ್ದ ಅಕ್ಬರ್ ಪಾಷಾರವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಕೊಣಾಜೆ ಪರಿಸರದಲ್ಲಿ ಮುಡಾಗೆ ಸಂಬಂಧಿಸಿದ ಹಲವಾರು ಆಸ್ತಿಗಳಲ್ಲಿ ಅವ್ಯವಹಾರ ನಡೆದಿದ್ದು, ದಾಳಿ ವೇಳೆ ಸಂಬಂಧ ಪಟ್ಟ ಮಹತ್ವದ ದಾಖಲೆಗಳು ಪತ್ತೆಯಾಗಿವೆ.ಮುಡಾದಲ್ಲಿ ನಡೆದ ಅಕ್ರಮ ಅವ್ಯವಹಾರಗಳ ಬಗ್ಗೆ ಖಚಿತ ಮಾಹಿತಿಯೊಂದಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಇದೆ.ಅಕ್ಬರ್ ಪಾಷಾ ಮನೆಯಲ್ಲಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ದಂಪತಿ ಅದೃಷ್ಟವಶಾತ್ ಪಾರು
ವಿಟ್ಲ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-

ಪರವಾನಗಿ ಇಲ್ಲದೇ ಎಲ್ಪಿಜಿ ವ್ಯವಹಾರ: ಆಹಾರ ಇಲಾಖೆ ಕಾರ್ಯಾಚರಣೆಯಲ್ಲಿ ಬಯಲು
ಉಡುಪಿ: ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.ಆರೋಪಿಯನ್ನು ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆ ನಿವಾಸಿ ಸನತ್ ಆರ್ ಕಾಮತ್ (43) ಎಂದು ಗುರುತಿಸಲಾಗಿದೆ. ಆರೋಪಿ ಎಲ್ಪಿಜಿ ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಜೂನ್ 3 ರಂದು ಬೆಳಿಗ್ಗೆ 10.45 ರ ಸುಮಾರಿಗೆ ಆಹಾರ ಇಲಾಖೆಯ ಅಧಿಕಾರಿಗಳು ಮಲ್ಪೆ ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ…
-

ಫೇಸ್ಬುಕ್ನಲ್ಲಿ ಎಸ್ಪಿ ನಕಲಿ ಖಾತೆ ತೆರೆದು ಲಕ್ಷಾಂತರ ರೂ. ವಂಚನೆ; ಆರೋಪಿಯ ಬಂಧನ
ವಿಜಯಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ಹೆಸರನ್ನೇ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಇಲ್ಲಿನ ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.ಬಂಧಿತನನ್ನು ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಸುರೇಶ ಅಥಣಿ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.ಈ ಕುರಿತು ವಿಜಯಪುರ ನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು, “ಆರೋಪಿ ಹಣಮಂತ ಭಜಂತ್ರಿ ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್…
-

ಸಂಬಂಧಿಕರ ಮನೆಯಲ್ಲೇ ಕಳ್ಳತನ: ಯುವತಿ ಹಾಗೂ ಆಕೆಯ ಗೆಳೆಯ ಪೊಲೀಸ್ ವಶಕ್ಕೆ
ಬಂಟ್ವಾಳ: ಬೋಳ್ಪಾಡಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾಳ್ತಿಲ ನಿವಾಸಿ ಪೃಥ್ವಿ (18) ಹಾಗೂ ಮಂಗಳೂರಿನ ಸುರತ್ಕಲ್ ನಿವಾಸಿ ಕಿಶಾನ್ (22) ಎಂದು ಗುರುತಿಸಲಾಗಿದೆ.ಇವರಿಬ್ಬರು ಪರಸ್ಪರ ಪರಿಚಯಸ್ಥರು ಹಾಗೂ ಗೆಳೆಯರಾಗಿದ್ದರು. ಬಾಳ್ತಿಲ ಗ್ರಾಮದ ರೋಹಿನಿ ಅವರು ಒಬ್ಬರೇ ಮನೆಯಲ್ಲಿರುವಾಗ ಜೂ.1 ರಂದು ಮುಂಜಾನೆ ಕಳ್ಳತನ ನಡೆದಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸಮೀಪದ ಮನೆಯ…
-

ಗಡಾಯಿಕಲ್ಲು ಟ್ರೆಕ್ಕಿಂಗ್ ವೇಳೆ ಅವಘಡ; ಬೆಟ್ಟದ ಮಧ್ಯೆ ಸಿಲುಕಿದ ಯುವಕ
ಬೆಳ್ತಂಗಡಿ: ಪ್ರಸಿದ್ಧ ಪ್ರವಾಸಿ ತಾಣವಾದ ಗಡಾಯಿಕಲ್ಲು (ನರಸಿಂಹಗಡ) ಕೋಟೆಯ ಕಡಿದಾದ ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಯುವಕನೊಬ್ಬನ ಕಾಲು ಟ್ವಿಸ್ಟ್ ಆಗಿ, ಆತ ಕೆಳಗೆ ಇಳಿಯಲಾರದೆ ಸಿಲುಕಿಕೊಂಡಿದ್ದ ಘಟನೆ ಜೂನ್ 4 ರಂದು ನಡೆದಿದೆ. ಬಳಿಕ ರಕ್ಷಣಾ ಸಿಬ್ಬಂದಿ 3 ಗಂಟೆಗಳ ಕಾರ್ಯಾಚರಣೆ ನಡೆಸಿ ಯುವಕನನ್ನು ಸುರಕ್ಷಿತವಾಗಿ ಕೆಳಗೆ ಕರೆತಂದಿದ್ದಾರೆ.ತಣ್ಣಿರುಪಂಥ ಗ್ರಾಮದ ಜನತಾ ಕಾಲೋನಿ ನಿವಾಸಿ ಮೊಹಮ್ಮದ್ ಶರೀಫ್ (30) ರಕ್ಷಿಸಲ್ಪಟ್ಟ ಯುವಕ. ಈತ ಇಬ್ಬರು ಮಹಿಳೆಯರು ಸೇರಿದಂತೆ ಇತರ ಮೂವರೊಂದಿಗೆ ಗಡಾಯಿಕಲ್ಲು ಪ್ರವಾಸಕ್ಕೆ ತೆರಳಿದ್ದ ಎನ್ನಲಾಗಿದೆ.ಕಡಿದಾದ ಬಂಡೆಯ ಮೆಟ್ಟಿಲುಗಳನ್ನು…
-

ಸಚಿವ ಸಂಪುಟದಲ್ಲಿ ಯು.ಟಿ. ಖಾದರ್ಗೆ ಮಹತ್ವದ ಸ್ಥಾನ: ಅನುಭವಕ್ಕೆ ಸಂದ ಗೌರವ
ಮಂಗಳೂರು:ಸಾರ್ವಜನಿಕ ಜೀವನದಲ್ಲಿ ಸರಳತೆ, ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿರುವ ಯು.ಟಿ. ಖಾದರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಹೊಸ ಜವಾಬ್ದಾರಿ ದೊರೆತಿರುವುದು ಕ್ಷೇತ್ರದ ಜನರಲ್ಲಿ ಸಂತಸವನ್ನುಂಟು ಮಾಡಿದೆ.ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟ ಸುಧಾರಣೆಗೆ ವಿಶೇಷ ಒತ್ತು ನೀಡಿದ್ದ ಖಾದರ್, ಗ್ರಾಮೀಣ ಪ್ರದೇಶಗಳು ಹಾಗೂ ಬಡ ವರ್ಗದ ಜನರಿಗೆ ಆರೋಗ್ಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಇನ್ನಷ್ಟು ಸುಲಭವಾಗಿ ದೊರೆಯುವಂತೆ…
-

ಡಿಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್ಗೆ ಶಾಕ್! ರಾಜಕೀಯ ವಲಯದಲ್ಲಿ ಭಾರಿ ಚರ್ಚೆ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ಗೆ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ ಆಂತರಿಕ ಭಿನ್ನಮತ ಹಾಗೂ ಬಂಡಾಯವೇ ಜಮೀರ್ಗೆ ಹಿನ್ನಡೆಯಾಗಲು ಪ್ರಮುಖ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











