Author: News Editor
-

ವಾಟ್ಸಾಪ್ ಸಂದೇಶ ನಂಬಿ ಲಕ್ಷಾಂತರ ಕಳೆದುಕೊಂಡ ಯುವಕ; ಸೈಬರ್ ಖದೀಮರ ಆಟ ಬಯಲು
ಮಂಗಳೂರು : ಟೆಲಿಗ್ರಾಂ ಮತ್ತು ವಾಟ್ಸಾಪ್ ಆ್ಯಪ್ಗಳ ಮೂಲಕ ಆನ್ಲೈನ್ ಟ್ರೇಡಿಂಗ್ ಹಾಗೂ ಗೇಮಿಂಗ್ ನೆಪದಲ್ಲಿ ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಯುವಕನೊಬ್ಬನಿಗೆ ಬರೊಬ್ಬರಿ 5,31,000 ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರು ಅಪರಿಚಿತ ವಂಚಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ದೂರಿನ ವಿವರಗಳ ಪ್ರಕಾರ, ಸಂತ್ರಸ್ತ ಯುವಕ 2025 ರಲ್ಲಿ ತನ್ನ ಮನೆಯಲ್ಲಿ ಮೊಬೈಲ್ನಲ್ಲಿ ಟೆಲಿಗ್ರಾಂ ಖಾತೆಯನ್ನು ವೀಕ್ಷಿಸುತ್ತಿದ್ದಾಗ, ಆನ್ಲೈನ್ ಗೇಮಿಂಗ್ ಮತ್ತು ಟ್ರೇಡಿಂಗ್ಗೆ ಪ್ರಸಿದ್ಧ…
-

ಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವಕುಮಾರ್, ಸಚಿವರಾಗಿ ಯು.ಟಿ.ಖಾದರ್, ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ರವರಿಗೆ ಅಭಿನಂದನೆಗಳು: ಕೆ.ಅಶ್ರಫ್
ಮಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಡಿ. ಕೆ .ಶಿವಕುಮಾರ್ ,ಸಚಿವರಾಗಿ ಯು. ಟಿ.ಖಾದರ್ ರವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಅಭಿನಂದನೆಗಳು. ನೂತನ ಆಡಳಿತದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಆಗಲಿ ಮತ್ತು ಮತೀಯ ಸೌಹಾರ್ದತೆ ಉತ್ತಮವಾಗಿ ಕೋಮುವಾದಿ ಶಕ್ತಿಗಳ ನಿಯಂತ್ರಣ ಆಗಲಿ. ಅನುಭವಿ ರಾಜಕಾರಣಿ ಆದ ಶ್ರೀ ಯು.ಟಿ.ಖಾದರ್ ರವರು ತಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕ ಜನತೆಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ, ಪರಿಷತ್ ಸ್ಥಾನಕ್ಕೆ…
-

ಸ್ನ್ಯಾಪ್ಚಾಟ್ ಚಾಟಿಂಗ್ನಿಂದ ಆರಂಭವಾದ ಪರಿಚಯ; ಲಕ್ಷಾಂತರ ರೂಪಾಯಿ ವಂಚನೆಯಾಗಿ ಅಂತ್ಯ
ಪುತ್ತೂರು: ಸ್ನ್ಯಾಪ್ಚಾಟ್ ಸಾಮಾಜಿಕ ಜಾಲತಾಣದ ಮೂಲಕ ಯುವತಿಯ ಸೋಗಿನಲ್ಲಿ ಪರಿಚಯವಾಗಿ, ಹಣಕಾಸಿನ ತೊಂದರೆಯ ನೆಪವೊಡ್ಡಿ ಪುತ್ತೂರು ನಿವಾಸಿಯೊಬ್ಬರಿಗೆ ಬರೊಬ್ಬರಿ 4,84,203 ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಂಚಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.ಪೊಲೀಸ್ ದೂರಿನ ವಿವರಗಳ ಪ್ರಕಾರ, ಪುತ್ತೂರಿನ ನಿವಾಸಿಯಾದ ಸಂತ್ರಸ್ತರಿಗೆ ಕಳೆದ 2025 ರ ಡಿಸೆಂಬರ್ ತಿಂಗಳಿನಲ್ಲಿ ಸ್ನ್ಯಾಪ್ಚಾಟ್ ಆ್ಯಪ್ನಲ್ಲಿ ‘annapornagowd26’ ಎಂಬ ಐಡಿಯಿಂದ ಮೆಸೇಜ್ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ತಾನು ಬೆಂಗಳೂರಿನ ಪ್ರಸಿದ್ಧ…
-

ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಕ್ಷಣ: ಜೀಪ್-ಬೈಕ್ ಡಿಕ್ಕಿಗೆ ಯುವಕ ಬಲಿ
ತೆಕ್ಕಟ್ಟೆ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್ನಲ್ಲಿ ಜೂನ್ 2ರ ಮಂಗಳವಾರ ತಡರಾತ್ರಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆಕ್ಕಟ್ಟೆ ಸರ್ಕಲ್ ರಸ್ತೆಯಾಗಿ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೇಗವಾಗಿ ಬಂದ…
-

ಯುಟಿ ಖಾದರ್ ಸೇರಿ 14 ಮಂದಿಗೆ ಸಚಿವ ಸ್ಥಾನ; ಇಂದು ಪ್ರಮಾಣ ವಚನ
ಬೆಂಗಳೂರು: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ 14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಪ್ರಮುಖ ರಾಜಕೀಯ ಕಾರ್ಯಕ್ರಮಕ್ಕಾಗಿ ಬರುವ ನಿರೀಕ್ಷೆಯಿರುವ ಲೋಕ ಭವನದಲ್ಲಿ ನಿಗದಿಯಾಗಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಈ ಅನುಮೋದನೆಗಳು ಬಂದಿವೆ.ವರದಿಗಳ ಪ್ರಕಾರ, ಹೊಸ…
-

ಸಿನಿಮೀಯ ಚೇಸ್: ಅರಣ್ಯ ಇಲಾಖೆಯ ವಾಹನ ಕದ್ದ ಯುವಕನ ಬಂಧನ
ಮಂಗಳೂರು : ಪಡೀಲ್ನಲ್ಲಿರುವ ಅರಣ್ಯ ಇಲಾಖೆಯ ವಸತಿಗೃಹದ ಬಳಿ ನಿಲ್ಲಿಸಲಾಗಿದ್ದ ಆರಣ್ಯ ಇಲಾಖೆಯ ಅಧಿಕೃತ ವಾಹನವನ್ನೇ ಕದ್ದು ಪರಾರಿಯಾಗಿದ್ದ ಕೇರಳ ಮೂಲದ ಖದೀಮನನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇವಲ ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ನಿವಾಸಿ ನದೀಮ್ (23) ಬಂಧಿತ ಆರೋಪಿಯಾಗಿದ್ದಾನೆ.ಮಂಗಳೂರು ಪಡೀಲ್ನ ಅರಣ್ಯ ಇಲಾಖೆಯ ವಸತಿ ಗೃಹದ ಆವರಣದಲ್ಲಿ ಸಂಚಾರಿ ದಳದ ಆರ್ಎಫ್ಒ (RFO) ಸಂತೋಷ್ ರೈ ಅವರಿಗೆ ಸೇರಿದ ವಾಹನವನ್ನು ಚಾಲಕ ಸೋಮವಾರ…
-

ಬೆಳ್ತಂಗಡಿಯಲ್ಲಿ ಸಂಚಲನ ಮೂಡಿಸಿದ್ದ ಕೊಲೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿ ಕೊಟ್ಟಿಗೆಯಲ್ಲಿ ಸೋಮವಾರ ನಡೆದಿದ್ದ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರೋಪಿಗಳಾದ ಬೆಳ್ತಂಗಡಿಯ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬದ ಚಾರ್ವಾಕ ನಿವಾಸಿ ಮೋಹನ್ (30) ಮತ್ತು ಬೆಳ್ತಂಗಡಿಯ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂಬುವವರನ್ನು ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಆರೋಪಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಯತೀಶ್ ಗೌಡ ಅವರ…
-

ರೈಲಿನಲ್ಲಿ ರೌಡಿಸಂ! ಸಹ ಪ್ರಯಾಣಿಕನ ಮೇಲೆ ಹಲ್ಲೆ, ಬಂಟ್ವಾಳದಲ್ಲಿ RPF ಕಾರ್ಯಾಚರಣೆ
ಕಡಬ:ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬೋಗಿಯಲ್ಲಿದ್ದ ಇತರ ಪ್ರಯಾಣಿಕರು…
-

ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ ತಾಯಿ;ಬಾಲಕ niguda ನಾಪತ್ತೆ
ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ…
-

‘ಯಾರದ್ದೋ ಪಾಸ್ಪೋರ್ಟ್, ಯಾರದ್ದೋ ಪ್ರಯಾಣ’ : ಉಳ್ಳಾಲದಲ್ಲಿ ನಡೆದಿರುವ ಭಾರಿ ಹಗರಣದ ಸತ್ಯ ಹೊರಬರುವುದು ಯಾವಾಗ?
ಮಂಗಳೂರು: ಬೇರೊಬ್ಬರ ದಾಖಲೆಗಳನ್ನು ಬಳಸಿ ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಇಸ್ರೇಲ್ಗೆ ತೆರಳಿದ ಪ್ರಕರಣವನ್ನು ಮಂಗಳೂರು ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿರುವುದು ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ಹಲವು ಗಂಭೀರ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಉಳ್ಳಾಲದ ಮಹಿಳೆಯೊಬ್ಬರ ಹೆಸರಿನ ದಾಖಲೆಗಳನ್ನು ಬಳಸಿ ಮತ್ತೋರ್ವ ಮಹಿಳೆಗೆ ಪಾಸ್ಪೋರ್ಟ್ ಮಾಡಿಕೊಡಲಾಗಿದೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಆದರೆ ಈ ಪ್ರಕರಣ ಕೇವಲ ಒಂದು ಘಟನೆಯೇ, ಅಥವಾ ವರ್ಷಗಳಿಂದ ನಡೆಯುತ್ತಿರುವ ದೊಡ್ಡ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











