Author: News Editor
-

ಬಿಟ್ ಕಾಯಿನ್ ಬಹುಕೋಟಿ ಹಗರಣ: ED ಸತತ ತನಿಖೆ ಮುಂದುವರಿಕೆ, ನಲಪಾಡ್ ವಿಚಾರಣೆ
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಮತ್ತೆ ಶಾಕ್ ಎದುರಾಗಿದೆ. ಸೋಮವಾರ (ಜೂ.1) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್ ನೀಡಿದೆ. ನಲಪಾಡ್ ವಿಚಾರಣೆ ಗೆ ಹಾಜರಾಗುವಂತೆ ಕಳೆದ ಶುಕ್ರವಾರವೇ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಆದ್ರೆ ಪ್ರಸ್ತುತ ರಾಜಕೀಯ ಬೆಳವಣಿಗೆಯಿಂದಾಗಿ ವಿನಾಯ್ತಿ ನೀಡಿತ್ತು. ಇದೀಗ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ಬಿಟ್ ಕಾಯಿನ್ ಬಹುಕೋಟಿ ಹಗರಣದಲ್ಲಿ ಮೂವರನ್ನು ಬಂಧಿಸಿರುವ ಇಡಿ ತನಿಖೆ ತೀವ್ರಗೊಳಿಸಿದೆ. ಸತತ 21…
-

ಮಂಗಳೂರು: ಬೀದಿ ಬದಿ ವ್ಯಾಪಾರಿಗೆ ನಿಂದನೆ ಆರೋಪ, ಪ್ರಸನ್ನ ರವಿ ಮತ್ತು ಕ್ಯಾಮರಾಮನ್ ಅಜಯ್ ಅಂಚನ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಗರದ ಸ್ಟೇಟ್ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ…
-

ಜನಜಂಗುಳಿಯ ರೈಲು ನಿಲ್ದಾಣದಲ್ಲಿ ದಾರಿ ತಪ್ಪಿದ ಮಗು; ಕ್ಷಿಪ್ರ ಕಾರ್ಯಾಚರಣೆಯಿಂದ ಸುರಕ್ಷಿತ ರಕ್ಷಣೆ
ಚೆನ್ನೈ : ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸರ (GRP) ಮಿಂಚಿನ ಕಾರ್ಯಾಚರಣೆಯಲ್ಲಿ ರೈಲು ನಿಲ್ದಾಣದ ಭಾರಿ ಜನಸಂದಣಿಯಲ್ಲಿ ದಾರಿ ತಪ್ಪಿದ್ದ 5 ವರ್ಷದ ಪುಟ್ಟ ಬಾಲಕಿಯೊಬ್ಬಳನ್ನು ಕೇವಲ ಕೆಲವೇ ನಿಮಿಷಗಳಲ್ಲಿ ಸುರಕ್ಷಿತವಾಗಿ ರಕ್ಷಿಸಿ ಆಕೆಯ ಪೋಷಕರಿಗೆ ಒಪ್ಪಿಸಿದ ಘಟನೆ ಚೆನ್ನೈ ಎಗ್ಮೋರ್ ರೈಲು ನಿಲ್ದಾಣದಲ್ಲಿ ನಡೆದಿದೆ.ನಿನ್ನೆ ಸಂಜೆ ಸುಮಾರು 5 ಗಂಟೆಯ ವೇಳೆಗೆ ಚೆನ್ನೈ ಎಗ್ಮೋರ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 5 ರಲ್ಲಿ ಕನ್ಯಾಕುಮಾರಿ ಎಕ್ಸ್ಪ್ರೆಸ್ ರೈಲು ಹೊರಡಲು ಸಿದ್ಧವಾಗಿ…
-

ಗನ್ ಲೈಸೆನ್ಸ್ ಪ್ರಕ್ರಿಯೆ ಪಾರದರ್ಶಕ: ಹೊಸ ಆನ್ಲೈನ್ ಟ್ರ್ಯಾಕಿಂಗ್ ಪೋರ್ಟಲ್ ಜಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಗೊಂದಲದ ಗೂಡಾಗಿದ್ದ ಗನ್ ಲೈಸೆನ್ಸ್ ನವೀಕರಣ ಪ್ರಕ್ರಿಯೆಗೆ ಕೊನೆಗೂ ಡಿಜಿಟಲ್ ರೂಪ ನೀಡಲಾಗುತ್ತಿದ್ದು, ಜೂನ್ 1 ರಿಂದ ಹೊಸ ಆನ್ಲೈನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯು ಹೊಸ ಲೈಸೆನ್ಸ್ ಅರ್ಜಿಗಳು ಹಾಗೂ ನವೀಕರಣಗಳ ಸ್ವೀಕಾರ, ಪರಿಶೀಲನೆ ಮತ್ತು ಟ್ರ್ಯಾಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಸುಲಭ ಹಾಗೂ ಪಾರದರ್ಶಕಗೊಳಿಸಲಿದೆ. ಸುಮಾರು 15 ರಿಂದ 20 ದಿನಗಳ ಕಾಲ ನಡೆಸಲಾದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆಯ ನಂತರ ಆನ್ಲೈನ್ ವ್ಯವಸ್ಥೆ ಸಂಪೂರ್ಣವಾಗಿ ಸಿದ್ಧಗೊಂಡಿದೆ.…
-

ಬೀದರ್ ಆಸ್ಪತ್ರೆಯಲ್ಲಿ ವಿಕೃತ ಕೃತ್ಯ: ಶವಾಗಾರದಲ್ಲಿ ಮಹಿಳೆಯರ ಫೋಟೋ ತೆಗೆದ ಸಿಬ್ಬಂದಿ ಬಂಧನ
ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ…
-

ನೇಮಕಾತಿಯಿಂದ ಪಿಎಚ್ಡಿ ತನಕ ಅಕ್ರಮಗಳ ಆರೋಪ: ಅಕ್ಕಮಹಾದೇವಿ ಮಹಿಳಾ ವಿವಿ ವಿವಾದದ ಕೇಂದ್ರಬಿಂದು
ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಇನ್ನು ಪಿಹೆಚ್ಡಿ ಪದವಿ ಪ್ರದಾನ ವಿಚಾರದಲ್ಲೂ ಭ್ರಷ್ಟಾಚಾರ, ಕಿರುಕುಳ ಆರೋಪ ಕೇಳಿಬಂದಿವೆ. ಸರ್ಕಾರದ ಹಾಗೂ ಮೀಸಲಾತಿ ನಿಯಮಾವಳಿಗಳಿಗೆ ಅನುಗುಣವಾಗಿ ಪಿಹೆಚ್.ಡಿ ಪ್ರವೇಶಾತಿಯನ್ನು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳ…
-

ಅಪಘಾತದ ರಭಸಕ್ಕೆ ಚೂರಾದ ಬೈಕ್: ಖಾಸಗಿ ಬಸ್ ಡಿಕ್ಕಿಗೆ ನಾಲ್ವರು ಸವಾರರ ದುರ್ಮರಣ
ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್ಗೆ…
-

ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸ್ಪೀಕರ್ ಯು.ಟಿ ಖಾದರ್ ಗೆ ಡಿಸಿಎಂ ಪಟ್ಟ?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಪರ್ವ ಮುಗಿಯುತ್ತಿದ್ದಂತೆ, ಇದೀಗ ಎಲ್ಲರ ಕಣ್ಣು ನೂತನ ಸಚಿವ ಸಂಪುಟದ ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಕುರ್ಚಿ ಏರಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಯಾವ ರೀತಿಯ ಟೀಮ್ ನೀಡಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಭಾರಿ ಸರ್ಜರಿಗೇ ಕೈಹಾಕಿದೆ. ವಿಶೇಷವಾಗಿ, ಹೊಸ ಸಂಪುಟದಲ್ಲಿ ಯುವಕರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಟ್ಟು ಹಿಡಿದಿದ್ದಾರೆ.…
-

ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ; ಒಂದೇ ಕುಟುಂಬದ 6 ಜನರ ಬರ್ಬರ ಕೊಲೆ
ವಿಜಯಪುರ : ದೀರ್ಘಕಾಲದ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯು ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ ಶುರುವಾಗಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ…
-

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗೆ ಲೋಕಾಯುಕ್ತ ದಾಳಿ..!!
ಉಡುಪಿ: ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು, ಇಂದು (29/05/2026) ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು ಲೋಕಾಯುಕ್ತ ಎಸ್.ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀಮತಿ ಭಾರತಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಾಳಿಯ ವೇಳೆ ವಿಲೇವಾರಿಗೆ ಬಾಕಿಯಿದ್ದ ಹಲವಾರು ಕಡತಗಳು ಪತ್ತೆ,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











