Author: News Editor
-

ಕಡಬ : ರಸ್ತೆ ಕಾಮಗಾರಿ ವಿಚಾರ-ಮಹಿಳೆಗೆ ಜಾತಿನಿಂದನೆ, ಹಲ್ಲೆ ಆರೋಪ; ಪ್ರಕರಣ ದಾಖಲು
ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.…
-

ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಇಬ್ಬರ ಬಂಧನ, ಚಿನ್ನ ವಶಕ್ಕೆ
ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ದೂರುದಾರೆಯ ತಂದೆಗೆ ಆರೋಪಿತೆ ಶೃತಿ @ ವಿಶ್ಮೀತ(37) ಎಂಬಾಕೆಯೊಂದಿಗೆ ಸಂಪರ್ಕವಿದ್ದು, ಆಕೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಆರೋಪಿತೆ ಅದನ್ನು ಮರಳಿಸುವುದಾಗಿ ಹೇಳಿ ಏಪ್ರಿಲ್ 7ರಂದು ಪುಣ್ಯಶ್ರೀಯ ಮನೆಗೆ ಬಂದಿದ್ದಳು ಎನ್ನಲಾಗಿದೆ. ಆ ದಿನ ಪುಣ್ಯಶ್ರೀ…
-

ರಸ್ತೆ ಕಾಮಗಾರಿ ವಿಚಾರವಾಗಿ ಮಹಿಳೆಗೆ ಜಾತಿನಿಂದನೆ..! ಹಲ್ಲೆ ಆರೋಪ- ನಾಲ್ವರ ವಿರುದ್ಧ ಪ್ರಕರಣ ದಾಖಲು
ಕಡಬ: ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿರೋಧ ವ್ಯಕ್ತಪಡಿಸಿದ ಮಹಿಳೆಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಪ್ರಕಾರ, ಅವರು ದಿನಾಂಕ 08-04-2026ರಂದು ಕೂಲಿ ಕೆಲಸ ಮಾಡುತ್ತಿದ್ದ ಮನೆಯ ಸಮೀಪದ ರಸ್ತೆಯಲ್ಲಿ JCB ಮೂಲಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಜಾಗದ ಮಾಲಿಕರ ಸಮ್ಮುಖದಲ್ಲಿ ಕೆಲಸ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.…
-

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ..!!
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ(15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 2000 ಅಡಿ ಆಳದ ಪ್ರಪಾತದಲ್ಲಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ(ಏ.7) 41 ಮಂದಿ ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀನಂದಾ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ…
-

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್ ಜಾರಿ
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ . ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ…
-

ಉಡುಪಿ: ಕಾರ್ತಿಕ್ ಆಚಾರ್ ಗೆ ಗಡಿಪಾರು ಆದೇಶ..!!
ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್, ತಂದೆ: ವೆಂಕಟರಮಣ ಅಚಾರ್, ವಾಸ: ಮನೆ ನಂಬ್ರ 2/37, ಕಾರ್ತಿಕ ನಿಲಯ, ಹೊಸಿಮನೆ, ಇಡೂರು ಕುಂಜ್ಞಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 09.04.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ. ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಈತನನ್ನು…
-

ಮಂಗಳೂರು: ಇಬ್ಬರು ಕ್ರಿಮಿನಲ್ಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ..!!
ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್ಪೋಲ್ ಮೂಲಕ ಪೊಲೀಸ್ ಇಲಾಖೆ ರೆಡ್ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ (38) ಮತ್ತು ಶಂಶುದ್ದೀನ್ (36) ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 2017ರಲ್ಲಿ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ ನಗರದ ಲೇಡಿಹಿಲ್ ಬಳಿ ಉರ್ವ ಠಾಣೆಯಲ್ಲಿ ಆಗ ಎಎಸ್ಸೈ ಆಗಿದ್ದ ಐತಪ್ಪ ಮೇಲೆ ರಾಡ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. 2013ರಲ್ಲಿ…
-

ಮಂಗಳೂರಿನಲ್ಲಿ ಬ್ಲ್ಯಾಕ್ ಗ್ಯಾಸ್ ದಂಧೆ!! ದುಬಾರಿ ಬೆಲೆಗೆ LPG ಗ್ಯಾಸ್ ಮಾರಟ
ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯ ಲಾಭ ಪಡೆದು ಕೆಲವರು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ಗಳನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.ಮಂಗಳೂರು ನಗರದ ಅಳಕೆ, ಕುದ್ರೋಳಿ, ಜೆಪ್ಪು, ಕಾರ್ ಸ್ಟ್ರೀಟ್ ಸೇರಿದಂತೆ ವಿವಿಧೆಡೆ ದುಬಾರಿ ಬೆಲೆಗೆ LPG ಮಾರಾಟ ಮಾಡುತ್ತಿದ್ದಾರೆ. ಪ್ರಮುಖವಾಗಿ, ವಾಣಿಜ್ಯ ಬಳಕೆಯ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವುದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತವನ್ನು ನೀಡುತ್ತಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಕಾಳಸಂತೆ ಮಾರಾಟಗಾರರು ದುಪ್ಪಟ್ಟು ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ. ಸಿಲಿಂಡರ್’ಗಳಿಗೆ 3,200 – 3,500 ರೂಪಾಯಿವರೆಗೆ…
-

ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಪತ್ತೆ
ಗುರುಪುರ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂಬವರ ಮೃತದೇಹ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ಬುಧವಾರ ಸಂಜೆ 6:30ಕ್ಕೆ ಗುರುಪುರದತ್ತ ಸ್ಕೂಟರ್ ನಲ್ಲಿ ಆಗಮಿಸಿದ್ದ ಕೌಶಿಕ್ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರು ಎನ್ನಲಾಗಿದೆ. ಕತ್ತಲಾದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇಂದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಯು ಕೌಶಿಕ್ಗಾಗಿ ಹುಡುಕಾಟ ಆರಂಭಿಸಿದ್ದರು. ಪಾಣೆಮಂಗಳೂರಿನ ಮುಳುಗು ತಜ್ಞರು ಕೂಡ ಆಗಮಿಸಿ ಸೇತುವೆ ಕಂಬಗಳ…
-

ಗುರುಪುರ ನದಿಗೆ ಹಾರಿ ಯುವಕ ಆತ್ಮಹತ್ಯೆ!!
ಮಂಗಳೂರು: ಗುರುಪುರ ಸಮೀಪದ ಶಾಂಭವಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರನ್ನು ಕೌಶಿಕ್ (21) ಎಂದು ಗುರುತಿಸಲಾಗಿದೆ. ಇವರು ಬಸ್ ಏಜೆಂಟ್ ಹಾಗೂ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೌಶಿಕ್ ಅವರು ತಮ್ಮ ಸ್ಕೂಟರನ್ನು ಸೇತುವೆಯ ಮೇಲೆ ನಿಲ್ಲಿಸಿ ಬಳಿಕ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











