Author: News Editor
-

ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ..!! ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್
ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ…
-

ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯು ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ.? ಎಂದು ಕೇಳಿ ಬೆದರಿಕೆ ಆರೋಪ- ಕೇಸು ದಾಖಲು
ಐವರ್ನಾಡು ಗ್ರಾಮದ ಮಡ್ತಿಲದಲ್ಲಿ ಮಡ್ತಿಲ ಕುಟುಂಬದ ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯು ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ.? ಎಂದು ಕೇಳಿ ಬೆದರಿಕೆ ಒಡ್ಡಿರುವುದಾಗಿ ಮಮತಾ ಭಾಸ್ಕರ ಮಡ್ತಿಲ ಎಂಬವರು ನೀಡಿರುವ ಪಿರ್ಯಾದಿಯನ್ನು ದಾಖಲಿಸಿಕೊಂಡು ತನಿಖೆ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸುಳ್ಯ ನ್ಯಾಯಾಲಯವು ಆದೇಶ ನೀಡಿದ ಮೇರೆಗೆ ಬೆಳ್ಳಾರೆ ಪೊಲೀಸರು ದೈವಧಾರಿ ಮೋಹನ ಮತ್ತು ದೈವದ ಮೂಲಕ ಆ ರೀತಿ ಬೆದರಿಕೆ ಒಡ್ಡಿಸಿದ ಆರೋಪಕ್ಕೊಳಗಾಗಿರುವ ಸಚಿನ್ ಮಡ್ತಿಲ ಎಂಬವರ ಮೇಲೆ ಏಪ್ರಿಲ್ 7 ರಂದು ಕೇಸು…
-

ಮಂಗಳೂರು: ದಕ್ಕೆ ತೀರದ ನದಿಯಲ್ಲಿ ಶವ ಪತ್ತೆ!!
ಮಂಗಳೂರು: ಮೀನುಗಾರಿಕೆ ಬಂದರು (ದಕ್ಕೆ) ತೀರದ ನದಿಯಲ್ಲಿ ನಾಸಿರ್ ಯಾನೆ ದಕ್ಕೆ ನಾಸಿರ್ ಎಂಬಾತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ…
-

ಬಂಟ್ವಾಳ: ಕಾರು ವೀಲಿಂಗ್; ಆರೋಪಿ ಸಹಿತ ವಾಹನ ಪೊಲೀಸ್ ವಶಕ್ಕೆ
ಬಂಟ್ವಾಳ: ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೀಲಿಂಗ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಸಹಿತ ಕಾರನ್ನು ಬಂಟ್ವಾಳ ಟ್ರಾಫಿಕ್ ಎಸ್.ಐ. ಆದರ್ಶ್ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ನಿನ್ನೆ (ಏ.07) ನಡೆದಿದೆ. ಕಾರು ವೀಲಿಂಗ್ ಮಾಡಿದ ಸರ್ಫುದ್ದೀನ್ ಸಹಿತ ಕಾರನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾರು ವೀಲಿಂಗ್ ಮಾಡುವ ವಿಡಿಯೋ ಒಂದನ್ನು ವೈರಲ್ ಮಾಡಿ,…
-

ಆರೀಫ್ ಹತ್ಯೆ ಪ್ರಕರಣ: ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು : ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಎಂದು ತಿಳಿದುಬಂದಿದೆ. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ…
-

ಬಂಟ್ವಾಳ : ದ್ವಿಚಕ್ರ ವಾಹನ ಕಳವು – ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವಾ (55) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಇರ್ಶಾದ್ (37) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ…
-

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಿಂದ ಕಾಣಿಕೆ ಡಬ್ಬಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026, ಕಲಂ 303(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಏಪ್ರಿಲ್ 6ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿ…
-

ಗಮನಿಸಿ; ಟೋಲ್ಗಳಲ್ಲಿ ಏ.10ರಿಂದ ನಗದು ಸ್ವೀಕಾರ ಸಂಪೂರ್ಣ ಬಂದ್!
ನವದೆಹಲಿ : ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಬರುವ ಏಪ್ರಿಲ್ 10, ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ಸ್ವೀಕಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದೆ. ಹೆದ್ದಾರಿಗಳಲ್ಲಿ ಸುಗಮ ಸಂಚಾರ ಮತ್ತು ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು ಶೂನ್ಯಕ್ಕೆ ಇಳಿಸುವ ಉದ್ದೇಶದಿಂದ ಈ ಕ್ರಾಂತಿಕಾರಿ ಡಿಜಿಟಲೀಕರಣದ ಕ್ರಮ ಕೈಗೊಳ್ಳಲಾಗಿದೆ. ಈ ಹೊಸ ನಿಯಮದ ಪ್ರಕಾರ,…
-

ಅಡ್ಡೂರು ಕೋಡಿಬೆಟ್ಟುವಿನಲ್ಲಿ ಭಾರಿ ಪ್ರಮಾಣದ ಅಕ್ರಮ ಮರಳು ದಾಸ್ತಾನು!! ಕಣ್ಮುಚ್ಚಿ ಕುಳಿತ ಗಣಿ ಇಲಾಖೆ
ಮಂಗಳೂರು: ಅಡ್ಡೂರು ಕೋಡಿಬೆಟ್ಟು ಎಂಬಲ್ಲಿ ಸುಮಾರು 2,500 ದಿಂದ 3,000 ಲೋಡು ವರೆಗೆ ಅಕ್ರಮವಾಗಿ ಮರಳು ಸಂಗ್ರಹಿಸಿದ್ದು , ಇದಕ್ಕೆ ಯಾವುದೇ ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ. ಈ ರೀತಿ ಕಾನೂನಿನ ಬಾಹಿರವಾಗಿ ಮರಳು ಸಂಗ್ರಹಿಸಿವವರ ವಿರುದ್ದ ಗಣಿಗಾರಿಕೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಗಣಿ ಇಲಾಖೆಯ ಅಧಿಕಾರಿಗಳಿಗೂ ಇದರ ಬಗ್ಗೆ ಪಾಲು ಇದೆ ಎಂಬ ಸಂಶಯ ಮೇಲ್ನೋಟಕ್ಕೆ ಕಾಣಿಸುತ್ತದೆ?? ಅಷ್ಟು ದೊಡ್ಡ ಮರಳು ದಾಸ್ತಾನಿಗೆ ಆದೇಶ ಕೊಟ್ಟವರು ಯಾರು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಮಾನ್ಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











