Author: News Editor
-

ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ!
ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಂದೆಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಹೌದು, ಹೆಣ್ಣು ಮಕ್ಕಳು ಹುಟ್ಟಿದರೆ ಮಹಾಲಕ್ಷ್ಮಿ ಮನೆಗೆ ಬಂದಳು ಎಂದು ಸಂಭ್ರಮಿಸುವ ಈ ಕಾಲದಲ್ಲಿ, ಕೇವಲ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ಹೆತ್ತ ತಂದೆಯೇ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿದ ಭೀಕರ ಘಟನೆ ತೆಲಂಗಾಣದ ಕರೀಮನಗರ ಜಿಲ್ಲೆಯ ಜೂಬ್ಲಿನಗರದಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ:ಜೂಬ್ಲಿನಗರದ ನಿವಾಸಿ, ಖಾಸಗಿ ಉದ್ಯೋಗಿಯಾಗಿರುವ ಕಚ್ಚು ಶ್ರೀಶೈಲಂ ಮತ್ತು ಮೌನಿಕಾ ದಂಪತಿಗೆ…
-

ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ
ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದಾಳೆ. ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ. ಟ್ರೆಕ್ಕಿಂಗ್ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್.…
-

ಉಡುಪಿ: ಗಡಿಪಾರು ಆದೇಶದ ಆರೋಪಿಯ ಬಂಧನ..!!
ಉಡುಪಿ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಓಡಿ ಹೋಗಿದ್ದ ಫೈಝಲ್ ಎಂಬ ಆರೋಪಿಯನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೊರ ಜಿಲ್ಲೆಗೆ ಗಡಿಪಾರು ಆದೇಶವನ್ನು ಜಾರಿ ಮಾಡಲು ಹೋದ ವೇಳೆ ಆರೋಪಿ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ಮಲ್ಪೆ ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಹೋದಾಗ, ಆರೋಪಿ ತಾನು…
-

ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!!
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದು, ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.…
-

ಲಂಚ ಪಡೆದಿದ್ದ ಅಧಿಕಾರಿಗೆ ಜೈಲು ಶಿಕ್ಷೆ: ನ್ಯಾಯಾಲಯದ ಮಹತ್ವದ ತೀರ್ಪು
ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಜಿಲ್ಲಾ ವ್ಯವಸ್ಥಾಪಕರಿಗೆ ಶಿವಮೊಗ್ಗ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಕೆಲವು ವರ್ಷಗಳ ಹಿಂದೆ, ಫಲಾನುಭವಿಯೊಬ್ಬರಿಗೆ ಸಾಲ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಆರೋಪಿ ಅಧಿಕಾರಿಯು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ದೂರು ಸ್ವೀಕರಿಸಿದ್ದ ಲೋಕಾಯುಕ್ತ ಪೊಲೀಸರು, ಲಂಚದ ಹಣವನ್ನು ಪಡೆಯುತ್ತಿದ್ದಾಗಲೇ ಅಧಿಕಾರಿಯನ್ನು ಕೆಂಗೆಣ್ಣಾಗಿ ಬಂಧಿಸಿದ್ದರು. ಅಂದಿನಿಂದ ಈ ಪ್ರಕರಣದ ವಿಚಾರಣೆ ಶಿವಮೊಗ್ಗದ ವಿಶೇಷ…
-

ಸೈಬರ್ ಕಿರುಕುಳಕ್ಕೆ ಬ್ರೇಕ್: ಅನಾಮಧೇಯ ದೂರುಗಳನ್ನೂ ನಿರ್ಲಕ್ಷಿಸಬೇಡಿ! ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಆದೇಶ
ಇಂಟರ್ನೆಟ್ ಲೋಕದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಆನ್ಲೈನ್ ದೂರು ನೀಡುವಾಗ ದೂರುದಾರರು ತಮ್ಮ ಗುರುತನ್ನು ಬಹಿರಂಗಪಡಿಸದಿದ್ದರೂ (Faceless Complaints), ಅಂತಹ ದೂರುಗಳ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ. ಸಮಾಜದ ಭಯ ಅಥವಾ ಮುಜುಗರದಿಂದಾಗಿ ಅನೇಕರು ತಮ್ಮ ಹೆಸರು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಇಂತಹ ‘ಅನಾಮಧೇಯ’ ದೂರುಗಳನ್ನು ಕೇವಲ ತಾಂತ್ರಿಕ ಕಾರಣಗಳಿಗಾಗಿ ವಜಾಗೊಳಿಸಬಾರದು…
-

ವಿಟ್ಲ: ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಗಂಭೀರ..!! ಚಾಲಕ ಮತ್ತು ನಿರ್ವಾಹಕರು ಬೇಜವಾಬ್ದಾರಿಗೆ ಜನ ಆಕ್ರೋಶ
ವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿದ್ದ ಬಸ್ಸೊಂದು ಕಂಡಕ್ಟರ್ ಬೇಜವಾಬ್ದಾರಿಯಿಂದಾಗಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ-ಮುಡಿಪು-ಸ್ಟೇಟ್ಬ್ಯಾಂಕ್ ಸಂಚರಿಸುವ ಮಹೇಶ್ ಹೆಸರಿನ ಖಾಸಗಿ ಬಸ್ (KA 19 AF 4649) ವಿಟ್ಲದ ಖಾಸಗಿ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿತ್ತು. ಇದೇ ಸಂದರ್ಭ ಇನ್ನೊಂದು ಬಸ್ಸಿಂದ ಇಳಿದು ಹೋಗುತ್ತಿದ್ದ ಮಹಿಳೆಗೆ ಮಹೇಶ್ ಬಸ್ ಡಿಕ್ಕಿ ಹೊಡೆದಿದೆ. ಮಹಿಳೆ ಬಸ್ಸಿನ ಅಡಿಗೆ ಬೀಳುತ್ತಿರುವುದನ್ನು ನೋಡನೋಡುತ್ತಲೇ ಸ್ಥಳೀಯ ಜ್ಯೂಸ್ ಅಂಗಡಿ ಮಾಲಿಕ ರಘುಶೆಟ್ಟಿಯವರು ಮತ್ತು ಆಟೋ ಚಾಲಕರು ಸಾಕಷ್ಟು ಬೊಬ್ಬೆ…
-

ಅತ್ಯಾಚಾರ ಪ್ರಕರಣ-ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಂಧನಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್ಸ್ಪೆಕ್ಟರ್ ಸಂದೇಶ್ಗೆ ಹೈಕೋರ್ಟ್ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್, ಇನ್ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್ಸ್ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ…
-

ಮಂಗಳೂರು: RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!! ಮಧ್ಯವರ್ತಿಗಳ ಹಾವಳಿಯಿಂದ ಬೇಸತ್ತ ಜನ
ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲಾಖೆಯಲ್ಲಿ ಬ್ರೋಕರ್ ಗಳ ಕಾರುಬಾರೆ ಜಾಸ್ತಿ, ದಲ್ಲಾಳಿಗಳು ಇಲ್ಲದೇ ಇಲ್ಲಿ ಯಾವುದೇ ಕೆಲಸ ನಡೆಯೊದಿಲ್ಲ. ಅಧಿಕಾರಿಗಳ ಮತ್ತು ದಲ್ಲಾಲಿಗಳ ನಡುವೆ ಹಣದ ರೂಪದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ. ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ದುಡ್ಡು ಕೊಟ್ಟರೆ ಕ್ಷಣಮಾತ್ರದಲ್ಲಿ ನೀಡುತ್ತಾರೆ ಇದಕ್ಕೆಲ್ಲ ಬ್ರೋಕರ್ ಗಳು ಬೇಕೆ ಬೇಕು. ದಲ್ಲಾಳಿಗಳು ಮತ್ತು RTO ಅಧಿಕಾರಿಗಳು RTO ನಿಯಮಗಳನ್ನು ಗಾಳಿಗೆ ತೂರಿ ಲಂಚ ನೀಡಿದರೆ ಯಾವುದೇ ಕಾರ್ಯ…
-

ಕೋಕಾ ಕಾಯ್ದೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳ ಪತ್ತೆಗೆ ಐವತ್ತು ಸಾವಿರ ನಗದು ಬಹುಮಾನ ಘೋಷಣೆ
ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಪ್ರಕರಣದ ಪ್ರಮುಖ ಆರೋಪಿಗಳಾದ ಮನೋಜ ಕೋಡಿಕೆರೆ (42) ಮತ್ತು ಚೇತನ್ ಪಡೀಲ್ @ ಚೇತನ್ ಕುಲಾಲ್ (38) ಪರಾರಿಯಾಗಿದ್ದಾರೆ. ಮನೋಜ ವಿರುದ್ಧ ಮಂಗಳೂರು ನಗರದಲ್ಲಿ 18 ಮತ್ತು ಉಡುಪಿ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಚೇತನ್ ವಿರುದ್ಧ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











