Author: News Editor
-

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ..!! ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆಗೆ ಯತ್ನ..!!
ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ-ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
-

ಉಡುಪಿ: ‘ಸಮಾಧಾನ ಮಹೋತ್ಸವ’ ನಡೆಸಲು ಹೈಕೋರ್ಟ್ ಅನುಮತಿ
ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ. ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ ಚರ್ಚಸ್ ಇದರ ವತಿಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಸುಮಾರು ಐದಾರು ತಿಂಗಳುಗಳಿಂದ ಇದಕ್ಕಾಗಿ ಸಂಪೂರ್ಣ ತಯಾರಿಯನ್ನು ಕೂಡ ನಡೆಸಲಾಗಿದೆ. ಇದರಲ್ಲಿ ಮುಖ್ಯ ಪ್ರವಚನಕಾರರಾಗಿ ಘನ ಮೋಹನ್ ಸಿ.ಲಾಝರಸ್ ಅವರು…
-

ಮಂಗಳೂರು: ಕೊಂಚಾಡಿ ದೇರೆಬೈಲ್ ವ್ಯಾಪ್ತಿಯಲ್ಲಿ ನೀರಿನ ಅಭಾವ..!! ಎಷ್ಟೇ ದೂರು ಕೊಟ್ಟರು ಕ್ಯಾರೇ ಎನ್ನದ ಮ.ನ.ಪಾ ಅಧಿಕಾರಿಗಳು
ಮಂಗಳೂರು : ಕೊಂಚಾಡಿ ದೇರೆಬೈಲ್ ಕರ್ಜಹಿತ್ತಲು ಎಂಬ ವಸತಿ ವ್ಯಾಪ್ತಿಯಲ್ಲಿ ಇಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೀರು, ತುಂಬಾ ಸಮಯದಿಂದ ಇಲ್ಲಿ ನೀರಿನ ಅಬಾವ, ಸ್ಥಳೀಯರು ಎಷ್ಟೇ ದೂರು ಕೊಟ್ಟರು ಸಂಬಂದ ಪಟ್ಟ ಅಧಿಕಾರಿಗಳು ಕ್ಯಾರೆ ಇಲ್ಲಾ, ಇಲ್ಲಿ ಜಾಸ್ತಿಯಾಗಿ ಸರಕಾರಿ ನೌಕರರೆ ಇರುವುದು, ಸ್ಥಳೀಯರು ನಮಗೆ ದೂರು ಕೊಟ್ಟರು, ನಾವು ಪಾಲಿಕೆಗೆ ಫೋನ್ ಮಾಡಿದಾಗ ಇವತ್ತು ಆಗುತ್ತೆ, ನಾಳೆ ಆಗುತ್ತೆ ಎಂದು ಹರಕೆಯ ಉತ್ತರ. ಬೋರ್ವೆಲ್ ಆಗುತ್ತೆ ಅಂತ ಎಷ್ಟೋ ತಿಂಗಳಿಂದ ಕೆಲಸ ನಡೆಯುತ್ತಾ ಇದೆ,ಇಷ್ಟರವರೆಗೆ…
-

ನಾಳೆ (ಮಾ.20) ಉಡುಪಿ-ದ.ಕ ಜಿಲ್ಲೆಯಲ್ಲಿ ಈದ್ ಉಲ್ ಫಿತ್ರ್ ಆಚರಣೆ
ಕರಾವಳಿ ಜಿಲ್ಲೆಗಳಲ್ಲಿ (ಗುರುವಾರ ರಾತ್ರಿ) ಚಂದ್ರನ ದರ್ಶನವಾಗಿರುವುದರಿಂದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶುಕ್ರವಾರ ಈದುಲ್ ಫಿತರ್ ಆಚರಿಸಲಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ. ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಖಚಿತ ಮಾಹಿತಿ ದೊರೆತ ಕಾರಣ ಶುಕ್ರವಾರ (20/03/2026) ಈದುಲ್ ಫಿತ್ರ್ ಆಗಿರುತ್ತದೆ ಎಂದು ಸಲಫಿ ಹಿಲಾಲ್ ಕಮಿಟಿ, ಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.. ಈದುಲ್ ಫಿತರ್ ಹಬ್ಬದ…
-

ಉಳ್ಳಾಲ: ವಿವಾಹಿತ ಮಹಿಳೆಗೆ ಪ್ರಿಯಕರನಿಂದ ಹಲ್ಲೆ, ಕೊಲೆಯತ್ನ..!! ಪ್ರಕರಣ ದಾಖಲು
ಉಳ್ಳಾಲ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆಯನ್ನು ಪ್ರೀತಿ ಪ್ರೇಮ ಎಂದು ಬಲೆಗೆ ಬಿಳಿಸಿ ಬಳಿಕ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಮಿಲ್ಲತ್ ನಲ್ಲಿ ನಡೆದಿದೆ. ಘಟನೆ ವಿವರ:ಪ್ರಕರಣದ ಸಾರಾಂಶ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆ ಒಂದು ವರ್ಷಗಳಿಂದ ಉಳ್ಳಾಲದ ಮಿಲ್ಲತ್ ನಗರದ ಮೊಹಮ್ಮದ್ ಅರ್ಫಾಝ್ ಎಂಬಾತನೊಂದಿಗೆ ಪ್ರೇಮ ಉಂಟಾಗಿ ಸುಮಾರು 06 ತಿಂಗಳಿನಿಂದ ಜೊತೆ ಜೀವನ ನಡೆಸುತ್ತಿದ್ದು, ಇದೀಗ ಆರೋಪಿತನು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆತನು ಮಹಿಳೆಯ ಮನೆಯಲ್ಲಿ ಗಾಂಜಾ ಪ್ಯಾಕ್ ಮಾಡಿ…
-

ಬೆಳ್ತಂಗಡಿ: ಜಾತ್ರೆಯಲ್ಲಿ ಅನ್ಯಜೋಡಿ ಮಾತುಕತೆ..!! ಅನೈತಿಕ ಪೊಲೀಸ್ ಗಿರಿ- ಪ್ರಕರಣ ದಾಖಲು
ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದ್ದು, ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾ. 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್ಗೆ…
-

ಮಂಗಳೂರು : ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್!!
ಮಂಗಳೂರು: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ಬಿಡಲಾಗುತ್ತಿದ್ದು, ಹಣವನ್ನು ಪಣವಾಗಿ ಇಟ್ಟು ಜೂಜಾಟ ನಡೆಯುತ್ತಿತ್ತು. ಮೂಡುಬಿದರೆ…
-

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ !! ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ
ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅವರನ್ನು ಬೆನ್ನಟ್ಟಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವವರು…
-

ಮಂಗಳೂರು: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ- ಆರೋಪಿ ಪೊಲೀಸ್ ವಶಕ್ಕೆ
ಮಂಗಳೂರು: ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಹಳೆಯ ದ್ವೇಷಕ್ಕೆ ವ್ಯಕ್ತಿಯೋರ್ವರನ್ನು ವಾಹನ ಅಪಘಾತ ಮಾಡಿ ಕೊಲೆ ಮಾಡಲು ಹೊರಟ ಆತಂಕಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಗಂಭೀರ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಟ್ಟೆಯ ಮೋಹನದಾಸ್ ಶೆಟ್ಟಿ ಎಂಬವರ ದ್ವಿಚಕ್ರ ವಾಹನಕ್ಕೆ ಹಳೆ ದ್ವೇಷದ ಕಾರಣಕ್ಕೆ ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎಂಬಾತ ಕಾರು ಹತ್ತಿಸಿ ಕೊಲೆ ಮಾಡುವ ಪ್ರಯತ್ನ ಮಾಡಿದ್ದಾನೆ. ಘಟನೆಯಲ್ಲಿ ಮೋಹನ ದಾಸ ಶೆಟ್ಟಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ…
-

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರು ಅರೆಸ್ಟ್
ಮಂಗಳೂರು : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮರಕಡ ಕುಂಜತ್ತಬೈಲು ನಿವಾಸಿ ಪ್ರತೀಕ್ (32) ಮತ್ತು ಯೆಯ್ಯಾಡಿ ದಂಡಕೇರಿ ನಿವಾಸಿ ವೀಕ್ಷಿತ್ (21) ಬಂಧಿತ ಆರೋಪಿಗಳು. ಕಾವೂರು ಪೊಲೀಸರು ಗಸ್ತಿನಲ್ಲಿದ್ದ ವೇಳೆ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಇಬ್ಬರನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ಅವರು ಎಂಡಿಎಂಎ ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿರುವುದಾಗಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











