Author: News Editor

  • ಸಂಡೆ ಬಜಾರ್ ಹೋರಾಟ, ಹೋರಾಟಗಾರ ಬಿ.ಕೆ ಇಮ್ತಿಯಾಜ್ ವಿರುದ್ಧದ ಎಫ್ಐಆರ್ ಗೆ ಹೈ ಕೋರ್ಟ್ ತಡೆಯಾಜ್ಞೆ,- ಸುಪ್ರೀಂ ಕೋರ್ಟ್ ಆದೇಶದ ತಪ್ಪು ವ್ಯಾಖ್ಯಾನ ರಾಜ್ಯ ಸರಕಾರಕ್ಕೆ ಹೈ ಕೋರ್ಟ್ ತರಾಟೆ
    ,

    ಸಂಡೆ ಬಜಾರ್ ಹೋರಾಟ, ಹೋರಾಟಗಾರ ಬಿ.ಕೆ ಇಮ್ತಿಯಾಜ್ ವಿರುದ್ಧದ ಎಫ್ಐಆರ್ ಗೆ ಹೈ ಕೋರ್ಟ್ ತಡೆಯಾಜ್ಞೆ,- ಸುಪ್ರೀಂ ಕೋರ್ಟ್ ಆದೇಶದ ತಪ್ಪು ವ್ಯಾಖ್ಯಾನ ರಾಜ್ಯ ಸರಕಾರಕ್ಕೆ ಹೈ ಕೋರ್ಟ್ ತರಾಟೆ

    ಮಂಗಳೂರು : ಸುಪ್ರಿಂ ಕೋರ್ಟ್ ಆದೇಶದ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡುತ್ತಿದ್ದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಯಾವುದೇ ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲು ಸುಪ್ರಿಂ ಕೋರ್ಟ್ ನೇರವಾಗಿ ಆದೇಶಿಸಿಲ್ಲ. ಬೀದಿ ಬದಿ ವ್ಯಾಪಾರಸ್ಥರ ಬದುಕುವ ಹಕ್ಕು ಮತ್ತು ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಪಾಲಿಸಬೇಕು. ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಾಪಾರಿಯನ್ನು ತೆರವು ಮಾಡಬಾರದು. ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡಿ ಎಂದು ಸುಪ್ರಿಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿಲ್ಲ” ಎಂದು ಹೈಕೋರ್ಟ್…

    Continue Reading

  • ವಿಟ್ಲ : ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
    ,

    ವಿಟ್ಲ : ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

    ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

    Continue Reading

  • ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್
    , ,

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್‌ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋ‌ರ್ ಪೂಜಾರಿ, ತನ್ನ ಸಹೋದರ ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶೂಟ್‌ಔಟ್ ಪ್ರಕರಣದ ಬೆಳವಣಿಗೆಯ ಮಾಹಿತಿಗಳನ್ನು ನೀಡಿದರು. ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ…

    Continue Reading

  • ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ- ಆರೋಪಿ ಪೊಲೀಸ್ ವಶಕ್ಕೆ
    , ,

    ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ- ಆರೋಪಿ ಪೊಲೀಸ್ ವಶಕ್ಕೆ

    ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ…

    Continue Reading

  • ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ..!!
    , ,

    ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ..!!

    ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ…

    Continue Reading

  • ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ
    ,

    ಮೀಲಾದುನ್ನಬಿ ಆಚರಣೆ: ದ.ಕ., ಉಡುಪಿ ಜಿಲ್ಲೆಯಲ್ಲಿ ಆ.25ರಂದು ಸಾರ್ವತ್ರಿಕ ರಜೆ

     ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.

    Continue Reading

  • ಕುಂದಾಪುರ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ
    ,

    ಕುಂದಾಪುರ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

    ಕುಂದಾಪುರ: ಇಂದು ಬೆಳ್ಳಂಬೆಳಿಗ್ಗೆಯೇ ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅನಿರೀಕ್ಷಿತವಾಗಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಆಗಮಿಸುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಕ್ಕಾಬಿಕ್ಕಿಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಅಧಿಕಾರಿಗಳ ತಂಡ ಪುರಸಭೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪ್ರಮುಖ ಕಡತಗಳು ಮತ್ತು ದಾಖಲೆಗಳ ಪರಿಶೀಲನೆ ನಡೆಸಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಲಾಗಿದೆ ಎಂದು ತಿಳಿದುಬಂದಿದೆ. ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಅಧಿಕಾರಿಗಳ ಈ ದಿಢೀರ್…

    Continue Reading

  • ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ!!
    , ,

    ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪುತ್ರ!!

    ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು…

    Continue Reading

  • ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ..!! ಆರೋಪಿ ಬಂಧನ
    , ,

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ..!! ಆರೋಪಿ ಬಂಧನ

    ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಶರತ್ ಟಾಟಾ ಸುಮೊ (KA-05-AD-6341) ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ…

    Continue Reading

  • ಡೇವಿಡ್ ಹತ್ಯೆ ಪ್ರಕರಣ: ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು
    , ,

    ಡೇವಿಡ್ ಹತ್ಯೆ ಪ್ರಕರಣ: ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು

    ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed