Author: News Editor
-

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾದರೆ ವೈದ್ಯಾಧಿಕಾರಿಗಳೇ ಹೊಣೆ : ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಖರೀದಿ ಪ್ರಕ್ರಿಯೆಯನ್ನು ವಿಳಂಬ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು “ಸರ್ಕಾರ ಅಥವಾ ಇಲಾಖೆ ಸರಬರಾಜು ಮಾಡುವ ಔಷಧಿಗಳನ್ನು ಮಾತ್ರ ಬಳಸಬೇಕು, ಸ್ಥಳೀಯವಾಗಿ ಖರೀದಿ ಮಾಡಬಾರದು” ಎಂದು ತಿಳಿಸಿತ್ತು. ಆದರೆ, ಈ ಸೂಚನೆಯು ನಿಯಮಬಾಹಿರವಾಗಿದ್ದು, ಇದರಿಂದ ಸ್ಥಳೀಯವಾಗಿ ಔಷಧಿ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಅನುದಾನದ…
-

ಉಡುಪಿಯಲ್ಲಿ ಮಕ್ಕಳ ಕಳ್ಳರಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್- ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟನೆ
ಉಡುಪಿ : ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರಿದ್ದಾರೆಂಬುದಾಗಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಮಕ್ಕಳ ಕಳ್ಳರು ಮುಸುಕು ಹಾಕಿಕೊಂಡು ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ತಿರುಗುತ್ತಿದ್ದಾರೆ. ದಯವಿಟ್ಟು ಮಕ್ಕಳು ಬೆಳಗ್ಗೆ ರಿಕ್ಷಾ ಹತ್ತುವಾಗ ಮತ್ತು ಸಾಯಂಕಾಲ ಇಳಿಯುವಾಗ ಪೋಷಕರು ಕಡ್ಡಾಯವಾಗಿ ಇರಲೇ ಬೇಕು. ಮಕ್ಕಳನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.…
-

ಬಿಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಲೋಕಾಯುಕ್ತ ಪೊಲೀಸರು ಶನಿವಾರ ಸರ್ಕಾರಿ ಅಧಿಕಾರಿಯ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು 3.08 ಕೋಟಿ ರೂ.ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಬಿಡಿಎ ವಲಯ ಅರಣ್ಯ ಅಧಿಕಾರಿ ಎ.ಎಲ್. ದಾಳೇಶ್ ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶನಿವಾರ ಬೆಳಗ್ಗೆ ದಾಳೇಶ್ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿ ನಾಲ್ಕು ಕಡೆ ಏಕಕಾಲಕ್ಕೆ ದಾಳಿ…
-

ರಾಜ್ಯದಲ್ಲಿ ಸೈಬರ್ ಕ್ರೈಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್
ಬೆಂಗಳೂರು : ಹಣಕಾಸು ವಂಚನೆ, ಮಾದಕ ವಸ್ತು ಮಾರಾಟ ಜಾಲ ಹಾಗೂ ದತ್ತಾಂಶ ಕಳವು ಸೇರಿ ಸೈಬರ್ಕೃತ್ಯಗಳನ್ನು ತಾಂತ್ರಿಕತೆ ಜೊತೆ ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಬೇಕಿದೆ ಎಂದು ರಾಜ್ಯ ಗೃಹ ಮಂತ್ರಿ ಜಿ.ಪರಮೇಶ್ವರ್ ಹೇಳಿದರು.ಶನಿವಾರ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ), ಸೈಬರ್ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ಆಯೋಜಿಸಿದ್ದ 3ನೇ ವರ್ಷದ ‘ಸೈಬರ್ಅಪರಾಧ ತನಿಖಾ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದರು. ಸೈಬರ್ಅಪರಾಧ ಯಾವುದೇ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಮಿತಿಯಿಲ್ಲದ, ತಂತ್ರಜ್ಞಾನ ಆಧಾರಿತ ಮತ್ತು…
-

ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್
ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್ ಕಾರ್ಡ್ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್ ಆಫೀಸಿನ ಸೀಲ್ ಪತ್ತೆಯಾಗಿದ್ದು, ಮೂಲ ಆಧಾರ್ ಕಾರ್ಡ್ ಪ್ರತಿಗಳು ಸಾರ್ವಜನಿಕರ…
-

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚಾರ- ಬೈಕ್ ಹಾಗೂ ಸವಾರ ಪೊಲೀಸ್ ವಶ
ಪಶ್ಚಿಮ ಬಂಗಾಳದ ನೋಂದಾಯಿತ ಬೈಕ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚರಿಸುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆಹಚ್ಚಿದ್ದಾರೆ. ಮಾರ್ಚ್5ರಂದು ಬೆಳ್ತಂಗಡಿ ಸಂತೆಕಟ್ಟೆ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಇಲ್ಲದೆ CRT 9988 ನಂಬರ್ ಹೊಂದಿದ RX100 ಬೈಕ್ನಲ್ಲಿ ಬಂದ ಕಳಿಯ ಗ್ರಾಮದ ನವಾಜ್ (19) ಎಂಬ ಯುವಕನನ್ನು ಪೊಲೀಸರು ತಡೆದು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಬೈಕ್ನ ನಂಬರ್, ದಾಖಲೆಗಳು ಹಾಗೂ ಚಾಸಿಸ್–ಇಂಜಿನ್ ಸಂಖ್ಯೆಗಳು ಹೊಂದಿಕೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿದಾಗ ಬೈಕ್ ಮೂಲತಃ West…
-

ಬೆಚ್ಚಿ ಬೀಳಿಸೋ ಕೃತ್ಯ: 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ ಆ್ಯಸಿಡ್ ದಾಳಿ !
ಶಾಲೆಯೊಂದರಲ್ಲಿ ಮೂರು ವರ್ಷದ ಹಸುಳೆಯ ಮೇಲೆ ಶಿಕ್ಷಕಿಯೇ ಆ್ಯಸಿಡ್ ದಾಳಿ ನಡೆಸಿರುವ ಅತ್ಯಂತ ದಾರುಣ ಹಾಗೂ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಫೆಬ್ರವರಿ 23 ರಂದು ಈ ಘಟನೆ ನಡೆದಿದ್ದು, ಪ್ರಾಂಶುಪಾಲರ ಬೆದರಿಕೆಯ ನಡುವೆಯೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ:ಫೆಬ್ರವರಿ 23ರಂದು ಬೆಳಿಗ್ಗೆ ತಾಯಿ ತನ್ನ 3 ವರ್ಷದ ಮಗುವನ್ನು ಎಂದಿನಂತೆ ಶಾಲೆಗೆ ಬಿಟ್ಟು ಬಂದಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಶಾಲೆ ಕಡೆಯಿಂದ ಕರೆ ಮಾಡಿದ ಶಿಕ್ಷಕಿ, “ನಿಮ್ಮ ಮಗು ಬಾತ್ರೂಮ್ನಲ್ಲಿ…
-

ವಿಟ್ಲ: ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟ – ಸ್ಥಳೀಯ ನಿವಾಸಿ ಪೊಲೀಸರ ವಶಕ್ಕೆ
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟಗೊಂಡ ಘಟನೆ ವರದಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುವರ್ಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಸತೀಶ್ ಸುವರ್ಣ ಅವರು ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರ್ಚ್ 6ರಂದು ಸಂಜೆ…
-

ಉಡುಪಿ: ಕಾಲೇಜಿಗೆ ಹೋಗು ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮ*ಹ*ತ್ಯೆ
ಉಡುಪಿ: ಸರಿಯಾಗಿ ಕಾಲೇಜಿಗೆ ಹೋಗು ಅಂತಾ ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನ ಕೆರಾಡಿ ಗ್ರಾಮದ ಹಯ್ಯಂಗಾರಿನಲ್ಲಿ ನಡೆದಿದೆ.ಹಯ್ಯಂಗಾರು ನಿವಾಸಿ ಮಂಜುನಾಥ ನಾಯ್ಕ ಅವರ ಪುತ್ರ ಮನೀಷ್ (16) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿಯ ಕೊಳಲಗಿರಿಯ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಮನೀಷ್ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಈ ವಿಷಯ ತಿಳಿದ ತಂದೆ ಮಂಜುನಾಥ ಅವರು, ಮಗನ ಭವಿಷ್ಯದ ದೃಷ್ಟಿಯಿಂದ ಸರಿಯಾಗಿ ಕಾಲೇಜಿಗೆ ಹೋಗುವಂತೆ ಬುದ್ಧಿಮಾತು ಹೇಳಿದ್ದರು. ತಂದೆಯ ಮಾತಿನಿಂದ…
-

ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ 28.46ಲಕ್ಷ ರೂ ಸೈಬರ್ ವಂಚನೆ!!
ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್ನಲ್ಲಿರಿಸಿದ್ದರು. ಮಾ.3ರಂದು ರಾತ್ರಿ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಮೆಸೇಜ್ಗಳನ್ನು ಪರಿಶೀಲಿಸಿದಾಗ 4 ಬ್ಯಾಂಕ್ ಖಾತೆಗಳಿಂದ 28,46,688 ರೂ.ವನ್ನು ಅವರ ಗಮನಕ್ಕೆ ಬಾರದೆ ವಿದ್ಡ್ರಾ ಮಾಡಲಾಗಿದೆ ಎಂಬುದು ಅವರಿಗೆ ತಿಳಿದು ಬಂದಿದೆ. ಆ ಬಳಿಕ ಅವರು ಬ್ಯಾಂಕ್ ಹೆಲ್ಸ್ಲೈನ್ ನಂಬರ್ಗೆ ಕರೆ ಮಾಡಿ ಬ್ಯಾಂಕ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











