Author: News Editor
-

ವ್ಯಾಜ್ಯ ಬಾಕಿ ಇರುವಾಗ ನಡೆದ ಆಸ್ತಿ ಖರೀದಿ ಅಸಿಂಧು: ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ನ್ಯಾಯಾಲಯದಲ್ಲಿ ಆಸ್ತಿ ಹಕ್ಕಿನ ಬಗ್ಗೆ ಕಾನೂನು ಹೋರಾಟ ನಡೆಯುತ್ತಿರುವಾಗ (Pending Litigation), ಆ ಆಸ್ತಿಯನ್ನು ಖರೀದಿಸುವ ಮೂರನೇ ವ್ಯಕ್ತಿಗೆ ಯಾವುದೇ ಕಾನೂನುಬದ್ಧ ಹಕ್ಕು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿ ವರ್ಗಾವಣೆ ಕಾಯ್ದೆಯ ಸೆಕ್ಷನ್ 52ರ ಅಡಿಯಲ್ಲಿರುವ ‘ಲಿಸ್ ಪೆಂಡೆನ್ಸ್’ (Lis Pendens) ತತ್ವವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ಮಾಲೀಕತ್ವ ವರ್ಗಾವಣೆಗೆ ನ್ಯಾಯಾಲಯದ ಅನುಮತಿ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ:ಬೆಂಗಳೂರಿನ ಹನುಮಂತನಗರದ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಪ್ರಕರಣದ…
-

ಮಂಗಳೂರು : ಲಾರಿ ಡಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು,…
-

ಮಂಗಳೂರು: ನಗರದ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ..!!
ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರಿನ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿದ್ದರೂ, ಪರಿಶೀಲನೆ ಬಳಿಕ ಅದು ಹುಸಿ…
-

ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ- ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ
ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೆರುವಾಯಿ ಮಾರ್ಗವಾಗಿ ಕೇರಳದಿಂದ ಲಾರಿಗಳ ಮೂಲಕ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಬಂಟ್ವಾಳ ಬೆರಿಪದವು ಪ್ರದೇಶದಲ್ಲಿ ಕಲ್ಲಿನ ಲೋಡ್ ತುಂಬಿದ್ದ ಲಾರಿಗಳನ್ನು ಪರಿಶೀಲನೆ ನಡೆಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕರಾದ ವಿಟ್ಲದ ಸಾಧಿಕ್ ಮತ್ತು ಮೊಹಮ್ಮದ್ ಅವರನ್ನು ವಿಚಾರಣೆ ನಡೆಸಲಾಗಿದ್ದು, ಕೇರಳದ ಧರ್ಮತ್ತಡ್ಕದಿಂದ ಕಲ್ಲುಗಳನ್ನು ತುಂಬಿ ವೇಣು ಎಂಬವರು…
-

ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತ್ನ ಪಿಡಿಓ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ನಂಜುಂಡಮ್ಮ ಎಂದು ತಿಳಿದು ಬಂದಿದೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬವರಿಂದ ಸೈಟ್ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯತ್ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ…
-

ಮಂಗಳೂರು: ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ 41 ಲಕ್ಷ ವಸೂಲಿ
ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಸಂತ್ರಸ್ತ ವ್ಯಕ್ತಿಗೆ ದಿನಾಂಕ 31-01-2026 ರಂದು ಯಾರೋ ಅಪರಿಚಿತ ವ್ಯಕ್ತಿ ದೆಹಲಿಯಿಂದ 8796142545 ಈ ನಂಬರ್ ನಿಂದ ಕರೆ ಮಾಡಿ ಮುಂಬೈ ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದಾರೆ. ವೇಳೆ ವ್ಯಕ್ತಿಗೆ ನಿಮ್ಮ ಗುರುತಿನ ಚೀಟಿ ಬಳಸಿಕೊಂಡು ಮುಂಬೈನಲ್ಲಿ ಕೆನರಾ ಬ್ಯಾಂಕ್ ನಲ್ಲಿ…
-

ಮಂಗಳೂರು : ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತ್ತಿದ್ದ ವಿಧ್ಯಾರ್ಥಿಗಳ ವಿಡಿಯೋ ತೆಗೆದು ನೈತಿಕ ಪೋಲಿಸ್ ಗಿರಿ- ಇಬ್ಬರ ಬಂಧನ
ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರು ನಗರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ರೈಲು ನಿಲ್ದಾಣದಲ್ಲಿ ಫೆ.24 ರಂದು ಕೇಂದ್ರ ರೈಲ್ವೆ ನಿಲ್ದಾಣದ ರೈಲ್ವೆ ಟ್ರ್ಯಾಕ್ ನಲ್ಲಿ ಮಂಗಳೂರು ನಗರದ ಕಾಸ್ಸಿಯಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತು ಕೊಂಡು ಇದ್ದು, ಕುಳಿತಿದ್ದನ್ನು ವಿಚಾರಿಸಿ ಅಲ್ಲಿಗೆ ಇಬ್ಬರು ಸ್ಟೀಫನ್ ಮೊಂತೆರೋ (56 ವರ್ಷ) ಮತ್ತು ಆತನ ಮಗ…
-

ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ ಪೂರ್ಣಗೊಂಡರು ಚುನಾವಣೆ ನಡೆಯುವ ಯಾವುದೇ ಲಕ್ಷಣ ಇಲ್ಲ..!!
ಮಂಗಳೂರು : ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಕೆಲವು ವಾರಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾರ್ಚ್ ತಿಂಗಳಲ್ಲಿ ಸ್ಥಳೀಯ ಚುನಾವಣೆಯ ಪ್ರಸ್ತಾವ ಮಾಡಿದ್ದರು. ಆದರೆ ಪೂರಕ ತಯಾರಿ ಇನ್ನೂ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ. ಇನ್ನೇನು ಚುನಾವಣೆ ದಿನಾಂಕ ನಿಗದಿ ಆಗಬೇಕು. ವಾರ್ಡ್ ಮೀಸಲಾತಿ ಪ್ರಕಟಗೊಳ್ಳಬೇಕು. ಬಳಿಕ ನಾಮಪತ್ರ…
-

ಮಂಗಳೂರು: ನಂದಿಗುಡ್ಡೆ ವೃತ್ತದ ಬಳಿ ಇರುವ ನಂದಿ ಹಿಲ್ಸ್ ಬಹುಮಹಡಿ ಕಟ್ಟಡದ ಕರ್ಮಕಾಂಡ..!!
ಮಂಗಳೂರು: ನಂದಿಗುಡ್ಡೆ ವೃತ್ತದ ಬಳಿ ಇರುವ ನಂದಿ ಹಿಲ್ಸ್ ಬಹುಮಹಡಿ ಕಟ್ಟಡವು ಸಂಪೂರ್ಣವಾಗಿ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದೆ. ಪಾಲಿಕೆಯಿಂದ ಯಾವುದೇ ಪ್ರವೇಶ ಪತ್ರ ಇಲ್ಲದೆ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಅರೋಗ್ಯ ಇಲಾಖೆ ಅಧಿಕಾರಿಗಳು ಅ ಕಟ್ಟಡದ ವ್ಯಾಪಾರ ಮಾಡುವ ಪ್ರತಿ ಶಾಪ್ ಗಳಿಗೆ ದಾಳಿ ನಡೆಸಿ 50 ಸಾವಿರ ದಂಡ ವಿಧಿಸಿದ್ದಾರೆ. ಪಾಲಿಕೆಯಿಂದ ಕಟ್ಟಡಕ್ಕೆ ಪ್ರವೇಶ ಪತ್ರ ಪಡೆಯದೆ ಡೋರ್ ನಂಬ್ರ ಕೊಡ ಆಗದೆ ಕಟ್ಟಡವು ವಾಣಿಜ್ಯ ವ್ಯವಹಾರಕ್ಕೆ ಹಲವಾರು ಶಾಪ್ ಗಳನ್ನು ಈಗಾಗಲೇ ನೀಡಲಾಗಿದ್ದು, ಹೋಟೆಲ್,…
-

ಬಂಟ್ವಾಳ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: 2014ರಲ್ಲಿ ದಾಖಲಾಗಿದ್ದ ವಿದೇಶೀಯರ ಕಾಯ್ದೆ ಸಂಬಂಧಿತ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 152/2014ರಲ್ಲಿ FOREIGNERS ACT ಕಲಂ 14(a)(b)(c) ಹಾಗೂ 34 IPC ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉಡುಪಿ ಮೂಲದ ತಾಜ್ ಮೊಹಮ್ಮದ್ ಯುಸೂಫ್ (59) ಆರೋಪಿ ಆಗಿದ್ದು, ದೀರ್ಘಕಾಲದಿಂದ ಪತ್ತೆಯಾಗದೆ ತಪ್ಪಿಸಿಕೊಂಡಿದ್ದನು. ಆರೋಪಿಯ ಸುಳಿವು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಕಳ ಭಾಗದಲ್ಲಿ ದಾಳಿ ನಡೆಸಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











