ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದರಿಂದ, ಪೊಲೀಸರು ಆತನ ಕೈವಾಡದ ಬಗ್ಗೆ ಬಲವಾಗಿ ಅನುಮಾನ ವ್ಯಕ್ತಪಡಿಸಿದ್ದು, ಆತನ ಚಲನವಲನಗಳನ್ನು ಗಮನಿಸುತ್ತಿದ್ದು, ಶಂಕಿತನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಈ ಕೆಳಗಿನ ಸಂಖ್ಯೆಗಳಿಗೆ ತಕ್ಷಣ ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ:ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362ಬೆಳ್ತಂಗಡಿ ಪೊಲೀಸ್ ಠಾಣೆ: 08256-232093, 9480805370ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824 2220500.ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದು ಇಲಾಖೆ ಭರವಸೆ ನೀಡಿದೆ.
ಬೆಳ್ತಂಗಡಿ, ಉಪ್ಪಿನಂಗಡಿಯಲ್ಲಿ ಕಳ್ಳರ ಅಟ್ಟಹಾಸ: ಕೇರಳ ಮೂಲದ ಶಂಕಿತನ ಬೆನ್ನತ್ತಿದ ಪೊಲೀಸರು
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












