,

ನಿಂತಿದ್ದ ಕಲ್ಲಿದ್ದಲು ಲಾರಿಗೆ ಬಸ್ ಡಿಕ್ಕಿ: ಸಹಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತ್ಯು

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನ ಗಜುವಾಕ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ನಗರ ಜಂಕ್ಷನ್‌ನಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ (APSRTC) ಸೂಪರ್ ಲಕ್ಸುರಿ ಬಸ್ ಒಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಜುವಾಕ ಸಂಚಾರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ 4 ಗಂಟೆಯ ವೇಳೆಗೆ ಶ್ರೀ ನಗರ…

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನ ಗಜುವಾಕ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ನಗರ ಜಂಕ್ಷನ್‌ನಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ (APSRTC) ಸೂಪರ್ ಲಕ್ಸುರಿ ಬಸ್ ಒಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಜುವಾಕ ಸಂಚಾರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ 4 ಗಂಟೆಯ ವೇಳೆಗೆ ಶ್ರೀ ನಗರ ಜಂಕ್ಷನ್ ಬಳಿ ಕಲ್ಲಿದ್ದಲು ತುಂಬಿದ್ದ ಲಾರಿಯೊಂದರ ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ ಚಾಲಕ ಲಾರಿಯನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದನು. ಇದೇ ವೇಳೆ ರಾಜಮಂಡ್ರಿಯಿಂದ ಪಾರ್ವತಿಪುರಂಗೆ ಸುಮಾರು 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆರ್‌ಟಿಸಿ ಬಸ್, ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸ ಎಷ್ಟಿತ್ತೆಂದರೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ಸಿನ ಸಹ-ಚಾಲಕ (ಕ್ಲೀನರ್/ಸೆಕೆಂಡ್ ಡ್ರೈವರ್) ಹಾಗೂ ಇಬ್ಬರು ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇತರ ಏಳು ಪ್ರಯಾಣಿಕರನ್ನು ತಕ್ಷಣವೇ ಚಿಕಿತ್ಸೆಗಾಗಿ ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ (KGH) ದಾಖಲಿಸಲಾಗಿದೆ. ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆಂಧ್ರಪ್ರದೇಶದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರು ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಕಿಂಗ್ ಜಾರ್ಜ್ ಆಸ್ಪತ್ರೆಗೆ (KGH) ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯದ ಬಗ್ಗೆ ವೈಯಕ್ತಿಕವಾಗಿ ವಿಚಾರಿಸಿದರು. ಗಾಯಗೊಂಡವರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಪೀಡಿತ ಕುಟುಂಬಗಳಿಗೆ ಎಪಿಎಸ್‌ಆರ್‌ಟಿಸಿ ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed