Category: ಬ್ರೇಕಿಂಗ್ ನ್ಯೂಸ್
-

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶವನ್ನು ಸರ್ಕಾರ ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಈ ಕಠಿಣ ನಿರ್ಧಾರದಿಂದ ರಾಜ್ಯದ ಅಡಕೆ ಬೆಳೆಗಾರರಿಗಾಗಲಿ ಅಥವಾ ಅಡಕೆ ಮಾರುಕಟ್ಟೆಗಾಗಲಿ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದ್ದಾರೆ. ಗುಟ್ಕಾ ತಯಾರಿಕೆಯಲ್ಲಿ ಸ್ಥಳೀಯ ಅಡಕೆಯ ಬದಲಾಗಿ ನೆಪಾಳ, ಬಾಂಗ್ಲಾದೇಶಗಳಿಂದ ಆಮದು ಮಾಡಿಕೊಂಡ…
-

ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶ ಶೀಘ್ರ ವಾಪಸ್ : ಸಿಎಂ ಡಿಕೆ ಶಿವಕುಮಾರ್
ರಾಜ್ಯಾದ್ಯಂತ ನಿಕೋಟಿನ್ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಏಕಾಏಕಿ ಕೈಗೊಂಡಿದ್ದ ಈ ನಿರ್ಧಾರಕ್ಕೆ ಆಡಳಿತ ಪಕ್ಷದ ಶಾಸಕರು ಹಾಗೂ ರೈತ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳು ಈ ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಈ ನಿಷೇಧದ ತೀರ್ಮಾನಕ್ಕೆ ಸ್ವತಃ ಕಾಂಗ್ರೆಸ್ನ ಕೆಲವು ಹಿರಿಯ ಶಾಸಕರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.…
-

ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಮುಖ್ಯಮಂತ್ರಿಗಳಿಗೆ ಅಡಿಕೆ ಬೆಳೆಗಾರರ ಮನವಿ..! ಇದು ಎಷ್ಟು ಸರಿ??
ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಅಡಕೆ ಬಳಸಿ ತಯಾರಿಸುವ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಮುಂದಾಗಿರುವುದು ರಾಜ್ಯದ ಅಡಕೆ ಬೆಳೆಗಾರರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ನಿರ್ಧಾರದಿಂದ ಅಡಕೆ ಮಾರುಕಟ್ಟೆ ಕುಸಿಯುವ ಭೀತಿ ಎದುರಾಗಿದ್ದು, ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಆರಗ ಜ್ಞಾನೇಂದ್ರ ಸಹಿತ ಡಿ.ಜಿ ಶಾಂತನಗೌಡ ನೇತ್ರತ್ವದ ನೀಯೋಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಯುವಜನರನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ…
-

20 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ‘PSI’
ಹಾಸನ: ಪ್ರಕರಣವೊಂದರಲ್ಲಿ ನೆರವು ನೀಡಲು ದೂರುದಾರರಿಂದ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಳೇಬೀಡು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ (PSI) ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವರು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಈ ಯಶಸ್ವಿ ದಾಳಿ ನಡೆಸಿದ್ದಾರೆ. ದೂರುದಾರರಾದ ಸಂತೋಷ್ ಅವರ ಬಳಿ ಪಿಎಸ್ಐ ಮಂಜುನಾಥ್ ಅವರು ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸಂತೋಷ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರನ್ನು…
-

ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!
ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ…
-

ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ- ಮತ್ತೆ ನಾಲ್ವರ ಬಂಧನ..!!
ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ ಸಿಪಿಐ ಪಕ್ಷದ ಸ್ಥಳೀಯ ಮಟ್ಟದ ನಾಯಕನಾಗಿದ್ದು, ದರೋಡೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ತನಿಖೆ ಚುರುಕುಗೊಂಡ ಬೆನ್ನಲ್ಲೇ ಶ್ರೀರಾಗ್ ವಕೀಲರ ಮೂಲಕ…
-

ಹೋಟೆಲ್, ಪಬ್ ಆಯ್ತು, ಈಗ ಹಾಸ್ಟೆಲ್, ಪಿಜಿಗಳಲ್ಲಿನ ಆಹಾರ ಪರಿಶೀಲನೆಗೆ ಸಚಿವ ಯುಟಿ ಖಾದರ್ ಸೂಚನೆ
ಹೋಟೆಲ್ಗಳ ಮೇಲೆ ಯಶಸ್ವಿ ದಾಳಿ ನಡೆಸಿ ಆಹಾರದ ಗುಣಮಟ್ಟ ಪರಿಶೀಲಿಸಿದ ಬೆನ್ನಲ್ಲೇ, ಇದೀಗ ರಾಜ್ಯದಾದ್ಯಂತ ಇರುವ ವಿವಿಧ ಹಾಸ್ಟೆಲ್ಗಳು ಹಾಗೂ ಪಿಜಿಗಳ (ಪೇಯಿಂಗ್ ಗೆಸ್ಟ್) ಮೇಲೂ ಆಹಾರ ತಪಾಸಣೆ ನಡೆಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನೂತನ ಕಾರ್ಯಾಚರಣೆಯಡಿಯಲ್ಲಿ ಸರ್ಕಾರಿ ಹಾಸ್ಟೆಲ್ಗಳು, ಖಾಸಗಿ ಹಾಸ್ಟೆಲ್ಗಳು ಹಾಗೂ ಸಹಕಾರಿ ಸಂಸ್ಥೆಗಳ ಅಧೀನದಲ್ಲಿ ನಡೆಯುತ್ತಿರುವ ಹಾಸ್ಟೆಲ್ಗಳಲ್ಲಿ ಆಹಾರ…
-

ಉಡುಪಿ ಜಿಲ್ಲೆಗೆ ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ ಪ್ರವೇಶ ನಿರ್ಬಂಧ
ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ…
-

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ…
-

ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟ ಸಂಪೂರ್ಣ ಬಂದ್..!!
ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ ಅಧಿಕಾರ ಬಳಸಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











