Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ- ಮಹಿಳೆಗೆ 10.50 ಲಕ್ಷ ಆನ್ಲೈನ್ ವಂಚನೆ!!
ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ ವಾಟ್ಸಾಪ್ನಲ್ಲಿ ಜಾಹೀರಾತು ನೀಡಿ, ಆಪ್ ಡೌನ್ಲೋಡ್ ಮಾಡಿಸಿ 55 ವರ್ಷದ ಮಹಿಳೆಯೊಬ್ಬರಿಗೆ ಬರೋಬ್ಬರಿ ₹10,50,000 (ರೂ. 10.50 ಲಕ್ಷ) ಆನ್ಲೈನ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 29-06-2026ರಂದು ಸಂತ್ರಸ್ತ ಮಹಿಳೆಯು ತಮ್ಮ ಮೊಬೈಲ್ನಲ್ಲಿ ವಾಟ್ಸಾಪ್ ಬಳಸುತ್ತಿದ್ದಾಗ ‘Private Equity Fund Investment Block Deal’ ಎಂಬ ಹೂಡಿಕೆ ಕುರಿತ ಜಾಹೀರಾತು ಕಂಡಿದೆ. ಅದರಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ‘B.R.NOVA’ ಎಂಬ ಆ್ಯಪ್ ಡೌನ್ಲೋಡ್ ಮಾಡಲು…
-

ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ…
-

ಸುಳ್ಯ: ವಿವಾಹಿತ ಮಹಿಳೆಯನ್ನು ಬೆದರಿಸಿ ಅತ್ಯಾಚಾರ..!! ಆಟೋ ಚಾಲಕ ಅರೆಸ್ಟ್
ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು…
-

ತಾಯಿಗೆ ಕಿರುಕುಳ ನೀಡಿದ ಮಗ ಮನೆಯಿಂದ ಹೊರಗೆ : ಹೈಕೋರ್ಟ್ ಮಹತ್ವದ ತೀರ್ಪು
ವೃದ್ಧಾಪ್ಯದಲ್ಲಿ ಯಾವುದೇ ರೀತಿಯ ಕೌಟುಂಬಿಕ ಕಿರುಕುಳವಿಲ್ಲದೆ ನೆಮ್ಮದಿ ಹಾಗೂ ಶಾಂತಿಯಿಂದ ಜೀವಿಸುವುದು ಹಿರಿಯ ನಾಗರಿಕರ ಮೂಲಭೂತ ಹಕ್ಕಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವೃದ್ಧ ತಾಯಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಮಗನಿಗೆ ತಕ್ಷಣವೇ ಮನೆ ತೊರೆಯುವಂತೆ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆಯ ಮೇಲ್ಮನವಿ ಪ್ರಾಧಿಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಮಗನನ್ನು ಮನೆಯಿಂದ ಹೊರಹಾಕಲು ಕೋರಿದ್ದ ಸಂಕಷ್ಟಕ್ಕೊಳಗಾದ ತಾಯಿಯ ಅರ್ಜಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿವಾಸಿಯಾದ ಇಮ್ರಾನ್ ಖಾನ್ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯನ್ನು…
-

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ತಡೆ – ಉಳ್ಳಾಲಕ್ಕೆ ಮರು ನೇಮಕ
ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹಿಂಪಡೆದು ಉಳ್ಳಾಲ ನಗರಸಭೆಗೆ ಮರು ನೇಮಕ ಮಾಡಿದ್ದು ರಾಜ್ಯ ಸರ್ಕಾರ ಮತ್ತು ಸಚಿವ ಯು.ಟಿ ಖಾದರ್ ರವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಉಳ್ಳಾಲ ನಗರಸಭೆಯ ಪೌರಯುಕ್ತರಾಗಿದ್ದ ಸಂತೋಷ್ ರವರ ವರ್ಗಾವಣೆ ಬಗ್ಗೆ ಜನಾಭಿಪ್ರಾಯ ಪಡೆದು ವಿಸ್ತಾರವಾದ ವರದಿ ಮಾಡಿದ್ದು, ತಕ್ಷಣ ಈ ವರದಿ ಸಚಿವರ ಗಮಕ್ಕೆ ಬಂದು ವರ್ಗಾವಣೆ ಆದೇಶ ಹಿಂಪಡೆದು ಉಳ್ಳಾಲಕ್ಕೆ ಮರು…
-

ಉಳ್ಳಾಲ: ಇನ್ಫೋಸಿಸ್ ಉದ್ಯೋಗಿಗಳು ಎಂದು ಹೇಳಿ ಮನೆಗೆ ನುಗ್ಗಿದ ಕಳ್ಳರು- ವೃದ್ಧೆಯ ಚಿನ್ನ ದರೋಡೆ
ಉಳ್ಳಾಲ : ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ವೃದ್ಧೆಯನ್ನು ನೂಕಿ, ಅವರ ಬಾಯಿ ಒತ್ತಿ ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿ ಬಂಗಾರದ ಸರ ಹಾಗೂ ಬಳೆಯನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಕಾಯರಗೋಳಿಯಲ್ಲಿ ಸಂಭವಿಸಿದೆ. ಕಾಯರಗೋಳಿ ನಿವಾಸಿ ಭವಾನಿ ಎಂಬವರು ಆಗಸ್ಟ್ 3ರಂದು ಮಧ್ಯಾಹ್ನ 1.15ರ ಸುಮಾರಿಗೆ ಮನೆಯಲ್ಲಿದ್ದಾಗ ಈ ದುರಂತ ನಡೆದಿದೆ. ಮಗ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ತಟ್ಟಿದ ಇಬ್ಬರು ಅಪರಿಚಿತ ಯುವಕರು, “ನಮಗೆ ಬಾಡಿಗೆ ಮನೆ ಬೇಕು,…
-

ಮಂಗಳೂರು: ಕಾಲೇಜಿನ ಕ್ಯಾಂಪಸ್ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ…
-

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್- FIR ದಾಖಲು
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ…
-

ಬೆಳ್ತಂಗಡಿ : ರಿಯಾಜ್ ಪರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ..!!
ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ…
-

ಪುತ್ತೂರು: ಅಕ್ರಮ ಮರದ ದಿಮ್ಮಿ ಸಾಗಾಟ..! ವಾಹನ ವಶ, ಆರೋಪಿಗಳು ಅರೆಸ್ಟ್
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನ ಮತ್ತು ಮರದ ಮೌಲ್ಯ ಅಂದಾಜು 10 ಲಕ್ಷ ರೂಪಾಯಿ ಅಗಿರುತ್ತದೆ. ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ರೋಹಿತ್.ಎಸ್(20) ಎಂಬಾತನ ವಿರುದ್ಧ ಪ್ರಕರಣ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











