Category: ಬ್ರೇಕಿಂಗ್ ನ್ಯೂಸ್
-

ಕುತ್ತಿಗೆ ಕೊಯ್ದು ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಜೋಕಟ್ಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್ಇಝಡ್ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ…
-

ಜಮೀನು ಖಾತೆ ಮಾಡಿಕೊಡಲು 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ಪೆಕ್ಟರ್!
ಜಮೀನಿನ ಪೋಡಿ ಹಾಗೂ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ರೆವಿನ್ಯೂ ಇನ್ಸ್ಪೆಕ್ಟರ್ (ಕಂದಾಯ ನಿರೀಕ್ಷಕ) ಮಧುಸೂದನ್ ಲೋಕಾಯುಕ್ತ ದಾಳಿಗೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಜಮೀನು ಕೆಲಸಕ್ಕಾಗಿ ಸಾರ್ವಜನಿಕರನ್ನು ಅಲೆದಾಡಿಸಿ, ಹಣಕ್ಕಾಗಿ ಪೀಡಿಸುತ್ತಿದ್ದ ಇವರು, ಇಂದು ಮುಂಗಡ ಹಣ ಪಡೆಯುವಾಗ…
-

27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ
ಸರ್ಕಾರಿ ಒಡೆತನದ ಆಹಾರ ಗೋದಾಮುಗಳ ಮೇಲೆ ಇಂದು ಏಕಾಯಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೋಕಾಯುಕ್ತ ಪೊಲೀಸರಿಂದ ಏಕಕಾಲಕ್ಕೆ 27 ಕಡೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸರಿಯಾದ ಲೆಕ್ಕ ನೀಡದೆ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ. ಕೆಲವು ಕಡೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೆ ಅಧಿಕಾರಿಗಳು ಗೈರು ಆಗಿದ್ದಾರೆ. ಇದು ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ
-

ಬಜಪೆ: ನೆರೆಮನೆಯವನಿಂದ ಅಪ್ರಾಪ್ತ ಬಾಲಕಿಗೆ ನಿರಂತರ ಅತ್ಯಾಚಾರ, ಬೆದರಿಕೆ!! ಪೋಕ್ಸೋ ಪ್ರಕರಣ ದಾಖಲು
ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ…
-

ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ
ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಗಾಗಿ…
-

ಪುತ್ತೂರು: ಕೃಷ್ಣ ಜೆ.ರಾವ್ ಯುವತಿಗೆ ವಂಚನೆ ಪ್ರಕರಣ- ರಾಜಿ ಸಂಧಾನಕ್ಕೆ ವಕೀಲೆ ಎಸ್. ಸುಶೀಲಾ ಮಧ್ಯಸ್ಥಿಕೆದಾರರಾಗಿ ನೇಮಕ
ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿರುವ ಆರೋಪದಲ್ಲಿ ಕೃಷ್ಣಜೆ.ರಾವ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ಇದೀಗ ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿದೆ.ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದಾಗ ಅರ್ಜಿದಾರರ ಪರ…
-

ರೌಡಿಶೀಟರ್ 2 ಕೈಗಳನ್ನು ಕತ್ತರಿಸಿ ಬರ್ಬರ ಕೊಲೆ!!
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದ ಓಕುಳಿಯ ಹರಿದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೃದಯಭಾಗವಾದ ಗಾಂಧಿ ಬಜಾರ್ ಬಳಿ ಈ ಘಟನೆ ನಡೆದಿದ್ದು, ಗೋವಿಂದಪುರ ನಿವಾಸಿ, ರೌಡಿಶೀಟರ್ ನರಸಿಂಹ ಕೊಲೆಯಾದ ದುರ್ದೈವಿ. ನರಸಿಂಹ ಒಂಟಿಯಾಗಿ ಸಿಕ್ಕಾಗ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ತೀವ್ರ ಕ್ರೌರ್ಯ ಮೆರೆದಿರುವ ಹಂತಕರು, ನರಸಿಂಹನ ಎರಡು ಕೈಗಳನ್ನು ಕತ್ತರಿಸಿ, ರಸ್ತೆಯಲ್ಲೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ…
-

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಬ್ಯೂಟಿ ಕಂಟೆಸ್ಟೆಂಟ್ ಅರೆಸ್ಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಾಡೆಲ್ ಹರ್ಷ ಸನ್ನಿ(28), ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ಏರ್ ಇಂಟೆಲಿಜೆನ್ಸ್ ಯೂನಿಟ್ ಪ್ರಕಾರ, ಮಾಡೆಲ್ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್ನಿಂದ ಏರ್ ಇಂಡಿಯಾ ವಿಮಾನ TG-351 ಮೂಲಕ ಮುಂಬೈನ ಶಿವಾಜಿ ಏರ್ಪೋರ್ಟ್ಗೆ ಬಂದಿಳಿದಿದ್ದರು. ಅನುಮಾನದ ಮೇಲೆ ಆಕೆಯನ್ನು…
-

ಬಂಟ್ವಾಳದಲ್ಲಿ ಸಬ್ಸಿಡಿಯ ಯೂರಿಯಾ ದಂಧೆ ಪತ್ತೆ: ಲಕ್ಷಾಂತರ ಮೌಲ್ಯದ ಗೊಬ್ಬರ, ಟ್ರಕ್ ವಶ; ಓರ್ವ ಬಂಧನ
ಬಂಟ್ವಾಳ: ರೈತರಿಗೆ ನೀಡಲಾಗಿದ್ದ ಸಬ್ಸಿಡಿ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ರಾಜ್ಯ ಮಟ್ಟದ ಸಂಘಟಿತ ಜಾಲವನ್ನು ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆಯಲ್ಲಿ ಬಯಲಿಗೆಳೆದಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಮತ್ತು ಸಾಗಣೆಗೆ ಬಳಸಲಾಗುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಖಂಡಿಗ ಸರ್ಕಾರಿ ಶಾಲೆಯ ಬಳಿಯ ನಿವಾಸಿ ಮೊಹಮ್ಮದ್ ಅಶ್ರಫ್ (40) ಎಂದು…
-

ಮೂಡದಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮಿನಿ ವಿಧಾನಸೌದದಲ್ಲಿ ಯಾವಾಗ..??
ಮಂಗಳೂರು :ಮಂಗಳೂರು ಮೂಡದಲ್ಲಿ ಯಾವುದೇ ಬ್ರೋಕರ್ಗಳು ಬೆಳಗ್ಗೆ ಪ್ರವೇಶಿಸಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ಸ್ವತಃ ಬರಬೇಕು ಎಂಬ ನಿಯಮವನ್ನು ಪಾಲಿಸಲಾಗುತ್ತಿದ್ದು, ಮಧ್ಯಾಹ್ನದ ನಂತರ ಮಾತ್ರ ಅಪ್ಲಿಕೇಶನ್ಗಳನ್ನು ನೀಡುವ ವ್ಯವಸ್ಥೆ ಇದೆ. ಮೂಡ ಕಮಿಷನರ್ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಲಂಚ ಪಡೆಯುವ ವ್ಯವಸ್ಥೆಗೆ ಕಡಿವಾಣ ಬಿದ್ದಿದೆ.ಆದರೆ ಮಂಗಳೂರು ಮಹಾನಗರ ಪಾಲಿಕೆ ಹಾಗು ಕಂದಾಯ ಇಲಾಖೆ ಕಚೇರಿಗಳಲ್ಲಿ ಬ್ರೋಕರ್ಗಳ ಗುಂಪುಗಳು ಕಾಣಸಿಗುತ್ತಿವೆ ಎಂಬ ಆರೋಪಗಳಿವೆ. ಹಿಂದೆ ಲೋಕಾಯುಕ್ತ ದಾಳಿಯ ಭಯವಾದರೂ ಇತ್ತು. ಈಗ ಲೋಕಾಯುಕ್ತ ರೈಡ್ಗಳು ನಡೆಯದಿರುವುದರಿಂದ ಲಂಚ ಪಡೆಯುವವರಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











