Category: ಬ್ರೇಕಿಂಗ್ ನ್ಯೂಸ್
-

ಸಂಪಾಜೆ ಫಾತಿಮಾ ನಿಶಾನ್ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು ಮಂಜೂರು
ಸುಳ್ಯ: ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು…
-

ಪೋಲಿಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಆರೋಪ : ಲೈವ್ ನಲ್ಲಿಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೈವ್ ಮಾಡಿ ಹಾಸನದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ನನ್ನ ಸಾವಿಗೆ ಹುಣಸೂರು ಡಿವೈಎಸ್ಪಿ ರವೀಶ್, ಅಜಯ್, ಮನೋಹರ, ಪ್ರಸಾದ, ಮಂಜುನಾಥ್ ಕಾರಣ ಎಂದು ವಿಡಿಯೋ ಮಾಡಿದ್ದಾನೆ. ವಿಷ ಕುಡಿದು ಅಮರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಡುವಿನ ಹೊಸಹಳ್ಳಿ ನಿವಾಸಿ ಅಮರ್ ಎಂದು ತಿಳಿದುಬಂದಿದೆ. ಪಿರಿಯಾಪಟ್ಟಣದ ಬೆಟ್ಟದಪುರದ ಠಾಣೆಯ ಸಿಬ್ಬಂದಿ ವಿರುದ್ಧ ಈ ಒಂದು ಆರೋಪ ಮಾಡಿದ್ದು ಲೈವ್…
-

ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ
ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ಮನೆಯನ್ನೂ ನಿರ್ಮಿಸದೆ, ಹಣವನ್ನೂ ವಾಪಸ್ ಕೊಡದೆ, ಹಣದ ಕುರಿತು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿ ಸಿಪ್ರಿಯಾನ್ ಡಿಸೋಜ ಎಂದು ತಿಳಿದು ಬಂದಿದೆ. ಜಯಂತ್ ನಾಯ್ಕ ಮನೋಜ್, ವಾಸುದೇವ ಎಂಬವರಿಗೆ 1250 ಚದರ ಅಡಿಯ ಮನೆ ಕಟ್ಟಿಸಿ ಕೊಡುವುದಾಗಿ ತಿಳಿಸಿದ ಸಿಪ್ರಿಯಾನ್ ಡಿಸೋಜ…
-

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು…
-

ಮಂಗಳೂರು: ಕುಖ್ಯಾತ ಅಂತರರಾಜ್ಯ 17ಕ್ಕೂ ಹೆಚ್ಚು ಪ್ರಕರಣಗಳ ವಂಚಕ, ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ದಾರ ಸ್ಯಾಮ್ ಪೀಟರ್ ಬಂಧನ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64 ವರ್ಷ) ಎಂದು ಗುರತಿಸಲಾಗಿದೆ. ಪ್ರಕರಣದ ಹಿನ್ನೆಲೆ: ಆರೋಪಿ ಶ್ಯಾಮ್ ಪೀಟರ್ ಅಲಿಯಾಸ್ ಟಿ. ಸ್ಯಾಮ್…
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು
ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು…
-

ಭ್ರಷ್ಟಾಚಾರ ಪ್ರಕರಣ: ಬೆಳ್ತಂಗಡಿಯ SIT ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ನಂತರ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ವರ್ಗಾವಣೆ ಮತ್ತು ಮಾಸಿಕ ವಸೂಲಿಗಳಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಚರ್ಚೆಗಳು ನಡೆದಿವೆ ಎನ್ನಲಾದ…
-

ರಾಯರೆಡ್ಡಿ ಇಸ್ಲಾಮ್ ಹೇಳಿಕೆ: ಆರ್.ಅಶೋಕ್ ತನ್ನ ಸಂಘ ಮುಖ್ಯಸ್ಥ ಭಾಗವತ್, ವಿದೇಶದಲ್ಲಿ ಮುಸ್ಲಿಮ್ ಪರ ಹೇಳಿಕೆ ನೀಡುವುದನ್ನು ನಿಲ್ಲಿಸಲಿ: ಕೆ. ಅಶ್ರಫ್
ಮಂಗಳೂರು: ಬಸವರಾಯ ರೆಡ್ಡಿ ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಸಾಮಾನ್ಯ ಸಾಮುದಾಯಿಕ ಹೇಳಿಕೆ ನೀಡುತ್ತಾ ಇಸ್ಲಾಮ್ ಶ್ರೇಷ್ಠ ಧರ್ಮ ಎಂಬುದಾಗಿ ಸಾರ್ವಜನಿಕವಾಗಿ ಪ್ರಶಂಸಿರುತ್ತಾರೆ. ಬಸವರಾಯ ರೆಡ್ಡಿ ಯವರದ್ದು ಯಾವುದೇ ರಾಜಕೀಯ ಅಥವಾ ಪ್ರಚೋದನಕಾರಿ ಹೇಳಿಕೆ ಅಲ್ಲ. ಬಸವ ರಾಯ ರೆಡ್ಡಿಯವರು ಯಾವುದೇ ಒಂದು ನಿರ್ಧಿಷ್ಟ ಸಮುದಾಯವನ್ನು ಓಲೈಕೆ ಮಾಡುವ ಹೇಳಿಕೆಯೂ ಅಲ್ಲ, ಈ ಹಿಂದೆ ಹಲವು ಚಿಂತಕರು, ಸಂಶೋಧಕರು, ಬುದ್ಧಿಜೀವಿಗಳು ನೀಡಿದ ಸಾಮಾನ್ಯ ಹೇಳಿಕೆ ಆಗಿರುತ್ತದೆ.ಆದರೆ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರಿಗೆ, ಬಸವ ರಾಯ ರೆಡ್ಡಿ…
-

ಸಿಹಿ ತಿಂಡಿ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: 3 ಘಟಕಗಳು ಬಂದ್, ಕಳಪೆ ಆಹಾರ ಜಪ್ತಿ
ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಮಾನದಂಡಗಳ ಕಟ್ಟುನಿಟ್ಟಿನ ಪಾಲನೆಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಮುಖ ನಗರಗಳ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ಬೃಹತ್ ಜಂಟಿ ಕಾರ್ಯಾಚರಣೆ ನಡೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರ ನಿರ್ದೇಶನದಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ 2011ರ ನಿಯಮಾವಳಿಗಳ ಅನ್ವಯ ಈ ವಿಶೇಷ ತಪಾಸಣೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ…
-

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಮಂಗಳೂರಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವಿಭಾಗದ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದು ದೂರು ನೀಡಿದ್ದಾರೆ. KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರು ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿ, ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇಲಾಖೆಯ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











