Category: ಬ್ರೇಕಿಂಗ್ ನ್ಯೂಸ್
-

ವಾಟ್ಸಾಪ್ ಚಾಟ್ನಿಂದ ಶುರುವಾದ ಜಗಳ – ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ.ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು ರೊಚ್ಚಿಗೆದ್ದು ಅನ್ಶ್ ಠಾಕೂರ್ ಎಂಬಾತನ ಮೇಲೆ ಮತಿನ್ ಮತ್ತು ಗ್ಯಾಂಗ್ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪದವಿ ಓದುತ್ತಾ ಪಾರ್ಟ್ ಟೈಂ ಜಿಮ್ ಟ್ರೈನರ್ ಆಗಿರುವ ಅನ್ಶ್ ಠಾಕೂರ್ ಈ ಹಿಂದೆ ಇಲಿಯಾಜ್ ಎಂಬಾತನಿಂದ ಖಾಸಗಿ ಜಿಮ್ನಲ್ಲಿ…
-

ಜ್ಯುವೆಲರ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಾಸ್ಟರ್ ಪ್ಲಾನ್ ಫೇಲ್
ಅಹಮದಾಬಾದ್: ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ ರಾಜೇಂದ್ರಕುಮಾರ್ ಶೆಟ್ಟಿ ಮತ್ತು ವಸ್ತ್ರಲ್ ನಿವಾಸಿ ಮಯೂರ್ ಅಶೋಕ್ಭಾಯ್ ಮಾಲಿ ಎಂದು ಗುರುತಿಸಲಾಗಿದೆ.ನಿಕೋಲ್ ಪ್ರದೇಶದ ಗ್ರಾವಿಟಿ ಶಾಪಿಂಗ್ ಮಾಲ್ನಲ್ಲಿರುವ ದರ್ಶನ್ ಶಾ ಅವರಿಗೆ ಸೇರಿದ ‘ಅಭೂಷಣ್ ಜ್ಯುವೆಲರ್ಸ್’ ಮಳಿಗೆಯಲ್ಲಿ ಹರ್ಷಿದಾ ಶೆಟ್ಟಿ ಕಳೆದ 11 ತಿಂಗಳಿನಿಂದ ಸೇಲ್ಸ್ವುಮನ್ ಆಗಿ ಕೆಲಸ…
-

ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಭಾರೀ ಅವ್ಯವಹಾರ ಆರೋಪ!!
ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ನೀಡಿದರೆ ಮೇಲಾಧಿಕಾರಿಗಳಿಗೆ ತಿಳಿಯದಂತೆ ಹೆಸರು ಬದಲಾವಣೆ, ಹುಟ್ಟಿದ ದಿನಾಂಕ ಬದಲಾವಣೆ ಸೇರಿದಂತೆ ಯಾವುದೇ ದಾಖಲೆ ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ಮಕ್ಕಳಿಲ್ಲದವರಿಗೆ ಸಹ ಜನನ ಪ್ರಮಾಣ ಪತ್ರ ಸಿಗುವಷ್ಟು ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ಹೋಗದಂತೆ ವಿಭಾಗದೊಳಗೆ ನಡೆಯುತ್ತಿದೆ ಎಂಬ ಗಂಭೀರ ಆರೋಪ…
-

ಕೇರಳದ ಕರಾಳ ಸೆಕ್ಸ್ ರಾಕೆಟ್ ಬಯಲು: ದುಬೈನಲ್ಲಿ ಮಾಡೆಲಿಂಗ್ ಆಮಿಷವೊಡ್ಡಿ ಅತ್ಯಾಚಾರ..!! ಕಿಲಾಡಿ ಲೇಡೀಸ್ ಅಲೀನಾ, ಸಿಂಧು ಅರೆಸ್ಟ್
ವಿದೇಶದಲ್ಲಿ ಉಜ್ವಲ ಭವಿಷ್ಯದ ಕನಸು ಹೊತ್ತು ಮಾಡೆಲಿಂಗ್ ಲೋಕಕ್ಕೆ ಕಾಲಿಡಲು ಬಯಸುವ ಯುವತಿಯರೇ ಎಚ್ಚರ! ಗ್ಲಾಮರ್ ಲೋಕದ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ಲೈಂಗಿಕ ದಂಧೆಯೊಂದನ್ನು ಪೊಲೀಸರು ಬೇಧಿಸಿದ್ದಾರೆ. ದುಬೈನಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್ಗಳ ಮಾಡೆಲಿಂಗ್ ಕೆಲಸ ಕೊಡಿಸುವುದಾಗಿ ನಂಬಿಸಿ, ಯುವತಿಯರನ್ನು ದಂಧೆಗೆ ತಳ್ಳುತ್ತಿದ್ದ ಇಬ್ಬರು ಹೈಟೆಕ್ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಸೂತ್ರಧಾರಿಗಳಾದ ಅಲೀನಾ ಎಂಬಾಕೆಯನ್ನು ಕೊಚ್ಚಿಯಲ್ಲೂ, ಮತ್ತೊಬ್ಬ ಆರೋಪಿ ಸಿಂಧು ಎಂಬಾಕೆಯನ್ನು ಮುಂಬೈನಲ್ಲೂ ವಶಕ್ಕೆ ಪಡೆಯಲಾಗಿದೆ. ಮಾದಕ ದ್ರವ್ಯ ನೀಡಿ ದೌರ್ಜನ್ಯ:…
-

ಅಕ್ರಮ ಮರಳು ಗಣಿಗಾರಿಕೆ ಕುರಿತು ಲೋಕಾಯುಕ್ತರ ಪತ್ರಿಕಾ ಪ್ರಕಟಣೆ
ಉಡುಪಿ : ಗೌರವಾನ್ವಿತ ಲೋಕಾಯುಕ್ತರವರ 2026 ರ ಏಪ್ರಿಲ್ 23 ರ ದಿನಾಂಕ ಆದೇಶದನ್ವಯ, ಈ ಪ್ರಕರಣವನ್ನು ಇಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಮೊದಲನೇ ಎದುರುದಾರರಾದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರು ಆಡಳಿತಾತ್ಮಕ ಕಾರಣಗಳನ್ನು ನೀಡಿ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರು ಈ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ, ತಮ್ಮ ಪರವಾಗಿ ಉಡುಪಿ ಜಿಲ್ಲೆಯ ಹಿರಿಯ ಭೂವಿಜ್ಞಾನಿಯಾದ ವಿಂಧ್ಯಾ ಅವರು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೂರುದಾರರಾದ ಶ್ರೀ ಗಣೇಶ್ ಶೆಟ್ಟಿ ಅವರು ಹಾಜರಿದ್ದರು. ದೂರಿನ ಆರೋಪಗಳಿಗೆ ಸಂಬAಧಿಸಿದAತೆ…
-

ಕೆಮ್ಮಣ್ಣು-ಹೂಡೆ ಕಡಲತೀರದಲ್ಲಿ ಕಾನೂನು ಮಣ್ಣುಪಾಲು; ರೆಸಾರ್ಟ್, ಹೋಂಸ್ಟೇಗಳಿಗೆ ಅಕ್ರಮ ಲೈಸನ್ಸ್ ಭಾಗ್ಯ!
ಕರಾವಳಿ ನಿಯಂತ್ರಣ ವಲಯ (CRZ) ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ, ಸಮುದ್ರ ತೀರದ ಅತ್ಯಂತ ಸೂಕ್ಷ್ಮ ವಲಯದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ರೆಸಾರ್ಟ್ ಹಾಗೂ ಹೋಂಸ್ಟೇಗಳಿಗೆ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಕ್ರಮವಾಗಿ ಪರವಾನಗಿ (ಲೈಸನ್ಸ್) ಹಾಗೂ ಮೆಸ್ಕಾಂ (MESCOM) NOC ನೀಡಿರುವ ಆಘಾತಕಾರಿ ಮಹಾ ಹಗರಣವೊಂದು ಇದೀಗ ಬೆಳಕಿಗೆ ಬಂದಿದೆ. ಜಿಲ್ಲಾಡಳಿತದ ಮೂಗಿನ ನೇರಕ್ಕೇ ನಡೆದಿರುವ ಈ ಕಾನೂನುಬಾಹಿರ ದಂಧೆ ಇಡೀ ಉಡುಪಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಸಮುದ್ರದ ಪಕ್ಕದಲ್ಲೇ ತಲೆಯೆತ್ತಿರುವ ಈ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಾಣಿಜ್ಯ…
-

ನಾಪತ್ತೆಯಾಗಿದ್ದ ಗಾಯಕಿ ಇಂದರ್ ಕೌರ್ ಮೃತದೇಹ ಕಾಲುವೆಯಲ್ಲಿ ಪತ್ತೆ
ಪಂಜಾಬ್: ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ (29) ಅವರು ಪಂಜಾಬ್ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇಂದರ್ ಕೌರ್ ಅವರನ್ನು ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಮಂಗಳವಾರ ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೀಗ ಆತನ ಮೇಲೆಯೇ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.ಮೇ 13ರಂದು ರಾತ್ರಿ ಸುಮಾರು ೮.೩೦ಕ್ಕೆ ಇಂದರ್ ಕೌರ್ ಅವರು ತಮ್ಮ…
-

KGFನಲ್ಲಿ ರೌಡಿಶೀಟರ್ಗೆ ಶಾಕ್: ಮಗಳ ಮದುವೆಯಲ್ಲೇ ಪೊಲೀಸರ ಕಾರ್ಯಾಚರಣೆ
ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ. ಪೊಲೀಸ್…
-

ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್
ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್…
-

ಮಂಗಳೂರಿನಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ – ಸಿಬ್ಬಂದಿಯ ಕೈ ಮಣಿಗಂಟು ಮುರಿತ
ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸಾದ್, ಉದಯ ಮತ್ತು ಪ್ರಶಾಂತ್ ಎಂಬ ಮೂವರು ಆರೋಪಿಗಳ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮೇ 17 ರಂದು ರಾತ್ರಿ ಕೊಂಚಾಡಿ ಜಂಕ್ಷನ್ನಲ್ಲಿರುವ ಬಾರ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











