Category: ಬ್ರೇಕಿಂಗ್ ನ್ಯೂಸ್
-

ಉಡುಪಿ : ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ದಾಸ್ಗೆ ಗಡಿಪಾರು ಆದೇಶ
ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ್ (34) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮೇ 14ರಂದು ಈ ಆದೇಶ ಹೊರಡಿಸಿದ್ದು, ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಭರತ್ ಜಯರಾಮ್ ದಾಸ್ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ…
-

₹27 ಸಾವಿರ ಕೋಟಿ ವಂಚನೆ ಆರೋಪ: ಅನಿಲ್ ಅಂಬಾನಿ ಕಂಪನಿಗಳ ವಿರುದ್ಧ ಕಾರ್ಯಾಚರಣೆ ಚುರುಕು
ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಪ್ರಮುಖರ ನಿವಾಸಗಳ ಮೇಲೆ ದಾಳಿ ರಿಲಯನ್ಸ್ ಕಮ್ಯುನಿಕೇಷನ್ಸ್ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ…
-

ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್ರ…
-

ಚಂಡಮಾರುತದ ತೀವ್ರತೆ: ಛಾವಣಿಯೊಂದಿಗೆ ವ್ಯಕ್ತಿ 50 ಅಡಿ ಹಾರಿದ ಘಟನೆ
ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಬೀಸಿದ ಭೀಕರ ಚಂಡಮಾರುತಕ್ಕೆ ವ್ಯಕ್ತಿಯೊಬ್ಬ ತಗಡಿನ ಛಾವಣಿಯೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿದ ಆಘಾತಕಾರಿ ಘಟನೆ ನಡೆದಿದೆ. ಬಾಮಿಯಾನಾ ಗ್ರಾಮದ ಇ-ರಿಕ್ಷಾ ಚಾಲಕ ನಾನ್ಹೆ ಮಿಯಾನ್ (50) ಈ ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಬಿರುಗಾಳಿ ತೀವ್ರಗೊಂಡಾಗ ಮದುವೆ ಮಂಟಪದ ಶೆಡ್ ಹಾರಿಹೋಗದಂತೆ ಹಗ್ಗ ಹಿಡಿದಿದ್ದ ನಾನ್ಹೆ, ಗಾಳಿಯ ಅಬ್ಬರಕ್ಕೆ ತಗಡಿನ ಸಮೇತ ಆಕಾಶಕ್ಕೆ ಹಾರಿಸಲ್ಪಟ್ಟಿದ್ದರು. ಸುಮಾರು 50 ಅಡಿ ಎತ್ತರಕ್ಕೆ…
-

ಸುರತ್ಕಲ್ನಲ್ಲಿ ರೌಡಿಶೀಟರ್ಗಳ ಮಧ್ಯೆ ರಸ್ತೆ ಮಧ್ಯೆ ಹೊಡೆದಾಟ
ಸುರತ್ಕಲ್ : ಸುಭಾಷಿತನಗರದ ಬಂಟರ ಭವನದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಪರಸ್ಪರ ಹೊಡೆದಾಟ ನಡೆಸಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿದ ಆರೋಪದ ಮೇಲೆ ಇಬ್ಬರು ಸಕ್ರಿಯ ರೌಡಿಶೀಟರ್ಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಡಿಕೆರೆ ಲೋಕೇಶ್ನ ಸಹಚರ ವಿಶ್ವ ಅಲಿಯಾಸ್ ವಿಶ್ವನಾಥ (43) ಮತ್ತು ದಿನೇಶ್ ಆರ್. ಶೆಟ್ಟಿ ಮುಂಚೂರು (36) ಪ್ರಕರಣ ದಾಖಲಾದ ರೌಡಿಶೀಟರ್ಗಳು. ಈ ಇಬ್ಬರೂ ಸುರತ್ಕಲ್ ಪೊಲೀಸ್ ಠಾಣೆಯ ಸಕ್ರಿಯ ರೌಡಿಶೀಟರ್ ಪಟ್ಟಿಯಲ್ಲಿದ್ದು, ಇವರ ವಿರುದ್ಧ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ…
-

ಹಿಜಾಬ್, ಜನಿವಾರದ ಬಗ್ಗೆ ಆರ್.ಅಶೋಕ್ ತಲೆ ಕೆಡಿಸುವ ಅಗತ್ಯವಿಲ್ಲ: ಕೆ.ಅಶ್ರಫ್
ಮಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಸ್ಲಿಮ್ ವಿಧ್ಯಾರ್ಥಿಗಳು ತಮ್ಮ ಸಂವಿಧಾನಿಕ ಧಾರ್ಮಿಕ ಹಕ್ಕು ಆದ ಶಿರ ವಸ್ತ್ರ ಧಾರಣೆ , ಹಿಜಾಬ್ ಅನ್ನು ಈ ಹಿಂದಿನ ಬಿಜೆಪಿ ಸರಕಾರ ನಿರ್ಬಂಧ ಗೊಳಿಸಿದ ಆದೇಶವನ್ನು ಹಾಲಿ ಸರಕಾರ ಹಿಂದಕ್ಕೆ ಪಡೆದ ವಿಷಯದಲ್ಲಿ ಆರ್.ಅಶೋಕ್ ನಾಟಕೀಯ ಆಕ್ರೋಶ ವ್ಯಕ್ತಪಡಿಸಿದ್ದಾರೆ!. ಆರ್.ಅಶೋಕ್ ಅವರು ಹಿಜಾಬ್ ಮತ್ತು ಜನಿವಾರದ ಬಗ್ಗೆ ಅತಿಯಾಗಿ ತಲೆ ಕೆಡಿಸಿ ಚಿಂತಿಸಿಕೊಳ್ಳುವ ಅಗತ್ಯ ಇಲ್ಲ!. ಅದು ಅವರಿಗೆ ಸಂಬಂಧಿಸಿದ ವಿಷಯವು ಅಲ್ಲ. ಆರ್. ಅಶೋಕ್ ಗೆ ತಲೆ ಕೆಡಿಸಿಕೊಳ್ಳಲು ಹಲವಾರು…
-

ಬುರ್ಖಾ ಧರಿಸಿ ಚಿನ್ನದ ಅಂಗಡಿಗೆ ಎಂಟ್ರಿ: ಖಾರಪುಡಿ ಎರಚಿ ದರೋಡೆ ಯತ್ನ
ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ
-

ಬ್ಯಾಂಕ್ ಹಣ ಕಳ್ಳತನಕ್ಕೆ ಯತ್ನ: ಸ್ಥಳೀಯರಿಂದ ಆರೋಪಿಗಳ ಬಂಧನ
ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ. ಕಳ್ಳರು ಹಣದೊಂದಿಗೆ…
-

ಎಸ್ಐಟಿ ತನಿಖೆ ವೇಳೆ ಕೆಲಸ ಮಾಡಿದ ಕಾರ್ಮಿಕರಿಗೆ ಹಣ ಬಾಕಿ: ಗ್ರಾಮಸ್ಥರ ಅಸಮಾಧಾನ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣ ಬಾರೀ ಸದ್ದು ಮಾಡಿತ್ತು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿ, ಪ್ರಕರಣದ ತನಿಕೆಯನ್ನು ಎಸ್ಐಟಿ ತಂಡಕ್ಕೆ ವರ್ಗಾವಣೆ ಮಾಡಿತ್ತು. ನಂತರ ಎಸ್ಐಟಿ ತನಿಖೆ ಶುರುವಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಆತ ಹೇಳಿದ ಸ್ಥಳಕ್ಕೆ ಕರೆದುಕೊಂಡು ಬಂದು, ಸ್ಥಳ ಗುರುತು ಮಾಡಿ ಒಟ್ಟು ಹದಿನೇಳು ಕಡೆಗಳಲ್ಲಿ ಉತ್ಖನನ ಕೂಡ ನಡೆಯಿತು. ಆದ್ರೆ ಮಳೆ, ಗಾಳಿ, ಬಿಸಿಲಿಗೆ ಮೈಯೊಡ್ಡಿ ದುಡಿದವರ ದುಡ್ಡು ಪಾವತಿ ಮಾತ್ರ ಇನ್ನೂ ಬಾಕಿ ಇದೆ. 2025ರ ಜುಲೈ…
-

ನಕಲಿ ಪಾಸ್ಪೋರ್ಟ್ ಮೂಲಕ ಇಸ್ರೇಲ್ಗೆ ಹಾರಿದ ಮಹಿಳೆ: ಮಂಗಳೂರಿನಲ್ಲಿ ಅಕ್ರಮ ಜಾಲ ಬಯಲು
ಮಂಗಳೂರು: ಬೇರೊಬ್ಬರ ಅಧಿಕೃತ ದಾಖಲೆಗಳನ್ನು ಬಳಸಿ ನಕಲಿ ಪಾಸ್ಪೋರ್ಟ್ ಸೃಷ್ಟಿಸಿ, ಅಕ್ರಮವಾಗಿ ವಿದೇಶಕ್ಕೆ ತೆರಳಿದ ಪ್ರಕರಣವೊಂದನ್ನು ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರೀತಾ ಡಿ ಸೋಜಾ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ನಡೆದಿದ್ದೇನು?: ಉಳ್ಳಾಲ ಬೈಲ್ ನಿವಾಸಿ ಯಶೋಧ ಕೇಶವ ಎಂಬುವವರ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್ಪೋರ್ಟ್ (ನಂ. ಸಿ4042172) ಹೊಂದಿ ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಪಾಸ್ಪೋರ್ಟ್ ಅರ್ಜಿಯನ್ನು (BNX067061521924) ಕೂಲಂಕಷವಾಗಿ ಪರಿಶೀಲಿಸಿದಾಗ,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed









