Category: ಬ್ರೇಕಿಂಗ್ ನ್ಯೂಸ್
-

ತಲೆಗೆ ಮಚ್ಚು ಸಿಲುಕಿದ್ದರೂ ಏನು ಆಗಿಲ್ಲವೆಂಬಂತೆ ಮೊಬೈಲ್ ಹಿಡಿದು ಆಸ್ಪತ್ರೆಯಲ್ಲಿ ಓಡಾಡಿದ ಯುವಕ
ಮುಂಬೈ: ಸಿನೆಮಾ ದೃಶ್ಯವನ್ನೂ ಮೀರಿಸುವಂತಹ ಭೀಕರ ಹಾಗೂ ಅಚ್ಚರಿಯ ಘಟನೆಯೊಂದು ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ತಲೆಗೆ ಮಚ್ಚು ಚುಚ್ಚಿದ್ದರೂ ಯುವಕನೊಬ್ಬ ಆಸ್ಪತ್ರೆಯ ಆವರಣದಲ್ಲಿ ಮೊಬೈಲ್ ಹಿಡಿದು ಏನೂ ಆಗಿಲ್ಲವೆಂಬಂತೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ಆ ಆಯುಧವು ಆತನ ತಲೆಯಲ್ಲೇ ಸಿಲುಕಿಕೊಂಡಿತ್ತು. ಆದರೆ, ಇಂತಹ ಗಂಭೀರ ಸ್ಥಿತಿಯಲ್ಲೂ ಆತ ಮೊಬೈಲ್ ಬಳಸುತ್ತಾ ಆಸ್ಪತ್ರೆಗೆ ನಡೆದು ಬಂದಿರುವ ದೃಶ್ಯವು ನೋಡುಗರನ್ನು ಬೆಚ್ಚಿಬೀಳಿಸಿದೆ ಮೇ 4, 2026 ರಂದು ಮುಂಜಾನೆ ವಿಕ್ರೋಲಿಯ…
-

ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ
ಕಳೆದ ಎಂಟು ವರ್ಷಗಳಿಂದ ಪ್ರೀತಿಸಿ, ಸಂಸಾರ ನಡೆಸಿ ಈಗ ಕೈಕೊಟ್ಟ ಪ್ರೇಯಸಿಯ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರು ಬೀದಿಗಿಳಿದು ನ್ಯಾಯಕ್ಕಾಗಿ ಮೊರೆ ಹೋಗಿರುವ ಘಟನೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಿಯಕರನಿಗೆ ವಂಚಿಸಿ ಬೇರೊಬ್ಬನ ಜೊತೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್ಟೇಬಲ್ ವಿರುದ್ಧ ಪಿಎಸ್ಐ ರಾಯಚೂರು ಎಸ್ಪಿ ಹಾಗೂ ಆನ್ಲೈನ್ ಮೂಲಕ ದೂರು ದಾಖಲಿಸಿದ್ದಾರೆ. ಸ್ನೇಹದಿಂದ ಶುರುವಾದ ಪ್ರೀತಿ ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ವಿರೇಶ್ ಮತ್ತು ಕಾನ್ಸ್ಟೇಬಲ್ ವಿಜಯಶ್ರೀ ಅವರ…
-

ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!
ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯೊಂದು ಈಗ ಭ್ರಷ್ಟಾಚಾರದ ಕೇಂದ್ರವಾಗಿ ಸುದ್ದಿಯಲ್ಲಿದೆ. ರೋಗಿಗಳಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಯ ಆಪರೇಷನ್ ಥಿಯೇಟರ್ (OT) ನಲ್ಲಿ ಭಾರಿ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್ ಥಿಯೇಟರ್ನಲ್ಲಿ ಅಕ್ರಮ ದಾಸ್ತಾನು! ಸರ್ಕಾರಿ ಆಸ್ಪತ್ರೆಯ ಒಳಭಾಗದಲ್ಲಿರುವ ಆಪರೇಷನ್ ಥಿಯೇಟರ್ನಲ್ಲಿ ಅಕ್ರಮವಾಗಿ ಹಣ ಮತ್ತು ಚಿನ್ನವನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಯಾರಿಗೂ ಅನುಮಾನ ಬಾರದಂತೆ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಿ…
-

ಕೆಎಸ್ಆರ್ಟಿಸಿ ಬಸ್ ಹೊತ್ತಿ ಉರಿದು ನಾಶ:17 ಪ್ರಯಾಣಿಕರು ಪಾರು
ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಪಕ್ಕೀರಪ್ಪ…
-

ಬಂಟ್ವಾಳ ಪೊಲೀಸ್ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ
ಬಂಟ್ವಾಳ: ಅಕ್ರಮವಾಗಿ ನಕಲಿ ನೋಟಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2.38 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದೆ.ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಂಧನಗಳನ್ನು ಮಾಡಲಾಗಿದೆ. ಆರೋಪಿಗಳು ಹೆಚ್ಚಿನ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದು, ಅವುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದೆ.ಕಾರ್ಯಾಚರಣೆಯ ಸಮಯದಲ್ಲಿ,…
-

ಡ್ರಗ್ಸ್ ಸೇವಿಸಿ ಸ್ಕೂಟರ್ ಓಡಿಸಿದ ಯುವಕ ಪೊಲೀಸರ ಬಲೆಗೆ
ಬಂಟ್ವಾಳ: ಮಾದಕ ದ್ರವ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸಿದ ಮತ್ತು ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಉಪ-ನಿರೀಕ್ಷಕರೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಳ್ನಾಡು ನಿವಾಸಿ ಮೊಹಮ್ಮದ್ ಅಸ್ಬೀರ್ (26) ಎಂದು ಗುರುತಿಸಲಾಗಿದೆ.ಘಟನೆಯು ಮೇ 3ರ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ವಿಟ್ಲ ಪೊಲೀಸ್ ಉಪ-ನಿರೀಕ್ಷಕ ಬಿ.ಎಸ್. ನಾಯಕ್ ಮತ್ತು ಅವರ ಸಿಬ್ಬಂದಿ ವಿಟ್ಲ ನಾಲ್ಕು ಪಥದ ರಸ್ತೆಯ ಜಂಕ್ಷನ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೆಲ್ಮೆಟ್…
-

ಬೈಕ್ ಹಿಂಬಾಲಿಸಿ ಹತ್ಯೆ: ಯುವಕನನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿ ಭಾನುವಾರ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದ್ದು, ಸಕ್ಕರೆ ನಾಡಿನ ಜನತೆಯನ್ನು ಬೆಚ್ಚಿಬೀಳಿಸಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ಕಡಿದು ಹತ್ಯೆ ಮಾಡಿದೆ.ಘಟನೆಯ ವಿವರ:ಮೈಸೂರು ಮೂಲದ ಮಹಮ್ಮದ್ ಸೋಹೇದ್ (27) ಕೊಲೆಯಾದ ದುರ್ದೈವಿ. ಬೈಕಿನಲ್ಲಿ ತೆರಳುತ್ತಿದ್ದ ಸೋಹೇದ್ನನ್ನು ನಾಲ್ಕೈದು ಮಂದಿ ಕಿರಾತಕರ ತಂಡ ಬೈಕ್ಗಳಲ್ಲಿ ಹಿಂಬಾಲಿಸಿಕೊಂಡು ಬಂದಿದೆ. ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ ಗಂಜಾಂ ತಲುಪುತ್ತಿದ್ದಂತೆ ಅಡ್ಡಗಟ್ಟಿದ ಹಂತಕರು, ಲಾಂಗು ಮತ್ತು ಮಚ್ಚುಗಳಿಂದ ಮನಬಂದಂತೆ ದಾಳಿ…
-

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಮಹಿಳೆ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್ನಲ್ಲಿ ಭಾರಿ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಲಘು ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು, ತಮ್ಮ ವಾಹನವನ್ನು ದೇವಸ್ಥಾನದ ಕಡೆಗೆ ಬಿಡಬೇಕೆಂದು ಪಟ್ಟು ಹಿಡಿದು ಪೊಲೀಸರೊಂದಿಗೆ…
-

ಪತಿ-ಪತ್ನಿ ಕಲಹ: ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ
ಬೆಂಗಳೂರು: ನಗರದಲ್ಲಿ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ, ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ ಬಾಬು ದಂಪತಿ ಮದುವೆಯಾಗಿ 16 ವರ್ಷಗಳಾಗಿತ್ತು. ಆಗಾಗ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳದ ಕಾರಣಕ್ಕೆ ಗಂಡನ ಮೇಲಿನ ಕೋಪದಿಂದ ಹೆಂಡತಿ ಮೂರು…
-

ಬಂಟ್ವಾಳದಲ್ಲಿ ಎಂಡಿಎಂಎ ಜಪ್ತಿ: ಇಬ್ಬರು ಸಹೋದರರ ಬಂಧನ
ಬಂಟ್ವಾಳ: ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಾಣಿ ಗ್ರಾಮದ ಪಂಜಾಲದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 42 ಲಕ್ಷ ರೂಪಾಯಿ ಮೌಲ್ಯದ ಮಾದಕವಸ್ತು, ಬೊಲೆರೊ ವಾಹನ ಮತ್ತು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಂಟ್ವಾಳದ ಬೋಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಮತ್ತು ಆತನ ಸಹೋದರ ಮೊಹಮ್ಮದ್ ಶಾಹೀಮ್ (19) ಎಂದು ಗುರುತಿಸಲಾಗಿದೆ.ಬೊಲೆರೋ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಬಂಟ್ವಾಳದ ಕಡೆಗೆ ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











