Category: ಬ್ರೇಕಿಂಗ್ ನ್ಯೂಸ್
-

ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!
ಬೆಂಗಳೂರು : ಬಾಲ್ಯದಿಂದಲೇ ಸ್ನೇಹಿತರಾಗಿದ್ದ ಇಬ್ಬರ ನಡುವೆ ಮದ್ಯಪಾನದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ತಮಿಳುನಾಡಿನ ಸಿಂಗಸಾದನಪಳ್ಳಿ ಮೂಲದ ಮೋಹನ್ ಎಂಬ ಯುವಕನನ್ನು ಅವನ ಸ್ನೇಹಿತ ಮನೋಜ್ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಮಟ್ಟನಹಳ್ಳಿ ಬಳಿ, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೋಹನ್ ಮತ್ತು ಮನೋಜ್ ಜೊತೆಗೂಡಿ ನಿರ್ಜನ ಪ್ರದೇಶಕ್ಕೆ ಹೋಗಿ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಇಬ್ಬರೂ ಹೆಚ್ಚು ನಶೆಯಲ್ಲಿ ಇದ್ದಾಗ, ಸುಮಾರು ಎರಡು ವರ್ಷಗಳ ಹಿಂದೆ ನಡೆದ…
-

ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ…
-

ಕ್ರೈಂ ವಾರ್ತೆಯ ಫಲಶೃತಿ: ನಿರಂತರವರದಿಗಾರಿಕೆಯಿಂದ ಕೆಮ್ಮಣ್ಣು ಪಡು ತೋನ್ಸೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಬಾರ್ & ರೆಸ್ಟೋರೆಂಟ್ ಮಾಲಿಕನ ವಿರುದ್ಧ ಪ್ರಕರಣ ದಾಖಲು..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ಅಕ್ರಮ ವಾಣಿಜ್ಯ ಕಟ್ಟಡದ ಕಾಮಗಾರಿ ಬಗ್ಗೆ ನಮ್ಮ ಕ್ರೈಂ ವಾರ್ತೆ ಸುದ್ದಿ ವಾಹಿನಿಯಲ್ಲಿ ಕಳೆದ 2 ತಿಂಗಳಿನಿಂದ ನಿರಂತರ ವರದಿ ಮಾಡಿದ್ದು ಅದರ ಫಲಶೃತಿಯಂತೆ ಇಂದು ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಮೇಲೆ ಪೋಲಿಸರು ಸೋಮೊಟೋ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ, ತಹಶೀಲ್ದಾರ, ಚೀಫ್ ಆಫೀಸರ್, ನಗರಾಭಿವೃದ್ಧಿ ಇಲಾಖೆ…
-

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ನ್ಯಾಯಾಲಯದಲ್ಲಿ ನಡೆದಿದ್ದೇನು? ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ. ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ…
-

ಮಂಗಳೂರು: ಆದ್ಯಪಾಡಿಯಲ್ಲಿ ಅಕ್ರಮ ಕೆಂಪು ಗಣಿಗಾರಿಕೆ..!! 5 ಲಾರಿ ವಶ ಪಡೆದ ಪೊಲೀಸರು
ಮಂಗಳೂರು: ಆದ್ಯಪಾಡಿ, ವಿಮಾನ ನಿಲ್ದಾಣದ ಪಕ್ಕದಲ್ಲಿ ಅಕ್ರಮವಾಗಿ ಕೆಂಪು ಮಣ್ಣು ತೆಗೆಯುತ್ತಿದ್ದ ಕೊರೆಗೆ ಕಾವೂರು ಪೋಲಿಸರು ದಾಳಿ ನಡೆಸಿ ಐದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವಿಮಾನ ನಿಲ್ದಾಣದ ಅಕ್ಕ ಪಕ್ಕದಲ್ಲಿ ಮಣ್ಣು ತೆಗೆಯದಂತೆ ಸೊಚನೆ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಇವರಿಗೆ ಅಕ್ರಮವಾಗಿ ಕೆಂಪು ಮಣ್ಣು ತೆಗೆಯಲು ಅವಕಾಶ ನೀಡಿದವರು ಯಾರು?? ಅಕ್ರಮವಾಗಿ ಕೆಂಪು ಮಣ್ಣು ಸಾಗಿಸುತ್ತಿದ್ದ 5 ವಿಮಲ್ ಲಾರಿಯನ್ನು ಹಿಡಿದಿದ್ದಾರೆ ಎಂಬ ಮಾಹಿತಿ ಇದೆ ಹೀಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ…
-

ಉಡುಪಿ: ವಾಟ್ಸಾಪ್ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ. ಪಂಗನಾಮ!
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ಪರಿಣಾಮ ಹಲವಾರು ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಆನ್ಲೈನ್ ವಂಚನೆ ಒಳಗಾಗಿರುವ ಘಟನೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್ ಹಮೀದ್ ಅವರಿಗೆ ಏಪ್ರಿಲ್ 12 ರಂದು ಅವರ ಪರಿಚಯಸ್ಥ ಕುಮಾರಸ್ವಾಮಿ ಅವರ ಮೊಬೈಲ್ ಸಂಖ್ಯೆಯಿಂದ APK ಫೈಲ್ ಬಂದಿದ್ದು, ಫೈಲ್ ಡೌನ್ಲೋಡ್ ಮಾಡಿದ ನಂತರ ಅವರ ಬ್ಯಾಂಕ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಏಪ್ರಿಲ್ 13 ರಂದು,…
-

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!
ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸಂಕೇತ್ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್ 31ರಂದು ಸಂಕೇತ್ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ…
-

ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ನಾಳೆ ಶಿಕ್ಷಪ್ರಮಾಣ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ ಗಜಾನನ ಭಟ್ ತಿಳಿಸಿದರು.…
-

ಕಾರ್ಕಳ: ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ FIR
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ನೇತೃತ್ವದಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 8.20ಕ್ಕೆ ದಾಳಿ ನಡೆಸಲಾಯಿತು. ದಾಳಿ ವೇಳೆ…
-

ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ (PDO) ರಾಯಚೂರು ಜಿಲ್ಲಾ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: 2017ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ ಖಾಜಾ, ಶೇಡ್ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲು ಚೇತನ್ ಎಂಬ ರೈತನಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ರೈತ ನೀಡಿದ ದೂರಿನ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











