Category: ಬ್ರೇಕಿಂಗ್ ನ್ಯೂಸ್
-

ಬೆಳ್ತಂಗಡಿ: ವಿಚಾರಣೆಗೆ ಗೈರು- ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್…
-

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್..!! ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ
ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ…
-

ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!
ಪ್ರಿಯಕರನ ಜೊತೆ ಬಾಳಬೇಕೆಂಬ ಹಠಕ್ಕೆ ಬಿದ್ದ ಮಗಳನ್ನೇ ಹೆತ್ತವರು ಕ್ರೂರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಮರ್ಯಾದೆ ಉಳಿಸಿಕೊಳ್ಳಲು ಮಗಳಿಗೆ ವಿಷ ಕುಡಿಸಿ ಕೊಂದು, ಸಾಕ್ಷಿ ನಾಶಪಡಿಸಲು ಗಂಟೆಗಳಲ್ಲೇ ಮೃತದೇಹವನ್ನು ಸುಟ್ಟು ಹಾಕಿರುವ ಘೋರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ಮೃತ ಸತ್ಯವ್ವ ಹಾಗೂ ಹುಕ್ಕೇರಿ ತಾಲೂಕಿನ ನದಿಗುಡಿ ಕ್ಷೇತ್ರದ ಕೃಷ್ಣಾ ಪಾಟೀಲ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ವರ್ಷಗಳ ಹಿಂದೆ…
-

ಗುಂಡು ಹಾರಿಸಿ ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಹತ್ಯೆ!
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದ ಘಟನೆ ನಗರದ ಹೊರವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ.ರಾಜು ಕರೆ (48) ಕೊಲೆಯಾದ ದುರ್ದೈವಿ. ಸಂಜೆ 4:30ರ ಸುಮಾರು ಘಟನೆ ನಡೆದಿದೆ. ರಸ್ತೆಯನ್ನು ಗಮನಿಸಿದರೆ ಎರಡು ವಾಹನಗಳು ದಾಟುವುದು ಕಷ್ಟ. ರಾಜು ತಮ್ಮ ಥಾರ್ ವಾಹನದಲ್ಲಿ ಬರುತ್ತಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಬಂದು ಡಿಕ್ಕಿ ಹೊಡೆದು ಮೊದಲು ಅಪಘಾತ ಮಾಡಿದ್ದಾರೆ. ಬಳಿಕ ಜೀಪ್ ಡೋರ್ ಓಪನ್ ಆಗದ್ದಕ್ಕೆ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.…
-

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವು
ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ. ಎ.11ರಂದು ಮಹಾಕಾಳಿಪಡ್ಪಿಅಂಡರ್ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ…
-

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮ*ಹ*ತ್ಯೆಗೆ ಶರಣು
14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ…
-

ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ
ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ ನಡೆದ ಗಲಾಟೆ ವಿಷಯವಾಗಿ ತಕರಾರು ತೆಗೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿಶ್ವನಾಥರನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೊರೆತ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 92/2026, ಕಲಂ…
-

ಮಂಡ್ಯದಲ್ಲಿ ನಿಲ್ಲುತ್ತಿಲ್ಲ ಎಗ್ಗಿಲ್ಲದೇ ಅಕ್ರಮ ಕಲ್ಲುಗಣಿಗಾರಿಕೆ..!! ಜಿಲ್ಲಾಧಿಕಾರಿ ನಿಷೇಧಾಜ್ಞೆ ಗೂ ಬಗ್ಗದ ಭಕ್ಷಕರು
ಮಂಡ್ಯ: ಜಿಲ್ಲಾಧಿಕಾರಿಯವರು ತಡೆ ನೀಡಿದ ಸ್ಥಳದಲ್ಲಿ ಅನಧಿಕೃತವಾಗಿ ಮತ್ತೆ ಎಗ್ಗಿಲ್ಲದೇ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್ ಗೌಡ ದೂರಿದರು. ಮಾ.11ರಂದು ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿನ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದರು. ಅದನ್ನು ಸಾಕಾರಗೊಳಿಸುವಲ್ಲಿ ‘ಟಾಸ್ಕ್ ಫೋರ್ಸ್’ ಸಮಿತಿ ವಿಫಲವಾಗಿದೆ ಎಂದು ಆರೋಪಿಸಿದರು. ಜಿಲ್ಲಾದ್ಯಂತ 103 ಕಲ್ಲು ಕೋರೆಗಳಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೇ 52 ಕೇಂದ್ರಗಳಿವೆ. ಅವುಗಳಲ್ಲಿ 22ಕ್ಕೆ ಮಾತ್ರ ಪರವಾನಗಿ…
-

ಆರಿಫ್ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖಾ ತಂಡವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೃತ್ಯದ ಸಂಚು ಮತ್ತು ಹಲ್ಲೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಅರ್ಶದ್ ಸೇರಿ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಏರಿಕೆಯಾಗಿದ್ದು, ಹತ್ಯೆಯ ಹಿಂದಿನ ವ್ಯವಸ್ಥಿತ ಸಂಚಿನ ಹೂರಣ ಒಂದೊಂದಾಗಿ ಬಯಲಾಗುತ್ತಿದೆ. ಬಂಧಿತರ ಪೈಕಿ ಅರ್ಶದ್ ಈ ಕೊಲೆ ಕೃತ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈತ ಹಂತಕರಿಗೆ ಮಾರಕಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ…
-

30 ಸಾವಿರ ಲಂಚ ಸ್ವೀಕಾರ : ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆರ್ ಟಿ ಓ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್ಟಿಓ ಪ್ರೊಬೆಷನರಿ ಇನ್ಸ್ಪೆಕ್ಟರ್ ಗಳಾದ ದಿನೇಶ್ ಕುಮಾರ್ ಹಾಗೂ ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಗೂಗಲ್ ಪೇ ಮೂಲಕ 2000, 1000 ನಗದು ಲಂಚವನ್ನು ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂಪಾಯಿ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ತಪಾಸನೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











