Category: ಬ್ರೇಕಿಂಗ್ ನ್ಯೂಸ್

  • ಸೈಬರ್ ಕಿರುಕುಳಕ್ಕೆ ಬ್ರೇಕ್: ಅನಾಮಧೇಯ ದೂರುಗಳನ್ನೂ ನಿರ್ಲಕ್ಷಿಸಬೇಡಿ! ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಆದೇಶ
    ,

    ಸೈಬರ್ ಕಿರುಕುಳಕ್ಕೆ ಬ್ರೇಕ್: ಅನಾಮಧೇಯ ದೂರುಗಳನ್ನೂ ನಿರ್ಲಕ್ಷಿಸಬೇಡಿ! ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಆದೇಶ

    ಇಂಟರ್ನೆಟ್ ಲೋಕದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಆನ್‌ಲೈನ್ ದೂರು ನೀಡುವಾಗ ದೂರುದಾರರು ತಮ್ಮ ಗುರುತನ್ನು ಬಹಿರಂಗಪಡಿಸದಿದ್ದರೂ (Faceless Complaints), ಅಂತಹ ದೂರುಗಳ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ. ಸಮಾಜದ ಭಯ ಅಥವಾ ಮುಜುಗರದಿಂದಾಗಿ ಅನೇಕರು ತಮ್ಮ ಹೆಸರು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಇಂತಹ ‘ಅನಾಮಧೇಯ’ ದೂರುಗಳನ್ನು ಕೇವಲ ತಾಂತ್ರಿಕ ಕಾರಣಗಳಿಗಾಗಿ ವಜಾಗೊಳಿಸಬಾರದು…

    Continue Reading

  • ವಿಟ್ಲ: ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಗಂಭೀರ..!! ಚಾಲಕ ಮತ್ತು ನಿರ್ವಾಹಕರು ಬೇಜವಾಬ್ದಾರಿಗೆ ಜನ ಆಕ್ರೋಶ
    , ,

    ವಿಟ್ಲ: ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಗಂಭೀರ..!! ಚಾಲಕ ಮತ್ತು ನಿರ್ವಾಹಕರು ಬೇಜವಾಬ್ದಾರಿಗೆ ಜನ ಆಕ್ರೋಶ

    ವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿದ್ದ ಬಸ್ಸೊಂದು ಕಂಡಕ್ಟರ್ ಬೇಜವಾಬ್ದಾರಿಯಿಂದಾಗಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ-ಮುಡಿಪು-ಸ್ಟೇಟ್‌ಬ್ಯಾಂಕ್ ಸಂಚರಿಸುವ ಮಹೇಶ್ ಹೆಸರಿನ ಖಾಸಗಿ ಬಸ್ (KA 19 AF 4649) ವಿಟ್ಲದ ಖಾಸಗಿ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿತ್ತು. ಇದೇ ಸಂದರ್ಭ ಇನ್ನೊಂದು ಬಸ್ಸಿಂದ ಇಳಿದು ಹೋಗುತ್ತಿದ್ದ ಮಹಿಳೆಗೆ ಮಹೇಶ್ ಬಸ್ ಡಿಕ್ಕಿ ಹೊಡೆದಿದೆ. ಮಹಿಳೆ ಬಸ್ಸಿನ ಅಡಿಗೆ ಬೀಳುತ್ತಿರುವುದನ್ನು ನೋಡನೋಡುತ್ತಲೇ ಸ್ಥಳೀಯ ಜ್ಯೂಸ್ ಅಂಗಡಿ ಮಾಲಿಕ ರಘುಶೆಟ್ಟಿಯವರು ಮತ್ತು ಆಟೋ ಚಾಲಕರು ಸಾಕಷ್ಟು ಬೊಬ್ಬೆ…

    Continue Reading

  • ಅತ್ಯಾಚಾರ ಪ್ರಕರಣ-ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಬಂಧನಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
    ,

    ಅತ್ಯಾಚಾರ ಪ್ರಕರಣ-ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಬಂಧನಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

    ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್‌ಸ್ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ…

    Continue Reading

  • ಮಂಗಳೂರು: RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!! ಮಧ್ಯವರ್ತಿಗಳ ಹಾವಳಿಯಿಂದ ಬೇಸತ್ತ ಜನ
    ,

    ಮಂಗಳೂರು: RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!! ಮಧ್ಯವರ್ತಿಗಳ ಹಾವಳಿಯಿಂದ ಬೇಸತ್ತ ಜನ

    ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲಾಖೆಯಲ್ಲಿ ಬ್ರೋಕರ್ ಗಳ ಕಾರುಬಾರೆ‌ ಜಾಸ್ತಿ, ದಲ್ಲಾಳಿಗಳು ಇಲ್ಲದೇ ಇಲ್ಲಿ ಯಾವುದೇ ಕೆಲಸ ನಡೆಯೊದಿಲ್ಲ. ಅಧಿಕಾರಿಗಳ ಮತ್ತು ದಲ್ಲಾಲಿಗಳ ನಡುವೆ ಹಣದ ರೂಪದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ. ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ದುಡ್ಡು ಕೊಟ್ಟರೆ ಕ್ಷಣಮಾತ್ರದಲ್ಲಿ ನೀಡುತ್ತಾರೆ ಇದಕ್ಕೆಲ್ಲ ಬ್ರೋಕರ್ ಗಳು ಬೇಕೆ ಬೇಕು. ದಲ್ಲಾಳಿಗಳು ಮತ್ತು RTO ಅಧಿಕಾರಿಗಳು RTO ನಿಯಮಗಳನ್ನು ಗಾಳಿಗೆ ತೂರಿ ಲಂಚ ನೀಡಿದರೆ ಯಾವುದೇ ಕಾರ್ಯ…

    Continue Reading

  • ಕೋಕಾ ಕಾಯ್ದೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳ ಪತ್ತೆಗೆ ಐವತ್ತು ಸಾವಿರ ನಗದು ಬಹುಮಾನ ಘೋಷಣೆ
    ,

    ಕೋಕಾ ಕಾಯ್ದೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳ ಪತ್ತೆಗೆ ಐವತ್ತು ಸಾವಿರ ನಗದು ಬಹುಮಾನ ಘೋಷಣೆ

    ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಪ್ರಕರಣದ ಪ್ರಮುಖ ಆರೋಪಿಗಳಾದ ಮನೋಜ ಕೋಡಿಕೆರೆ (42) ಮತ್ತು ಚೇತನ್ ಪಡೀಲ್ @ ಚೇತನ್ ಕುಲಾಲ್ (38) ಪರಾರಿಯಾಗಿದ್ದಾರೆ. ಮನೋಜ ವಿರುದ್ಧ ಮಂಗಳೂರು ನಗರದಲ್ಲಿ 18 ಮತ್ತು ಉಡುಪಿ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಚೇತನ್ ವಿರುದ್ಧ…

    Continue Reading

  • ಉಡುಪಿ: ಯುವಕ ಅಪಹರಣ ಪ್ರಕರಣ- KCOCA ಅಡಿಯಲ್ಲಿ ಪ್ರಕರಣ, 7 ಮಂದಿ ಬಂಧನ..!! ಇಬ್ಬರು ಪರಾರಿ
    ,

    ಉಡುಪಿ: ಯುವಕ ಅಪಹರಣ ಪ್ರಕರಣ- KCOCA ಅಡಿಯಲ್ಲಿ ಪ್ರಕರಣ, 7 ಮಂದಿ ಬಂಧನ..!! ಇಬ್ಬರು ಪರಾರಿ

    ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಅವರನ್ನು ಅಪರಿಚಿತರು ಅಪಹರಿಸಿರುವ ಕುರಿತು ಪ್ರಕರಣ ದಾಖಲಾಗಿದೆ. ತೇಜಸ್‌ನ ಸ್ನೇಹಿತ ಪ್ರಜ್ವಲ್ ನೀಡಿದ ಮಾಹಿತಿಯಂತೆ, ನ.19, 2025ರಂದು ಮಧ್ಯಾಹ್ನ ತೇಜಸ್‌ನನ್ನು ಸಾಸ್ತಾನದಲ್ಲಿರುವ ಕೋಸ್ಟಲ್ ಪ್ಯಾರಡೈಸ್ ಹೊಟೇಲ್…

    Continue Reading

  • ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
    ,

    ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

     ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣದ ಹಿನ್ನೆಲೆ: ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.…

    Continue Reading

  • ಬಂಟ್ವಾಳ: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!
    ,

    ಬಂಟ್ವಾಳ: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

    ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳೊಂದಿಗೆ ಮಾ.30 ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು…

    Continue Reading

  • ಇನ್ಮುಂದೆ ಪೊಲೀಸರು ವಾಟ್ಸಪ್, ಸೋಷಿಯಲ್ ಮೀಡಿಯಾ ಮೂಲಕ ನೋಟಿಸ್, FIR ನೀಡುವಂತಿಲ್ಲ : ಹೈಕೋರ್ಟ್ ಸ್ಪಷ್ಟನೆ
    ,

    ಇನ್ಮುಂದೆ ಪೊಲೀಸರು ವಾಟ್ಸಪ್, ಸೋಷಿಯಲ್ ಮೀಡಿಯಾ ಮೂಲಕ ನೋಟಿಸ್, FIR ನೀಡುವಂತಿಲ್ಲ : ಹೈಕೋರ್ಟ್ ಸ್ಪಷ್ಟನೆ

     ಇನ್ಮುಂದೆ ಪೊಲೀಸರು ನೋಟಿಸ್ ಅಥವಾ ಎಫ್‌ಐಆರ್ ಪ್ರತಿಯನ್ನು ವಾಟ್ಸ್ಆ್ಯಪ್‌ ಅಥವಾ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ನೀಡುವಂತಿಲ್ಲ, ಬದಲಾಗಿ ಭೌತಿಕವಾಗಿಯೇ ನೀಡಬೇಕು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಹೌದು ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸುವ ಮುನ್ನ ನೋಟಿಸ್ ನೀಡುವುದು ಕಡ್ಡಾಯವಿದ್ದರೂ ಆರೋಪಿ ಉದ್ದೇಶಪೂರ್ವಕವಾಗಿ ಪೊಲೀಸ್ ನೋಟಿಸ್ ಸ್ವೀಕರಿಸದೆ ತಲೆಮರೆಸಿಕೊಂಡು ತನಿಖೆಗೆ ಅಸಹಕಾರ ತೋರಿದ ಸಂದರ್ಭದಲ್ಲಿ ನೇರವಾಗಿ ಬಂಧಿಸಬಹುದಾಗಿದೆ ಎಂದು ಹೇಳಿದೆ. ಹೂಡಿಕೆದಾರರಿಗೆ ಲಕ್ಷಾಂತರ ಹಣ ವಂಚಿಸಿದ ಪ್ರಕರಣದಲ್ಲಿ ತನಿಖೆಗೆ ಸಹಕರಿಸದೆ 40…

    Continue Reading

  • ಕಾರ್ಕಳ ಸುದೀಪ್ ರೈ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ
    ,

    ಕಾರ್ಕಳ ಸುದೀಪ್ ರೈ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ

    ಮಂಗಳೂರು: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಉನ್ನತ ತನಿಖೆಗೆ ಒತ್ತಾಯಿಸಿದ ಮೃತ ಸುದೀಪ್ ರೈ ತಂದೆ ಬಿ. ದಾಮೋದರ ನೆಲ್ಯಾಡಿ, ‘ಮಗನ ಸಾವಿಗೆ ಮಾ. 17ರಂದು ಆತನ ಪತ್ನಿ ನೆಲ್ಯಾಡಿ ಪೇಟೆಯಲ್ಲಿ ನಡೆಸಿದ ಗಲಾಟೆಯೇ ಮುಖ್ಯ ಕಾರಣಾಗಿದೆ. ನಂತರ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed