Category: ಬ್ರೇಕಿಂಗ್ ನ್ಯೂಸ್
-

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ
ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಮತ್ತೊಂದು ಸೈಬರ್ ವಂಚನೆ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.81 ವರ್ಷದ ವೃದ್ಧ ಉದ್ಯಮಿಯನ್ನು ಬೆದರಿಸಿ ಸೈಬರ್ ವಂಚಕರು 15 ಕೋಟಿ ರೂ. ದೋಚಿರುವ ಘಟನೆ ನಡೆದಿದೆ.ದುಷ್ಕರ್ಮಿಗಳು ಡಾರ್ಕ್ ವೆಬ್ ಮೂಲಕ ವೃದ್ಧನ ಸಂಪರ್ಕಕ್ಕೆ ಬಂದು, ಅವರ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ಬಳಿಕ ವಿಡಿಯೋ ಕಾಲ್ ಮಾಡಿ ತಾವು ಈಡಿ ಅಧಿಕಾರಿಗಳೆಂದು ನಂಬಿಸಿ, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. “ತನಿಖೆ ಪೂರ್ಣಗೊಳ್ಳುವವರೆಗೂ ನಿಮ್ಮ…
-

ಬಂಟ್ವಾಳ: ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಆಟೋ ಚಾಲಕನಿಂದ ಸಿಬ್ಬಂದಿ ಮೇಲೆ ಹಲ್ಲೆ-ಪ್ರಕರಣ ದಾಖಲು
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಹಾನಿಗೊಳಿಸಿರುವ ಘಟನೆ ಮಾರ್ಚ್ 20ರಂದು ಸಂಜೆ ನಡೆದಿದೆ. ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಕುನಲ್ ಭುಹ್ನಿಯಾ (27) ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶುಕ್ರವಾರ ಸಂಜೆ ಕೆಎ 19 ಎಸಿ 2102 ನೊಂದಾವಣಿ ಸಂಖ್ಯೆಯ…
-

ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ : 38 ಮಂದಿ ಕಾರ್ಯಕರ್ತರ ವಿರುದ್ಧ FIR
ಉಡುಪಿ : ಹಿಂದು ಜಾಗರಣ ವೇದಿಕೆಯ ಪ್ರತಿಭಟನೆ, ಎಚ್ಚರಿಕೆ ನಡುವೆಯೂ ತಮಿಳುನಾಡು ಮೂಲದ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ಆರಂಭಗೊಂಡಿದೆ. ಉಡುಪಿ ನಗರದ ಮಿಷನ್ ಕಂಪೌಂಡಿನಲ್ಲಿ ಮಾರ್ಚ್ 20ರಿಂದ 22ರ ವರೆಗೆ ಕಾರ್ಯಕ್ರಮ ಆಯೋಜಿಸಿದ್ದು, ಇದರ ಹಿಂದೆ ಮತಾಂತರದ ಷಡ್ಯಂತ್ರ ಇದೆ, ಲಾಜರಸ್ ಭಾಗವಹಿಸಲು ಅವಕಾಶ ನೀಡಬಾರದೆಂದು ಹಿಂದು ಜಾಗರಣ ವೇದಿಕೆ ಮುಖಂಡರು ಆಕ್ಷೇಪಿಸಿದ್ದರು. ಅಲ್ಲದೆ, ಜಿಲ್ಲಾಡಳಿತಕ್ಕೂ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಒತ್ತಾಯ ಮಾಡಿದ್ದರು. ಆದರೆ ಕಾರ್ಯಕ್ರಮ ಸಂಘಟಕರು ಹೈಕೋರ್ಟ್…
-

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ
ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ವಿರುದ್ಧ ಕಿರುಕುಳದ…
-

ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು- ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ
ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ…
-

ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಜಾಲ ಪತ್ತೆ..!! ಆರು ಮಂದಿ ವಿರುದ್ಧ FIR ದಾಖಲು
ರಾಜ್ಯದಲ್ಲಿ ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಮಾಡುತ್ತಿದ್ದಂತ ಜಾಲವೊಂದು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಛೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ನಡೆಯುತ್ತಿರುವ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯದಲ್ಲಿ ನಕಲಿ ದಾಖಲೆಗಳನ್ನು ಸೇರಿಸಲು ಯತ್ನಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಅವರು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 18-03-2026 ರಂದು ಮಧ್ಯಾಹ್ನ ತಾಲೂಕು ಕಛೇರಿಯಲ್ಲಿ ಗಣಕೀಕರಣ ಕಾರ್ಯ…
-

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ..!! ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆಗೆ ಯತ್ನ..!!
ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ-ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
-

ಉಡುಪಿ: ‘ಸಮಾಧಾನ ಮಹೋತ್ಸವ’ ನಡೆಸಲು ಹೈಕೋರ್ಟ್ ಅನುಮತಿ
ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ. ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ ಚರ್ಚಸ್ ಇದರ ವತಿಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಸುಮಾರು ಐದಾರು ತಿಂಗಳುಗಳಿಂದ ಇದಕ್ಕಾಗಿ ಸಂಪೂರ್ಣ ತಯಾರಿಯನ್ನು ಕೂಡ ನಡೆಸಲಾಗಿದೆ. ಇದರಲ್ಲಿ ಮುಖ್ಯ ಪ್ರವಚನಕಾರರಾಗಿ ಘನ ಮೋಹನ್ ಸಿ.ಲಾಝರಸ್ ಅವರು…
-

ಮಂಗಳೂರು: ಕೊಂಚಾಡಿ ದೇರೆಬೈಲ್ ವ್ಯಾಪ್ತಿಯಲ್ಲಿ ನೀರಿನ ಅಭಾವ..!! ಎಷ್ಟೇ ದೂರು ಕೊಟ್ಟರು ಕ್ಯಾರೇ ಎನ್ನದ ಮ.ನ.ಪಾ ಅಧಿಕಾರಿಗಳು
ಮಂಗಳೂರು : ಕೊಂಚಾಡಿ ದೇರೆಬೈಲ್ ಕರ್ಜಹಿತ್ತಲು ಎಂಬ ವಸತಿ ವ್ಯಾಪ್ತಿಯಲ್ಲಿ ಇಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೀರು, ತುಂಬಾ ಸಮಯದಿಂದ ಇಲ್ಲಿ ನೀರಿನ ಅಬಾವ, ಸ್ಥಳೀಯರು ಎಷ್ಟೇ ದೂರು ಕೊಟ್ಟರು ಸಂಬಂದ ಪಟ್ಟ ಅಧಿಕಾರಿಗಳು ಕ್ಯಾರೆ ಇಲ್ಲಾ, ಇಲ್ಲಿ ಜಾಸ್ತಿಯಾಗಿ ಸರಕಾರಿ ನೌಕರರೆ ಇರುವುದು, ಸ್ಥಳೀಯರು ನಮಗೆ ದೂರು ಕೊಟ್ಟರು, ನಾವು ಪಾಲಿಕೆಗೆ ಫೋನ್ ಮಾಡಿದಾಗ ಇವತ್ತು ಆಗುತ್ತೆ, ನಾಳೆ ಆಗುತ್ತೆ ಎಂದು ಹರಕೆಯ ಉತ್ತರ. ಬೋರ್ವೆಲ್ ಆಗುತ್ತೆ ಅಂತ ಎಷ್ಟೋ ತಿಂಗಳಿಂದ ಕೆಲಸ ನಡೆಯುತ್ತಾ ಇದೆ,ಇಷ್ಟರವರೆಗೆ…
-

ನಾಳೆ (ಮಾ.20) ಉಡುಪಿ-ದ.ಕ ಜಿಲ್ಲೆಯಲ್ಲಿ ಈದ್ ಉಲ್ ಫಿತ್ರ್ ಆಚರಣೆ
ಕರಾವಳಿ ಜಿಲ್ಲೆಗಳಲ್ಲಿ (ಗುರುವಾರ ರಾತ್ರಿ) ಚಂದ್ರನ ದರ್ಶನವಾಗಿರುವುದರಿಂದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶುಕ್ರವಾರ ಈದುಲ್ ಫಿತರ್ ಆಚರಿಸಲಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ. ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಖಚಿತ ಮಾಹಿತಿ ದೊರೆತ ಕಾರಣ ಶುಕ್ರವಾರ (20/03/2026) ಈದುಲ್ ಫಿತ್ರ್ ಆಗಿರುತ್ತದೆ ಎಂದು ಸಲಫಿ ಹಿಲಾಲ್ ಕಮಿಟಿ, ಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.. ಈದುಲ್ ಫಿತರ್ ಹಬ್ಬದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











