Category: ಬ್ರೇಕಿಂಗ್ ನ್ಯೂಸ್
-

ಬೆಳ್ತಂಗಡಿ: ನಕ್ಸಲ್ ಪ್ರಕರಣ ಆರೋಪಿ ಜಯಣ್ಣ ಕೋರ್ಟ್ಗೆ ಹಾಜರು
ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ ರಾಯಚೂರು ಅವರು ಫೆಬ್ರವರಿ 19ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಾಡಿ ವಾರಂಟ್ ಮೂಲಕ ಕೇರಳ ಪೊಲೀಸರು ಜಯಣ್ಣರನ್ನು ಕೋರ್ಟ್ಗೆ ಹಾಜರುಪಡಿಸಿದರು.ಜಯಣ್ಣ ಪರ ವಕೀಲ ಶಿವಕುಮಾರ್ ಹಾಗೂ ಸರ್ಕಾರದ ಪರ ವಕೀಲ ದಿವ್ಯರಾಜ್ ಹೆಗ್ಡೆ ನ್ಯಾಯಾಲಯಕ್ಕೆ ಹಾಜರಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.10ಕ್ಕೆ ವಿಚಾರಣೆ ಮುಂದೂಡಲಾಗಿದೆ
-

ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಆರೋಪಿ ಬಂಧನ
ವಿಟ್ಲ: ಬೇಕರಿಯೊಂದರಲ್ಲಿ ಕಾನೂನುಬಾಹಿರವಾಗಿ ಅದೃಷ್ಟದ ಮಟ್ಕಾ ಆಟ ನಡೆಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಫೆಬ್ರವರಿ 14ರಂದು ವಿಟ್ಲಪೇಟೆ ಪ್ರದೇಶದಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ವಿನಾಯಕ ಬೇಕರಿಯಲ್ಲಿ ಮಟ್ಕಾ ಆಟ ನಡೆಯುತ್ತಿದೆ ಎಂಬ ಮಾಹಿತಿ ಲಭಿಸಿತು. ಮಾಹಿತಿ ಆಧಾರವಾಗಿ ದಾಳಿ ನಡೆಸಿದ ಪೊಲೀಸರು ಅಂಗಡಿ ಮಾಲೀಕ ಕುದ್ದುಪದವು ನಿವಾಸಿ ರವೀಶ್ ಎಂಬಾತನನ್ನು ವಶಕ್ಕೆ ಪಡೆದರು. ‘ನಾನು ಅದೃಷ್ಟದ…
-

ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ
ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರೀಕ್ಷಕರು ಆದೇಶ ಮಾಡಿದ್ದು, ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ,…
-

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?
ಮಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿಕೆ ನೀಡಿದರು. SIT ಅಂತಿಮ ವರದಿಯನ್ನು ಕೋರ್ಟಿಗೂ ಸಲ್ಲಿಸಬೇಕಿದೆ ಅಂತಿಮ ವರದಿ ನೀಡುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದಿಲ್ಲ. ಅಂತಿಮ ವರದಿ ನೀಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಬುರುಡೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸದನದೊಳಗೆ ಮತ್ತು ಸದಾನಂದ ಹೊರಗೆ ಪ್ರತಿಕ್ರಿಯಿಸಿದ್ದೇನೆ. ಎಸ್ಐಟಿ ಅಂತಿಮ…
-

ಕಡಬ: ಲಂಚ ಸ್ವೀಕಾರ ವೇಳೆ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ..!!
ಕಡಬ ತಾಲೂಕಿನಲ್ಲಿ ಕಂದಾಯ ನಿರೀಕ್ಷಕನೊಬ್ಬ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಕಡಬ ತಾಲೂಕಿನ 10 ಸೆಂಟ್ಸ್ ಭೂಮಿಯ ಕನ್ವರ್ಷನ್ ಪತ್ರಕ್ಕೆ ಸಹಿ ಹಾಕಲು ಸಂಬಂಧಪಟ್ಟ ಕಂದಾಯ ನಿರೀಕ್ಷಕ ಪ್ರತಿ ಸೆಂಟ್ಸ್ಗೆ ₹100 ರಂತೆ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಒಟ್ಟು ₹1000 ಹಣವನ್ನು ಫೆಬ್ರವರಿ 4, 2026ರಂದು ತಮ್ಮ ಕಚೇರಿಯಲ್ಲೇ ಸ್ವೀಕರಿಸುವಾಗ ದೃಶ್ಯಗಳು ವೀಡಿಯೋದಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ.…
-

ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ತನಿಖಾಧಿಕಾರಿಗಳು ಈಗ ದರೋಡೆಯೇ ನಡೆದಿಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಖಾನಾಪುರದ ಚೋರ್ಲಾ ಘಾಟ್ ಬಳಿ ಈ ದರೋಡೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೂರಿನ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್ಐಟಿ ಹೇಳಿದೆ ಎಂದು ವರದಿಯಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ, ಸ್ಥಳದಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಹೇಳುವ ವರದಿಯನ್ನು ಎಸ್ಐಟಿ ಸಲ್ಲಿಸಿದೆ ಎಂದು…
-

ಮಂಗಳೂರು: ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಆದರೆ ತೀವ್ರ ತಪಾಸಣೆಯ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಎಂದಿನಂತೆ ಸೋಮವಾರ ಕೋರ್ಟ್ ಕಲಾಪಗಳು ಆರಂಭವಾಗಿತ್ತು. ಮಧ್ಯಾಹ್ನದ ವೇಳೆ ಇ-ಮೇಲ್ ಬಂದಿರುವುದು ತಿಳಿಯಿತು ಎನ್ನಲಾಗಿದೆ. ಆರ್ಡಿಎಕ್ಸ್, ಐಇಡಿ ಸ್ಫೋಟಕಗಳನ್ನು ಬಳಸಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನು ಸ್ಫೋಟಗೊಳಿಸುವುದಾಗಿ ಇ-ಮೇಲ್ನಲ್ಲಿ ವ ಬೆದರಿಕೆ ಹಾಕಲಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಾಗೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳವು…
-

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್
ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ 1ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಈ ಒಂದು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.ಅಪರಾಧಿಗಳಾದ ಶರಣಬಸವರಾಜ್ ಮಲ್ಲ ಹಾಗೂ ಚರಣ್ ಎನ್ನುವ ಮೂವರು ಆರೋಪಿಗಳಿಗೆ ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣ…
-

ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್..!!
ಉಡುಪಿ : ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.ಫೆಬ್ರವರಿ 14ರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಈತ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ…
-

ಹನಿಟ್ರ್ಯಾಪ್ ಸೇರಿದಂತೆ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್-1 ರಂತೆ ಕಳ್ಳತನ, ಸುಲಿಗೆ, ಹನಿಟ್ರ್ಯಾಪ್ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











