Category: ಬ್ರೇಕಿಂಗ್ ನ್ಯೂಸ್
-

ಮಂಜೇಶ್ವರ: ತಂದೆಯಿಂದಲೇ ಮಗಳ ಹತ್ಯೆ- ಆರೋಪಿಯ ಬಂಧನ
ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬನೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿಯೇ ಹತ್ಯೆ ಮಾಡಿರುವ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ನಡೆದಿದೆ. ಮರಿಯಮತ್ ಜುಮೈರಾ (18) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿದ ಆರೋಪಿ ತಂದೆ ಉಮರ್ ಪಾಷ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಅಡ್ಡ ಬಂದ ಯುವತಿಯ ದೊಡ್ಡಪ್ಪ ಶೇಕುಂಞ ಎಂಬುವವರಿಗೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಆರೋಪಿ ಉಮರ್…
-

ಉಡುಪಿ: ಬೀಚ್ ನಲ್ಲಿ ಕಳವು ಪ್ರಕರಣ- 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಉಡುಪಿಯ ಮಲ್ಪೆ ಬೀಚ್ ನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಾದ ಆಶಾ @ ಸುಮಿತ್ರ ಕೃಷ್ಣ ಹಾಗೂ ರೇಖಾ ದಾನಪ್ಪ ಬಂಧಿತರು.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಇವರನ್ನು ದಸ್ತಗಿರಿ ಮಾಡಲಾಗಿದೆ. ಬಂಧಿತರು ಮಲ್ಪೆ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಮಹಿಳಾ ಸಿಬ್ಬಂದಿ ಸಿಂಚನ…
-

ಮಂಗಳೂರು: ವಾಸುದೇವ ಶೆಟ್ಟಿ ಅವರಿಗೆ ಅತ್ಯುತ್ತಮ ಬಿಎಲ್ ಒ ಪ್ರಶಸ್ತಿ ಪ್ರದಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯು ದಿನಾಂಕ ಜ.25 ರಂದು ಪೂರ್ವಾಹ್ನ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಿತು. ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಬಿಎಲ್ ಒ ಪ್ರಶಸ್ತಿಯನ್ನು ನೀಡಲಾಯಿತು. 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಎಲ್ ಒ ವಾಸುದೇವ ಶೆಟ್ಟಿಯವರು ಈ ಸಂದರ್ಭ ಪ್ರಶಸ್ತಿಯನ್ನು…
-

ಕಾರ್ಕಳ: ಕೌಟುಂಬಿಕ ಕಲಹ- ಗಂಡನಿಂದ ಹಲ್ಲೆಗೊಳಗಾದ ಮಹಿಳೆ ಸಾವು
ಕಾರ್ಕಳ: ಕೌಟುಂಬಿಕ ಕಲಹದಿಂದಾಗಿ ಗಂಡನಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಎಂಬವರು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿ ಸುನೀಲ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 27ರಂದು ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ಗೀತಾ ಮತ್ತು ಅವರ ಪತಿ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಅವರು ಗೀತಾ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಗೀತಾ ಅವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು,…
-

ಬಂಟ್ವಾಳ: ನೀರು ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಕಳವು..!
ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಕಾವಳಪಡೂರು ಗ್ರಾಮದ ರಾಜಪಲ್ಕೆ ನಿವಾಸಿ ಡೋಗ್ರ ಮೂಲ್ಯ ಎಂಬವರ ಪತ್ನಿ ಉಪಾಲಕ್ಷ್ಮಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಸುಮಾರು 3 ಲಕ್ಷ ಮೌಲ್ಯದ ಎರಡುವರೆ ಪವನ್ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ನಡೆದಿದೆ. ಸಂಜೆ 4 ಗಂಟೆ ಅಂದಾಜಿಗೆ ಅಪರಿಚಿತ ವ್ಯಕ್ತಿಯೋರ್ವ ಉಪಾಲಕ್ಷ್ಮಿ ಎಂಬವರ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜಗುಲಿಯಲ್ಲಿ ಬಂದು ಕುಳಿತು ಕುಡಿಯುವ ನೀರು ಕೇಳಿದ್ದು, ಮನೆಯಲ್ಲಿ ಯಾರೂ ಇಲ್ಲದ…
-

ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ…!!
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ಭ್ರಷ್ಟ ಅಧಿಕಾರಿಗಳೇ ತುಂಬಿ ತುಳುಕುತ್ತಿವೆ, 5 – 6 ವರ್ಷಗಳಾದರೂ ಇಂತಹ ಅಧಿಕಾರಿಗಳಿಗೆ ವರ್ಗಾವಣೆ ಎಂಬ ಪಧವೇ ಇಲ್ಲ..ಜನ ಸಾಮಾನ್ಯರು ಒಂದು ಸಣ್ಣ ಕೆಲಸ ಅಥವಾ RTC ತಿದ್ದುಪಡಿಗಾಗಿ ನೂರಾರು ಸಲ ಕಛೇರಿಗೆ ಅಲೆದಾಡುವ ಪರಿಸ್ಥಿತಿ ಇಲ್ಲಿಯದ್ದು. ಇಲ್ಲಿನ ಕಂದಾಯ ಇಲಾಖೆಯ ಬೇರೆ ಬೇರೆ ಇಲಾಖಾ ಅಧಿಕಾರಿಗಳು ಲಂಚ ಆರೋಪಲ್ಲಿ ಹಲವಾರು ಬಾರಿ ಲೋಕಯುಕ್ತ ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಉದಾಹರಣೆಗಳಿವೆ. ಉಪತಹಸೀಲ್ದಾರ್ ( DT) ಮತ್ತು ಗ್ರಾಮ ಲೆಕ್ಕಾಧಿಕಾರಿ…
-

ವಿಟ್ಲ: ಮೂವರು ಮುಸುಕುದಾರಿಗಳಿಂದ ಆಟೋ ಚಾಲಕನಿಗೆ ಹಲ್ಲೆ- ದೂರು ದಾಖಲು
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ಆಟೋ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡೂರು ಗ್ರಾಮದ ನಿವಾಸಿ, ಆಟೋ ಚಾಲಕ ಇಸುಬು ಎಂಬವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಹಲ್ಲೆ ನಡೆಸಿದ್ದಾರೆ ಎಂದು ಇಸುಬು ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿ ವಿಟ್ಲ ಕಸಬಾ ಗ್ರಾಮದ ಕೆ ರವೀಶ್ ಕುಲಾಲ್(40), ಅಶೋಕ(42) ಎಂಬವರನ್ನು…
-

ಮಂಗಳೂರು: ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ ಕೊಲೆಯತ್ನ..!! ಆರೋಪಿಗೆ 4 ವರ್ಷ ಜೈಲು ಶಿಕ್ಷೆ
ಮಂಗಳೂರು: ನಗರದ, ಜೆಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ರವರು ಸಂಜಯ್ ಪೂಜಾರಿ ಎಂಬುವರನ್ನು Free Fire ಎಂಬ ಮೊಬೈಲ್ ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ, ಪ್ರತ್ಯುಶ್ ಸಾಲಿಯಾನ್ ಮೇಲೆ ಸಂಜಯ್ ಪೂಜಾರಿ ಗೆ ದ್ವೇಷವಿದ್ದು, ದಿನಾಂಕ 17-05-2023 ರಂದು ಪ್ರತ್ಯುಶ್ ಸಾಲಿಯಾನ್ ರವರು ಮಂಗಳೂರು ನಗರದ ಜೆಪ್ಪು ಬಪ್ಪಾಲ್ ನ ತನ್ನ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ ಹೋಗುತ್ತಿದ್ದಾಗ, ಸಂಜಯ್ ಪೂಜಾರಿ ಪ್ರತ್ಯುಶ್ ಸಾಲಿಯಾನ್ ರವರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ…
-

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರ ಸೂಚನೆ.
ಮಂಗಳೂರು : ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಆಗಿದ್ದು ಉದ್ಯಾನವನದ ಪ್ರಾಣಿಗಳ ದಯನೀಯ ಸ್ಥಿತಿ…
-

ಉಡುಪಿ: ಪ್ರವಾಸಿ ದೋಣಿ ದುರಂತ ಪ್ರಕರಣ- ದೋಣಿ ಮಾಲಕ ಸಹಿತ ಮೂವರ ಬಂಧನ
ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್(52) ಬಂಧಿತ ಆರೋಪಿಗಳು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜ.26ರಂದು ಆರೋಪಿ ಸುಹಾಸ್ ಮೈಸೂರಿನಿಂದ ಬಂದ 29 ಮಂದಿ ಪ್ರವಾಸಿಗರನ್ನು ಎರಡು ದೋಣಿಗಳಲ್ಲಿ ಸಮುದ್ರ ವಿಹಾರಕ್ಕೆ ಕಳುಹಿಸಿದ್ದನು. ಇದರಲ್ಲಿ ಒಂದು ದೋಣಿಯು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











