Category: ಬ್ರೇಕಿಂಗ್ ನ್ಯೂಸ್
-

ಅಕ್ರಮ ಕಟ್ಟಡದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಾರ್ & ರೆಸ್ಟೋರೆಂಟ್..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿ ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಎಂಬಾತನು ಕಟ್ಟಡ ಪರವಾನಿಗೆಯನ್ನು ಪಡೆಯದೇ ರಾಜರೋಷವಾಗಿ ಅಕ್ರಮ ಕಟ್ಟಡದ ನಿರ್ಮಾಣಕ್ಕೆ ಸುಮಾರು ಮೂವತ್ತು ಕಾರ್ಮಿಕರನ್ನು ಸೇರಿಸಿ ರಾತ್ರಿ ಹಗಲು ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಇದೀಗ ಕಾಮಗಾರಿಯು ಕೊನೆ ಹಂತದಲ್ಲಿದೆ. ಬಾರ್ ಗಳಿಗೆ ಒಂದೇ ಬಾಗಿಲು ಅಳವಡಿಸಲು ಕಾನೂನು, ಈ ಬಾರ್…
-

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್- ಇಬ್ಬರ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕೋಟೇಶ್ವರ ಗ್ರಾಮದ ಹಾಲಾಡಿ ರೋಡ್ ಕೆ.ನಾಗರಾಜ(62) ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ…
-

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಡೈರಿಯಲ್ಲಿ ಇಬ್ಬರು ಪ್ರಭಾವಿ ಶಾಸಕರ ಹೆಸರು ಉಲ್ಲೇಖ!
ಬೆಂಗಳೂರು : ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ಹೌದು ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ ಇತ್ತು. ಡೈರಿಯಲ್ಲಿ…
-

ಉಡುಪಿ: ಪ್ರೇಯಸಿ ಜೊತೆ ಮೊಬೈಲ್ನಲ್ಲಿ ಮಾತನಾಡುತ್ತ ನೇಣಿಗೆ ಶರಣಾದ ಯುವಕ- ಸಂಶಯಾಸ್ಪದ ಸಾವು – ಪ್ರಕರಣ ದಾಖಲು
ಉಡುಪಿ: ಪ್ರೇಯಸಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ದೂರಿನ್ವಯ’ ಮೃತರಾದ ರಂಜಿತ್ (28) ರವರು ಜ 29 ರಂದು ಪೆಂಟಿಂಗ್ ಕೆಲಸವನ್ನು ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿ ತಾನು ಪ್ರಿತೀಸುತ್ತಿದ್ದ ಹುಡುಗಿ ಜೊತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿರುತ್ತಾರೆ. ಮೃತರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ರೂಮಿನ ಕಿಟಕಿ ತೆರೆದಿದ್ದು, ಅದರ ಬಳಿ ಹೋಗಿ ನೋಡಿದಾಗ ರಂಜಿತ್ ನು ಫ್ಯಾನಿಗೆ ನೇಣು…
-

ಬಸ್ ಗಳಿಗೆ ಬಾಗಿಲು ಅಳವಡಿಕೆಗೆ ಜೂ. 1ರವರೆಗೆ ಕಾಲಾವಕಾಶ: ಎಸ್ಪಿ ಹರಿರಾಮ್
ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಸೇರಿದಂತೆ ಎಲ್ಲಾ ಬಸ್ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂ. 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಬಸ್ ಮಾಲಕರ ಸಂಘದೊಂದಿಗೆ ಇಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್ಸುಗಳಿಗೆ ಡೋರ್ಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿರುತ್ತದೆ, ಆದರೆ ಮಾರ್ಚ್ ವರೆಗೆ…
-

ಮಂಗಳೂರು: ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ..!!
ಮಂಗಳೂರು ಮಹಾನಗರ ಪಾಲಿಕೆಯು ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ಯಾಚರಣೆಗೆ ಇಳಿದಿದ್ದು, ರಸ್ತೆಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕಠಿಣ ದಂಡ ವಿಧಿಸಲು ಮುಂದಾಗಿದೆ. ಅನುಚಿತ ತ್ಯಾಜ್ಯ ವಿಲೇವಾರಿ ಒಂದು ಪ್ರಮುಖ ಸವಾಲಾಗಿ ಹೊರಹೊಮ್ಮಿದ್ದು, ನಗರದಲ್ಲಿ ಪ್ರಸ್ತುತ ಸುಮಾರು 85 ಕಸದ ಕಪ್ಪು ಚುಕ್ಕೆಗಳಿವೆ ಎಂದು ಗುರುತಿಸಲಾಗಿದೆ. ಸಮಸ್ಯೆಯನ್ನು ನಿಗ್ರಹಿಸಲು ಈ ಹಿಂದೆ ತೆಗೆದುಕೊಂಡ ಕ್ರಮಗಳ ಹೊರತಾಗಿಯೂ ಹಲವಾರು ವಾರ್ಡ್ಗಳು ಆಗಾಗ್ಗೆ ತ್ಯಾಜ್ಯವನ್ನು ಸುರಿಯುವುದನ್ನು ವರದಿ ಮಾಡುತ್ತಲೇ ಇವೆ. ಹೀಗಾಗಿ ನಿಯಮ ಉಲ್ಲಂಘಿಸುವವರ…
-

ಪೊಲೀಸರಿಗೆ ಖುಷಿ ಸುದ್ದಿ. ಬರ್ತಡೇ, ಅನಿವರ್ಸರಿಗೆ ಸಾಂದರ್ಭಿಕ ರಜೆ
ಬೆಂಗಳೂರು : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ ಸಮಾಜದಲ್ಲಿ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ. ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ. ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ…
-

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್..!!
ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್. ಲೋಕಾಯುಕ್ತ ಎಸ್.ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್…
-

ಪಡುಬಿದ್ರೆ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು- ಪ್ರಕರಣ ದಾಖಲು
ಪಡುಬಿದ್ರೆ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ನಡೆದಿದೆ. ಮುಹಮ್ಮದ್ ಅಫ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ(ಜ.29) ಮುಂಜಾನೆ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3 ಪವನ್ ತೂಕದ…
-

ಅಸಭ್ಯ ವೀಡಿಯೋ ವೈರಲ್ : ಕಾಲೇಜು ವಿದ್ಯಾರ್ಥಿಯ ಬಂಧನ
ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











