Category: ಕ್ರೈಂ ಸುದ್ದಿ
Your blog category
-

ಪುತ್ತೂರು: ದರೋಡೆ ಪ್ರಕರಣ- 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ
ಪುತ್ತೂರು: 2017ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2017ರ ಡಿಸೆಂಬರ್ 22ರಂದು ಮೂವರು ಅಪರಿಚಿತರು ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ ಸುಮಾರು ₹2,88,000 ಅಂದಾಜು ಮೌಲ್ಯದ ಚಿನ್ನಾಭರಣ ಹಾಗೂ ₹60,0000 ನಗದು ದರೋಡೆ ಮಾಡಿದ್ದರು. ಈ ಸಂಬಂಧ ಪುತ್ತೂರು ನಗರ ಪೊಲೀಸ್…
-

ಮಂಗಳೂರು: ಬಿಜಿ ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್..!! 6.42 ಲಕ್ಷ ರೂ. ಕಳೆದು ಕೊಂಡ ಯುವತಿ
ಮಂಗಳೂರು: ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದ ಯುವತಿಯು ಬಳಿಕ 6.42 ಲಕ್ಷ ರೂ. ಕಳೆದು ಕೊಂಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಯುವತಿ:– ತಾನು ಮಂಗಳೂರಿನಲ್ಲಿ ಸಾಫ್ಟ್ವೇರ್ ಕಂಪೆನಿಯಲ್ಲಿ ಡೆವಲಪರ್ ಆಗಿ ಕೆಲಸ ಮಾಡಿಕೊಂಡಿರುವೆ. ಇತ್ತೀಚೆಗೆ ಪರಿಚಯದ ವ್ಯಕ್ತಿಯೊಬ್ಬರು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ಬಿಜಿ ಟ್ರೇಡಿಂಗ್ ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ದುಪ್ಪಟ್ಟು ಆಗುವುದಾಗಿ ತಿಳಿಸಿದ್ದರು. ಅದರಂತೆ ತಾನು ಆ್ಯಪ್ ಡೌನ್ಲೋಡ್ ಮಾಡಿ ಅಕೌಂಟ್ ಕ್ರಿಯೇಟ್ ಮಾಡಿದ್ದೆ. ಹಾಗೇ ಫೆ.28ರಿಂದ…
-

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!
ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.
-

ನಡೆದುಕೊಂಡು ಹೋಗಲು ದಾರಿಯು ಇಲ್ಲದೇ ಭೂ ಅಕ್ರಮ, ಎಷ್ಟೇ ದೂರು ನೀಡಿದರು ಕ್ಯಾರೇ ಅನ್ನದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು
ಉಳ್ಳಾಲ:ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪುವಿನಲ್ಲಿರುವ ಒಂದು ಕಟ್ಟಡದ ಹಿಂಭಾಗದಲ್ಲಿ ಜೆಸ್ಸಿ ಮತ್ತು ಫಿಲೋಮಿನಾ ಎನ್ನುವವರಿಗೆ ಸೇರಿದ ಜಾಗವಿದ್ದು, ಅಲ್ಲಿನ ಅಗಲವಿರುವ ರಸ್ತೆಯ ಪಕ್ಕದಲ್ಲಿ ಅಕ್ಕಪಕ್ಕದ ಬಿಲ್ಡಿಂಗ್ ಮಾಲಕರು ಪರವಾನಿಗೆ ಪಡೆದು ಕಟ್ಟಡ ನಿರ್ಮಿಸಿದ್ದಾರೆ. ಆದರೆ ಕಟ್ಟಡ ನಿರ್ಮಾಣವಾದ ರೀತಿಯಿಂದಾಗಿ ಸಂಬಂಧಿತ ಜಾಗದ ಮಾಲೀಕರಿಗೆ ನಡೆದು ಹೋಗಲು ಕೂಡ ದಾರಿ ಇಲ್ಲದಂತಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಅವರ ಹಳೆಯ ಮನೆಯ ಎದುರು ಯಾವುದೇ ಪರವಾನಿಗೆ ಇಲ್ಲದೆ ಅತಿ ಎತ್ತರದ ಕಾಂಪೌಂಡ್ ನಿರ್ಮಿಸಲಾಗಿದೆ ಎನ್ನಲಾಗಿದ್ದು, ಒಂದು ವೇಳೆ ಮಳೆಯ…
-

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ : ಇಬ್ಬರು ಮಹಿಳೆಯರು ಅರೆಸ್ಟ್!
ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಜು.3ರಂದು ಬೆಂಗಳೂರು ಗಿರಿನಗರ ಠಾಣಾ ವ್ಯಾಪ್ತಿಯ ಎಚ್.ಕೆ.ಹಳ್ಳಿಯ 2ನೇ ಮುಖ್ಯರಸ್ತೆಯ ಹಾಗೂ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ವಿ.ಜಿ ನಗರದ ಬಂಡೆ ಗಣಪತಿ ದೇವಸ್ಥಾನದ ಹತ್ತಿರದ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ…
-

ರೆಸಾರ್ಟ್ನಲ್ಲಿ ಜೂಜಾಟ ನಿರತ 26 ಮಂದಿ ಬಂಧನ: 17.81 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ
ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್ಗಳು,…
-

ಮಂಗಳಮುಖಿಯ ವೇಷದಲ್ಲಿ ವೇಶ್ಯಾವಾಟಿಕೆ: ನಟೋರಿಯಸ್ ದಲ್ಲಾಳಿ ಚೇತನ್ ಬಂಧನ
ಬೆಂಗಳೂರು: ಹೊರರಾಜ್ಯಗಳ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ಅನೈತಿಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹಾಗೂ ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದಲ್ಲಾಳಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಚೇತನ್ ವಿರುದ್ಧ ಪೀಣ್ಯ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿವೆ. ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತ, ಪೊಲೀಸರ ಕಣ್ತಪ್ಪಿಸಲು ಮಂಗಳಮುಖಿಯ ವೇಷ ಧರಿಸಿ…
-

ಉಡುಪಿ: ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ..!! ದಂಪತಿ ಬಂಧನ
ಉಡುಪಿ: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಮಾರು ₹23 ಲಕ್ಷ ವಂಚನೆ ಎಸಗಿದ ಆರೋಪದಡಿ ಮುಖ್ಯ ಪುಸ್ತಕ ಬರಹಗಾರ್ತಿ ಹಾಗೂ ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಇವರು ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ (ರಿ.)ದಲ್ಲಿ ನಡೆದಿರುವ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು ಒಕ್ಕೂಟದ ಮುಖ್ಯ…
-

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್…
-

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ- 14 ಆರೋಪಿಗಳ ಫೋಟೊ ಬಿಡುಗಡೆ..!! ಮಾಹಿತಿ ನೀಡುವವರಿಗೆ ಬಹುಮಾನ
ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











