Category: ಕ್ರೈಂ ಸುದ್ದಿ
Your blog category
-

ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಮತ್ತು ಸ್ವೀಕರಿಸುವುದಕ್ಕೆ ಸಾಕ್ಷ್ಯ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖ ತೀರ್ಪೊಂದನ್ನು ನೀಡಿದೆ. ಸರ್ಕಾರಿ ಅಧಿಕಾರಿಗಳ ಬಳಿ ಕೇವಲ ಲಂಚದ ಹಣ ಪತ್ತೆಯಾದ ತಕ್ಷಣವೇ ಅವರು ಅಪರಾಧಿ ಎಂದು ಸಾಬೀತಾಗುವುದಿಲ್ಲ. ಆರೋಪಿಯು ಲಂಚಕ್ಕಾಗಿ ನಿರ್ದಿಷ್ಟವಾಗಿ ಬೇಡಿಕೆ ಇಟ್ಟಿದ್ದ ಹಾಗೂ ಅದನ್ನು ಸ್ವೀಕರಿಸಿದ್ದ ಎನ್ನುವುದಕ್ಕೆ ತನಿಖಾ ಸಂಸ್ಥೆಗಳು ಕಡ್ಡಾಯವಾಗಿ ಬಲವಾದ ಸಾಕ್ಷ್ಯಗಳನ್ನು ಒದಗಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಚಂದ್ರ ಎಂಬುವವರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ…
-

ಮಂಗಳೂರು: ಬೀದಿಬದಿ ವ್ಯಾಪಾರಿಗಳ ವಿರುದ್ಧ ಮನಪಾ ಕಾರ್ಯಾಚರಣೆ, ವ್ಯಾಪಾರಿಗಳ ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲಿ ಉಪಸ್ಥಿತರಿದ್ದು, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿದ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕಾರ್ಯಾಚರಣೆಗೆ ಮೊದಲು ಮನಪಾ ಆಯುಕ್ತ ರವಿಚಂದ್ರ ನಾಯಕ್ ಬೀದಿ ವ್ಯಾಪಾರಿಗಳ ಬಳಿ ತೆರಳಿ ಇಲ್ಲಿ ಕಾನೂನು ಪ್ರಕಾರ, ನಿಯಮ…
-

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್–ಜೆಡಿಎಸ್ ಕಾರ್ಯಕರ್ತರ ಗಲಾಟೆ; ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಸೆರೆ
ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ…
-

ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚಲು ಯತ್ನಿಸಿದ ಸಂಚು ಭೇದಿಸಿದ ಪೊಲೀಸರು
ಮುಂಬೈ: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಜನರಿಗೆ ವಿಷದ ಮಾತ್ರೆಗಳನ್ನು ಹಂಚಿಕೆ ಮಾಡುವ ಮೂಲಕ ಅನಾಹುತ ಸೃಷ್ಟಿಸಲು ಯತ್ನಿಸಿದ ದೊಡ್ಡ ಸಂಚೊಂದನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಪೊಲೀಸರ ಗಸ್ತು ವೇಳೆ ಈ ಖತರ್ನಾಕ್ ಸಂಚು ಬಯಲಾಗಿದೆ. ಮುಂಬೈನ ಡೊಂಗ್ರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪುಣೆಯ ಫಯಾಜ್ ಪ್ರೇಮ್ಜಿ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ನೋವು ನಿವಾರಕ ಮಾತ್ರೆಗಳು ಎಂದು ಹೇಳಿ, ವಾಸ್ತವದಲ್ಲಿ ಇಲಿ ಪಾಷಾಣ ಬೆರೆಸಿದ ಮಾತ್ರೆಗಳನ್ನು ಹಂಚುತ್ತಿದ್ದರು ಎಂದು ತಿಳಿದುಬಂದಿದೆ. ಆತನ ಬಳಿಯಿದ್ದ 14,900 ವಿಷ ಮಾತ್ರೆಗಳನ್ನು ಪೊಲೀಸರು…
-

ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ ಉಪ್ಪಿನಂಗಡಿ ಪೊಲೀಸರ ಬಲೆ
ಮಂಗಳೂರು: 2005 ರ ಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನ ತಿರುನಲ್ವೇಲಿ ನಿವಾಸಿ ಮಾದ ಸ್ವಾಮಿ ಎಂದು ಗುರುತಿಸಲಾಗಿದೆ.ಅವರು ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 09/2005 ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಸೆಕ್ಷನ್ 34 ರ ಅಡಿಯಲ್ಲಿ ದಾಖಲಾಗಿದ್ದ ಆರೋಪಿಯಾಗಿದ್ದರು.ಪೊಲೀಸರ ಪ್ರಕಾರ, ಆರೋಪಿಯು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು…
-

ಮಂಗಳೂರಿನಲ್ಲಿ ಹೊರ ರಾಜ್ಯದವರ ವಾಸದ ಹಿನ್ನೆಲೆ ಪರಿಶೀಲನೆಗೆ ಆಗ್ರಹ: ಅಪರಾಧ ನಿಯಂತ್ರಣಕ್ಕೆ ಕ್ರಮ ಅಗತ್ಯ
ಮಂಗಳೂರು: ನಗರದ ಬಂದರು, ಅಳಕೆ, ಸ್ಟೇಟ್ ಬ್ಯಾಂಕ್, ಪಾಂಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ನಗರದಲ್ಲಿ ನಡೆಯುವ ಹಲವು ಪ್ರಕರಣಗಳಲ್ಲಿ ಬಾಡಿಗೆದಾರರ ಹಿನ್ನೆಲೆ ಕುರಿತು ಪರಿಶೀಲನೆ ಅಗತ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಸ್ಟೇಟ್ ಬ್ಯಾಂಕ್ ಭಾಗದಲ್ಲಿ ಅಸ್ಸಾಂ, ಬಿಹಾರ ಸೇರಿದಂತೆ ವಿವಿಧ ಹೊರ ರಾಜ್ಯಗಳ ಕೆಲವರು ರಾತ್ರಿ ವೇಳೆ ಮದ್ಯ ಸೇವಿಸಿ ರಸ್ತೆ ಬದಿ ಗಲಾಟೆ ನಡೆಸುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ.…
-

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: 54 ವರ್ಷದ ವ್ಯಕ್ತಿಯ ಬಂಧನ
ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54 )ಬಂಧಿತ ಆರೋಪಿ. ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಈ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ 300 ರೂಪಾಯಿ…
-

ಮಂಗಳೂರು: ಪೊಲೀಸರ ಕೈಯಿಂದ ಕೈಕೋಳದೊಂದಿಗೆ ತಪ್ಪಿಸಿ ಪರಾರಿಯಾದ ಖತರ್ನಾಕ್ ಸರಗಳ್ಳ..!!
ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣು ಎರಚಿ, ಕೈಕೋಳ (ಹ್ಯಾಂಡ್ಕಫ್) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆ ಮಂಗಳೂರಿನ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ಬಳಿ ಇತ್ತೀಚೆಗೆ ನಡೆದ ಸರಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ಪಾಂಡೇಶ್ವರ ಠಾಣಾ ಪೊಲೀಸರಿಗೆ ಅಂತರರಾಜ್ಯ ಕಳ್ಳರ ಗ್ಯಾಂಗ್ ಕುರಿತು ಸುಳಿವು…
-

ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ: 19 ವರ್ಷದ ಯುವಕನ ಬಂಧನ
ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನೊಬ್ಬನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ, ಮೂಲತಃ ಶಿರೂರಿನ ಮುಸ್ಲಿಂ ಮೊಹಲ್ಲಾದ ಜೆ.ಎಂ. ಕ್ರಾಸ್ ರೋಡ್ ನಿವಾಸಿ ಸೈಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.ಉಡುಪಿ ಉಪ ವಿಭಾಗದ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಕೆ.ಯು. ಮತ್ತು ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದ ಪೊಲೀಸ್…
-

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ
ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು( 26 ) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ ಬಂಧಿತ ಆರೋಪಿಯಿಂದ ಸುಮಾರು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











