Category: ಕ್ರೈಂ ಸುದ್ದಿ
Your blog category
-

ಕರ್ನಾಟಕ ಅರಣ್ಯ ಕಾಯ್ದೆ ಪ್ರಕರಣದ ಆರೋಪಿ 36 ವರ್ಷಗಳ ಬಳಿಕ ಸೆರೆ
ಉಡುಪಿ: ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಡುಪಿ ಪೊಲೀಸರು ಹಾವೇರಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ನಿವಾಸಿ ನೂರುಲ್ಲಾ (66) ಎಂದು ಗುರುತಿಸಲಾಗಿದೆ.1990ರ ಜೂನ್ 21ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮರುದಿನವೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ನೂರುಲ್ಲಾ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.ಆದರೆ, ನಂತರ ನಡೆದ ವಿಚಾರಣೆಗಳಿಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ನ್ಯಾಯಾಲಯಕ್ಕೆ…
-

ಪುತ್ತೂರು: ಸ್ನೇಹದ ನೆಪದಲ್ಲಿ ಮಾಲೀಕನ ಬೈಕ್ ಕದ್ದು ಪರಾರಿಯಾದ ವ್ಯಕ್ತಿ ಪೊಲೀಸರ ವಶಕ್ಕೆ
ಪುತ್ತೂರು: ಸ್ನೇಹದ ನೆಪದಲ್ಲಿ ಮಾಲೀಕನ ವಿಶ್ವಾಸ ಗಳಿಸಿ, ದೇವಸ್ಥಾನಕ್ಕೆ ಹೋಗಿ ಬರುವೆನೆಂದು ತಿಳಿಸಿ ವ್ಯಕ್ತಿಯೋರ್ವ ಬೈಕ್ ನೊಂದಿಗೆ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಆರೋಪಿ ಕರ್ನಾಟಕ ಮತ್ತು ಕೇರಳದ ಗಡಿ ಪ್ರದೇಶವಾದ ಗಾಳಿಮುಖದಲ್ಲಿ ತಲೆಮರೆಸಿಕೊಂಡಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ಬೈಕ್ ವಶಪಡಿಸಿಕೊಂಡಿದ್ದಾರೆ.ವರದಿಗಳ ಪ್ರಕಾರ, ಶ್ಯಾಮ್ ಜಿ ಕೃಷ್ಣನ್ (31) ಎಂದು ಗುರುತಿಸಲಾದ ಆರೋಪಿ, ಶೀನಪ್ಪ ಮುಗೇರ ಅವರ ಒಡೆತನದ ರಾಜಧಾನಿ ಟವರ್ಸ್ನಲ್ಲಿರುವ ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್…
-

ಮಂಗಳೂರು: OLX ಸೈಬರ್ ಹಗರಣ ₹5.58 ಲಕ್ಷ ವಂಚನೆ ಬಳಿಕ ಜೀವ ಬೆದರಿಕೆ
ಮಂಗಳೂರು : ಒಎಲ್ಎಕ್ಸ್ (OLX) ಆನ್ಲೈನ್ ಮಾರುಕಟ್ಟೆಯಲ್ಲಿ ಐಷಾರಾಮಿ ‘ಕಾಂಟಿನೆಂಟಲ್ ಜಿಟಿ 650’ ಮೋಟಾರು ಸೈಕಲ್ ಮಾರಾಟಕ್ಕಿದೆ ಎಂದು ನಕಲಿ ಜಾಹೀರಾತು ನೀಡಿ, ತಂದೆ-ಮಗನಿಗೆ ಬರೋಬ್ಬರಿ ₹5,58,710 ಹಣ ವಂಚಿಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚಕನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ದೂರುದಾರರು ತಮ್ಮ ಮಗ ಬೈಕ್ ಕೊಡಿಸುವಂತೆ ಕೇಳಿದ ಕಾರಣಕ್ಕಾಗಿ OLX ನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ರಾಯಲ್ ಎನ್ಫೀಲ್ಡ್…
-

ಸೈಬರ್ ವಂಚಕರ ಹೊಸ ತಂತ್ರ: ಹೂಡಿಕೆ ಹೆಸರಿನಲ್ಲಿ ಹಿರಿಯಡ್ಕ ಮಹಿಳೆಗೆ ಲಕ್ಷಾಂತರ ನಷ್ಟ
ಹಿರಿಯಡ್ಕ : ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್ಸೈಟ್ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು.ವಂಚಕರ ಮಾತನ್ನು…
-

ನಂದಿನಿ ಹಾಲು ಕುರಿತು ಸುಳ್ಳು ಆರೋಪ: ವೈದ್ಯೆಗೆ ಹೈಕೋರ್ಟ್ ತರಾಟೆ
ಬೆಂಗಳೂರು: ಕೆಎಂಎಫ್ನ (KMF) ಹೆಮ್ಮೆಯ ಬ್ರ್ಯಾಂಡ್ ನಂದಿನಿ ಸ್ಟ್ರಾಬೆರಿ ಫ್ಲೇವರ್ ಹಾಲು ಕೃತಕ ಮತ್ತು ನಕಲಿ ಎಂದು ಇನ್ಸ್ಟಾಗ್ರಾಮ್ ರೀಲ್ಸ್ (Instagram Reels) ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ತನಿಖೆಗೆ ತಡೆ ನೀಡಬೇಕೆಂದು ಕೋರಿ ವೈದ್ಯೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.ಇನ್ಸ್ಟಾಗ್ರಾಮ್ ಇರೋದು ಸಾರ್ವಜನಿಕರಲ್ಲಿ ಆತಂಕ…
-

ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ..!!
ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(77) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ…
-

ಸಾಮಾಜಿಕ ಜಾಲತಾಣದ ಮೂಲಕ ವಂಚನೆ: ಲಕ್ಷಾಂತರ ರೂ. ದೋಚಿದ ನಟಿಯ ಬಂಧನ
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಬಳಿಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಅವರನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಶ್ರೀಮಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯವಾದ ಸ್ನೇಹಿತರ…
-

ಲೋಕಾಯುಕ್ತ ಟ್ರ್ಯಾಪ್: ಪ್ರಾಮಾಣಿಕ ಅಧಿಕಾರಿಗಳಿಗೂ ಕಂಟಕವಾಗುತ್ತಿದೆಯೇ ಲೋಕಾಯುಕ್ತ ಟ್ರ್ಯಾಪ್ ವ್ಯವಸ್ಥೆ?
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೊಗೆಯಲು ಲೋಕಾಯುಕ್ತ ಪೊಲೀಸರು ನಡೆಸುವ ‘ಫಿನಾಫ್ತಲಿನ್ ಟ್ರ್ಯಾಪ್’ ಕಾನೂನು ಬದ್ಧವಾಗಿ ಅತ್ಯಂತ ಶಕ್ತಿಶಾಲಿ ಅಸ್ತ್ರ ಎಂಬುದು ನಿಜ. ಆದರೆ, ಈ ನಾಣ್ಯದ ಇನ್ನೊಂದು ಮುಖ ಇತ್ತೀಚಿನ ದಿನಗಳಲ್ಲಿ ಅತ್ಯಂತ ಭೀಕರ ಹಾಗೂ ಆತಂಕ ಕಾರಿಯಾಗಿದೆ! ವೈಯಕ್ತಿಕ ದ್ವೇಷ, ರಾಜಕೀಯ ಪ್ರೇರಿತ ಪಿತೂರಿ ಅಥವಾ ಬ್ಲಾಕ್ ಮೇಲ್ ತಂತ್ರಗಳಿಗೆ ಬಲಿ ಯಾಗುತ್ತಿರುವ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳ ಸ್ಥಿತಿ ಕರಗುವ ಮೇಣದಂತಾಗಿದೆ. ಅಧಿಕಾರಿ ಲಂಚ ನಿರಾಕರಿಸಿದರೂ ಆತನ ಜೇಬಿಗೆ ಬಲವಂತವಾಗಿ ಹಣ…
-

ಅಕ್ರಮ ದತ್ತು ಪ್ರಕರಣ ಬಯಲು: ನವಜಾತ ಶಿಶು ಹಸ್ತಾಂತರದಲ್ಲಿ ನಾಲ್ವರು ಅರೆಸ್ಟ್
ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ…
-

ನೋಟಿಸ್ ಇಲ್ಲದೆ ಸ್ಟಾಲ್ ತೆರವು ಮಾಡಿದ ನಗರಪಾಲಿಕೆ: ವಿಕಲಚೇತನ ವ್ಯಾಪಾರಿಗಳ ಕಣ್ಣೀರು
ಮಂಗಳೂರು: ಪಡೀಲ್ ನ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 12 ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ ವಿಕಲಚೇತನ ಬೀದಿಬದಿ ವ್ಯಾಪಾರಿಗಳ ಸ್ಟಾಲ್ ಗಳನ್ನು ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವುದು ವಿವಾದಕ್ಕೆ ಕಾರಣವಾಗಿದೆ.75% ಅಂಗವೈಕಲ್ಯ ಹೊಂದಿರುವ ಚಂದ್ರಹಾಸ್ ಹಾಗೂ ವಿಧವೆ ಸುನೀತಾ, ಯಾವುದೇ ನೋಟಿಸ್ ಅಥವಾ ಪರ್ಯಾಯ ವ್ಯವಸ್ಥೆ ನೀಡದೆ ತಮ್ಮ ತಳ್ಳುಗಾಡಿ ಮತ್ತು ವ್ಯಾಪಾರ ಸಾಮಗ್ರಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ವ್ಯಾಪಾರಿಗಳ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











