Category: ಕ್ರೈಂ ಸುದ್ದಿ
Your blog category
-

ಸಂಜೆಯಿಂದ ಮನೆಗೆ ಮರಳದ ಇಬ್ಬರು ಬಾಲಕರು ; ಸುಳಿವು ನೀಡುವಂತೆ ಮನವಿ
ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ.ಕುಂಜತ್ತೂರು ಸ್ವಾಗತ್ ಹೊಟೇಲ್ ಸಮೀಪದ ಯಾಸಿನ್ ( 13) ಮತ್ತು ಸುಲ್ತಾನ್ (14) ನಾಪತ್ತೆಯಾದವರು. ಶನಿವಾರ ಸಂಜೆ ಐದು ಗಂಟೆ ಬಳಿಕ ನಾಪತ್ತೆಯಾಗಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಾಲಕರ ಬಗ್ಗೆ ಗುರುತು, ಸುಳಿವು ಲಭಿಸಿದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
-

ಕುತ್ತಿಗೆ ಕೊಯ್ದು ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಜೋಕಟ್ಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್ಇಝಡ್ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ…
-

ಬಜಪೆ: ನೆರೆಮನೆಯವನಿಂದ ಅಪ್ರಾಪ್ತ ಬಾಲಕಿಗೆ ನಿರಂತರ ಅತ್ಯಾಚಾರ, ಬೆದರಿಕೆ!! ಪೋಕ್ಸೋ ಪ್ರಕರಣ ದಾಖಲು
ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ…
-

ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ
ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಗಾಗಿ…
-

ಪುತ್ತೂರು: ಕೃಷ್ಣ ಜೆ.ರಾವ್ ಯುವತಿಗೆ ವಂಚನೆ ಪ್ರಕರಣ- ರಾಜಿ ಸಂಧಾನಕ್ಕೆ ವಕೀಲೆ ಎಸ್. ಸುಶೀಲಾ ಮಧ್ಯಸ್ಥಿಕೆದಾರರಾಗಿ ನೇಮಕ
ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ವಂಚಿಸಿರುವ ಆರೋಪದಲ್ಲಿ ಕೃಷ್ಣಜೆ.ರಾವ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ಇದೀಗ ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿದೆ.ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದಾಗ ಅರ್ಜಿದಾರರ ಪರ…
-

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಬ್ಯೂಟಿ ಕಂಟೆಸ್ಟೆಂಟ್ ಅರೆಸ್ಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಾಡೆಲ್ ಹರ್ಷ ಸನ್ನಿ(28), ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ಏರ್ ಇಂಟೆಲಿಜೆನ್ಸ್ ಯೂನಿಟ್ ಪ್ರಕಾರ, ಮಾಡೆಲ್ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್ನಿಂದ ಏರ್ ಇಂಡಿಯಾ ವಿಮಾನ TG-351 ಮೂಲಕ ಮುಂಬೈನ ಶಿವಾಜಿ ಏರ್ಪೋರ್ಟ್ಗೆ ಬಂದಿಳಿದಿದ್ದರು. ಅನುಮಾನದ ಮೇಲೆ ಆಕೆಯನ್ನು…
-

ಬಂಟ್ವಾಳದಲ್ಲಿ ಸಬ್ಸಿಡಿಯ ಯೂರಿಯಾ ದಂಧೆ ಪತ್ತೆ: ಲಕ್ಷಾಂತರ ಮೌಲ್ಯದ ಗೊಬ್ಬರ, ಟ್ರಕ್ ವಶ; ಓರ್ವ ಬಂಧನ
ಬಂಟ್ವಾಳ: ರೈತರಿಗೆ ನೀಡಲಾಗಿದ್ದ ಸಬ್ಸಿಡಿ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ರಾಜ್ಯ ಮಟ್ಟದ ಸಂಘಟಿತ ಜಾಲವನ್ನು ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆಯಲ್ಲಿ ಬಯಲಿಗೆಳೆದಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಮತ್ತು ಸಾಗಣೆಗೆ ಬಳಸಲಾಗುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಖಂಡಿಗ ಸರ್ಕಾರಿ ಶಾಲೆಯ ಬಳಿಯ ನಿವಾಸಿ ಮೊಹಮ್ಮದ್ ಅಶ್ರಫ್ (40) ಎಂದು…
-

ಮೂಡದಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮಿನಿ ವಿಧಾನಸೌದದಲ್ಲಿ ಯಾವಾಗ..??
ಮಂಗಳೂರು :ಮಂಗಳೂರು ಮೂಡದಲ್ಲಿ ಯಾವುದೇ ಬ್ರೋಕರ್ಗಳು ಬೆಳಗ್ಗೆ ಪ್ರವೇಶಿಸಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ಸ್ವತಃ ಬರಬೇಕು ಎಂಬ ನಿಯಮವನ್ನು ಪಾಲಿಸಲಾಗುತ್ತಿದ್ದು, ಮಧ್ಯಾಹ್ನದ ನಂತರ ಮಾತ್ರ ಅಪ್ಲಿಕೇಶನ್ಗಳನ್ನು ನೀಡುವ ವ್ಯವಸ್ಥೆ ಇದೆ. ಮೂಡ ಕಮಿಷನರ್ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಲಂಚ ಪಡೆಯುವ ವ್ಯವಸ್ಥೆಗೆ ಕಡಿವಾಣ ಬಿದ್ದಿದೆ.ಆದರೆ ಮಂಗಳೂರು ಮಹಾನಗರ ಪಾಲಿಕೆ ಹಾಗು ಕಂದಾಯ ಇಲಾಖೆ ಕಚೇರಿಗಳಲ್ಲಿ ಬ್ರೋಕರ್ಗಳ ಗುಂಪುಗಳು ಕಾಣಸಿಗುತ್ತಿವೆ ಎಂಬ ಆರೋಪಗಳಿವೆ. ಹಿಂದೆ ಲೋಕಾಯುಕ್ತ ದಾಳಿಯ ಭಯವಾದರೂ ಇತ್ತು. ಈಗ ಲೋಕಾಯುಕ್ತ ರೈಡ್ಗಳು ನಡೆಯದಿರುವುದರಿಂದ ಲಂಚ ಪಡೆಯುವವರಿಗೆ…
-

ಧರ್ಮಸ್ಥಳ ವಿವಾದದಲ್ಲಿ ಹೊಸ ಹೆಸರು: ಚಿನ್ನಯ್ಯ ಆರೋಪಕ್ಕೆ ಪ್ರಕಾಶ್ ರಾಜ್ ಹೇಳಿದ್ದೇನು?
ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ.ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ಕಿಡಿಕಾರಿದ್ದಾರೆ.‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ,…
-

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ
ಧರ್ಮಸ್ಥಳ ಗ್ರಾಮದ ಬಹುಚರ್ಚಿತ “ಬುರುಡೆ ಕೇಸ್” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ ಚಿನ್ನಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ವಿಶೇಷವೆಂದರೆ, ಈ ಅರ್ಜಿಯಲ್ಲಿ ಆತ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಇದು ಕರಾವಳಿ ಹಾಗೂ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ತನ್ನನ್ನು ದಾಳವಾಗಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











