Category: ಕ್ರೈಂ ಸುದ್ದಿ
Your blog category
-

ಕರಾವಳಿಯನ್ನೇ ಬೆಚ್ಚಿಬೀಳಿಸಿದ ಭೀಕರ ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ – ಇಬ್ಬರು ಕಾಮುಕರ ಬಂಧನ
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತೆಕ್ಕಟ್ಟೆಯ ಜಿತೇಂದ್ರ ಶೆಟ್ಟಿ (ಆರೋಪಿ-1) ಹಾಗೂ ಸುಶಾನ್ ಪೂಜಾರಿ (ಆರೋಪಿ-2) ಎಂಬ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಬಂದಿಸಲಾಗಿದೆ. ಘಟನೆ ವಿವರ: ಸ್ನಾಪ್ಚಾಟ್ನಲ್ಲಿ ಶುರುವಾದ…
-

ವ್ಯಕ್ತಿಯ ಮೇಲೆ ಫೈರಿಂಗ್- ಮತ್ತೆ ರೌಡಿಗಳ ಅಟ್ಟಹಾಸ!!
ಧಾರವಾಡ: ವಿವಾದವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಹುಬ್ಬಳ್ಳಿಯ ವ್ಯಕ್ತಿಯೋರ್ವ ಗುಂಡು ಹಾರಿಸಿರುವ ಪ್ರಕರಣ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳು ಮತ್ತು ಗುಂಡು ಹೊಡೆದವ ಬಗ್ಗೆ ಮಾಹಿತಿಯನ್ನ ಪೊಲೀಸರು ನಿಖರವಾಗಿ ಕೆಲವೇ ನಿಮಿಷಗಳಲ್ಲಿ ಹೇಳಲಿದ್ದು, ಗುಂಡು ತಗುಲಿರುವ ವ್ಯಕ್ತಿಯನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
-

ಮೂರು ಗಂಟೆ ವಿದ್ಯುತ್ ಶಾಕ್ ನೀಡಿ ಪತಿಯ ಕೊಲೆ – ಪತ್ನಿ ಸೇರಿ ನಾಲ್ವರು ಅರೆಸ್ಟ್
ಮೊರಾದಾಬಾದ್: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ, ಆಂಚಲ್ಗೆ ಆಕೆಯ ಸ್ವಂತ…
-

ಉಳ್ಳಾಲ: ಆರೀಫ್ ಮರ್ಡರ್ ಕೇಸ್ಗೆ ಮತ್ತೊಂದು ಟ್ವಿಸ್ಟ್-ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಆರೋಪಿ ಸೆರೆ
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮೇ 25 ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ ಯಾನೆ ಚಿನ್ನು(21) ಬಂಧಿತ ಆರೋಪಿ. ಆರೋಪಿಯು ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್ ಎಂಬಾತನ ಸಹೋದರನಾಗಿದ್ದಾನೆ. ಮಾರ್ಚ್ 27 ರಂದು ಬೆಳಗಿನ ಜಾವ, ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ…
-

ಸಿಸಿಟಿವಿಯಲ್ಲಿ ಸೆರೆ ಆಯ್ತು ‘ನಾಯಿ ದರೋಡೆ’: ಹಣಕ್ಕಾಗಿ ಗಲ್ಲಿ ಗಲ್ಲಿಯಲ್ಲಿ ಹುಡುಕಾಟ
ಬಿಜ್ನೋರ್: ಕಳ್ಳರು ಬಂದು ಹಣ ದೋಚುವುದು, ದರೋಡೆಕೋರರು ಬ್ಯಾಗ್ ಕಿತ್ತುಕೊಂಡು ಓಡುವುದು ಸಾಮಾನ್ಯ. ಆದರೆ, ಇಲ್ಲೊಂದು ಬೀದಿನಾಯಿ ಸಾರ್ವಜನಿಕರ ಕಣ್ಣೆದುರೇ ಬರೋಬ್ಬರಿ ₹1 ಲಕ್ಷ ನಗದು ಹಣವಿದ್ದ ಪ್ಲಾಸ್ಟಿಕ್ ಕವರನ್ನು ಬೈಕ್ನಿಂದ ಅತ್ಯಂತ ಚಾಣಾಕ್ಷತನದಿಂದ ಹೊತ್ತೊಯ್ದಿರುವ ವಿಲಕ್ಷಣ ಘಟನೆಯೊಂದು ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.ಬುಲ್ಲಾ ಚೌಕ ನಿವಾಸಿ, ಪಶು ವೈದ್ಯಕೀಯ ಮೆಡಿಕಲ್ ಸ್ಟೋರ್ ಮಾಲೀಕ ನವಾಬ್ ಅಹಮದ್ ಎಂಬುವವರೇ ಈ ವಿಚಿತ್ರ ಕಳ್ಳತನಕ್ಕೆ ಒಳಗಾದ ದುರ್ದೈವಿ. ಶನಿವಾರ ಮಧ್ಯಾಹ್ನ ಶಂಭಾ ಬಜಾರ್ನ ಕಿಲ್ಲೆ ವಾಲಿ ಮಸೀದಿಗೆ…
-

ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ವೇಳೆ ಅಪಹರಣ: 112 ಕರೆ ಮೂಲಕ ಬಯಲಾಯ್ತು ಭೀಕರ ಘಟನೆ
ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಏನಿದು ಘಟನೆ?ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ…
-

ಅಳಿಯನ ಮಾತು ನಂಬಿದ ಮಾವನಿಗೆ ಶಾಕ್: ₹15.81 ಲಕ್ಷ ಆನ್ಲೈನ್ ವಂಚನೆ
ಉಡುಪಿ: ಕತಾರ್ನಿಂದ ಖರ್ಜೂರ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುವ ಉದ್ಯಮದ ಹೆಸರಿನಲ್ಲಿ ಸ್ವಂತ ಮಾವನಿಗೆ ₹15.81 ಲಕ್ಷ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಮಾನ್ಯ ನ್ಯಾಯಾಲಯದ ಖಾಸಗಿ ದೂರಿನ ಅನ್ವಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಬಡಗುಬೆಟ್ಟು ಗ್ರಾಮದ ನಿವಾಸಿ ಇಫ್ರಾನ್ ಅಜೀಜ್ (50) ವಂಚನೆಗೊಳಗಾದ ಪಿರ್ಯಾದಿದಾರರು. ಇವರ ಅಳಿಯ, ಕತಾರ್ನಲ್ಲಿ ಕೆಲಸ ಮಾಡುತ್ತಿರುವ 1ನೇ ಆರೋಪಿ ಮೊಹಮ್ಮದ್ ಶರ್ಪದ್ದೀನ್, ಕೇರಳ ತ್ರಿಶೂರು ಮೂಲದ…
-

ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಅರೆಸ್ಟ್
ಶಿವಮೊಗ್ಗ: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.ಅಬ್ಬಲಗೇರಿ ಗ್ರಾಮದಲ್ಲಿ ಕಾರು ನಿಲ್ಲಿಸಿ ಪ್ರೇಮಿಗಳು ಮಾತನಾಡುತ್ತಿದ್ದ ವೇಳೆ ಕಾರಲ್ಲಿ ಬಂದಿದ್ದ ಆರೋಪಿ ಮಂಜುನಾಥ್, ಯುವತಿಯ ಕೊರಳಲ್ಲಿದ್ದ 10…
-

ಭೀಕರ ಅಪಘಾತದ ನಡುವೆ ಮಾನವೀಯತೆ ಮರೆತ ಕಳ್ಳರು – ಮೃತದೇಹದ ಮೇಲಿನ ಚಿನ್ನ ಕಳವು
ಬೈಂದೂರು: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಖದೀಮರು ಲಪಟಾಯಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಈ ಘೋರ ದುರಂತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್…
-

ಬೇಕರಿ ಮಾಲೀಕನ ಕಾಲರ್ ಹಿಡಿದು ಹಲ್ಲೆ, ಬಳಿಕ ಚಾಕು ಇರಿತ: ಪ್ರಕರಣ ದಾಖಲು
ಉಡುಪಿ: ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿದಿಯೂರು ಗ್ರಾಮದ ಮುರಳಿಧರ್ (35) ಎಂಬುವರು ನೀಡಿದ ದೂರಿನ ಪ್ರಕಾರ, ಅವರು ಕಳೆದ 20 ವರ್ಷಗಳಿಂದ ಕರಾವಳಿ ಬೈಪಾಸ್ ಬಳಿಯ ಸಾಗರ್ ಗಂಗಾ ಕಟ್ಟಡದ ನೆಲಮಹಡಿಯಲ್ಲಿ ‘ಪೂಜಾ ಬೇಕರಿ’ ನಡೆಸುತ್ತಿದ್ದಾರೆ. ಇವರ ಅಂಗಡಿಯ ಪಕ್ಕದಲ್ಲೇ ಅಶೋಕ್ ಎಂಬಾತ ಕಳೆದ ಒಂದು ವರ್ಷದಿಂದ ‘ಕೃಷ್ಣ ಬೇಕರಿ’ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ವಿವರಮೇ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











