Category: ಕ್ರೈಂ ಸುದ್ದಿ
Your blog category
-

ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟು ಸಾಗಾಟ: ಬಂಟ್ವಾಳದಲ್ಲಿ ಇಬ್ಬರ ಬಂಧನ
ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತರನ್ನು ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ. ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು…
-

ಮಂಗಳೂರು ಸೈಬರ್ ವಂಚನೆ: ಪಾರ್ಸಲ್ ಕೊಡುತ್ತೇವೆಂದು ನಂಬಿಸಿ ಲಕ್ಷಾಂತರ ದೋಚಿಕೆ
ಮಂಗಳೂರು : ದುಬೈನಿಂದ ಕಳುಹಿಸಿದ ಬೆಲೆಬಾಳುವ ಪಾರ್ಸಲ್ ನೀಡುವುದಾಗಿ ನಂಬಿಸಿ ಮಂಗಳೂರಿನ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ₹6,84,500 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ನಗರದ ನಿವಾಸಿ 44 ವರ್ಷದ ಮಹಿಳೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ಪಾರ್ಸಲ್ ಕಳುಹಿಸುತ್ತಿದ್ದರು. ಇದನ್ನು ಬಂಡವಾಳ ಮಾಡಿಕೊಂಡ ವಂಚಕರು, ಏಪ್ರಿಲ್ 21 ರಂದು ಲಂಡನ್ನ ನಂಬರ್ನಿಂದ ವಾಟ್ಸ್ ಆ್ಯಪ್ ಕರೆ ಮಾಡಿ, “ನಿಮ್ಮ ಪತಿ ಫೆಡ್ಎಕ್ಸ್ ಕಾರ್ಗೋ…
-

ಮಂಗಳೂರು ಜೈಲಿನಲ್ಲಿ ಅಚ್ಚರಿ ಪ್ರಕರಣ: ಬಂಧಿಯ ದೇಹದೊಳಗೆ ಅಡಗಿಸಿದ್ದ ಮೊಬೈಲ್ ವಶ
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ ಸಂಬಂಧ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೊಹಮ್ಮದ್ ತೋಹಿದ್ ಎಂಬ ವಿಚಾರಣಾ ಬಂಧಿಯನ್ನು ಏಪ್ರಿಲ್ 24ರಂದು ಚಿಕಿತ್ಸೆಗಾಗಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 29ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಸಂಜೆ 5:15ಕ್ಕೆ ಬೆಂಗಾವಲು ಸಿಬ್ಬಂದಿಯೊಂದಿಗೆ ಕಾರಾಗೃಹದ ಮುಖ್ಯದ್ವಾರಕ್ಕೆ ಆತನನ್ನು ಕರೆತರಲಾಯಿತು. ಮುಖ್ಯದ್ವಾರದಲ್ಲಿ ಕರ್ತವ್ಯದಲ್ಲಿದ್ದ…
-

ಕೊಡಲಿಯಿಂದ ಹೊಡೆದು ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ ಪತಿ ಶರಣಾಗತಿ
ಮೈಸೂರು: ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು.…
-

ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ
ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಂಡು ಸಿಬ್ಬಂದಿಗಳ…
-

BREAKING : ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ : ಮೂವರು ವೈದ್ಯರು ಅರೆಸ್ಟ್!
ಮಂಡ್ಯ : ಕಳೆದ ವರ್ಷ ಮಂಡ್ಯ ಮೈಸೂರು ಭಾಗದಲ್ಲಿ ಭ್ರೂಣಲಿಂಗ ಪತ್ತೆ & ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಇದೀಗ ಮಂಡ್ಯದಲ್ಲಿ ಮತ್ತೆ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪೊಲೀಸರು ಮೂವರು ವೈದ್ಯರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿದ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕೆ ಆರ್ ಪೇಟಿಯ ಚೇತನ ಮೆಟರ್ನಿಟಿ ಸೆಂಟರ್ ನ ದಿವ್ಯ ಚೇತನ್, ಕೆಆರ್ ಪೇಟೆ ನಾವಿ…
-

ಗುರುಪುರ: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು
ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ 46 ಸಾವಿರ ರೂ. ದೋಚಿರುವ ಘಟನೆ ವರದಿಯಾಗಿದೆ. ಗಂಜಿಮಠದ ಝಾರಾ ಹಾಲ್ನಲ್ಲಿ ಅಡುಗೆ ಮೇಲ್ವಿಚಾರಕರಾಗಿದ್ದ ಮಹಮ್ಮದ್ ಮನ್ಸೂರ್ ಹಣ ಕಳೆದು ಕೊಂಡವರು. ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದಂತೆ, ಎ.26ರಂದು ರಾತ್ರಿ 9:10ರ ವೇಳೆಗೆ ಬಂಗ್ಲಗುಡ್ಡೆಗೆ ತಲುಪಿ ದ್ದಾರೆ. ಆಗ ರಸ್ತೆಯ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರು ಮನ್ಸೂರ್ ಅವರ ಸ್ಕೂಟರ್ನ್ನು ನಿಲ್ಲಿಸಿ, ತಮ್ಮ ಸ್ಕೂಟರ್ ಕೆಟ್ಟಿದೆ ಎಂದು ಹೇಳಿದ್ದಾರೆ. ಮನ್ಸೂರ್…
-

ಉಡುಪಿ: 32 ಅಕ್ರಮ ಹೋಂ ಸ್ಟೇಗಳು ಪತ್ತೆ..!! ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ
ಉಡುಪಿ: ಕೊಡಗಿನ ಹೋಂಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ 32 ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ…
-

ಉಳ್ಳಾಲ: ಮುಕ್ಕಚ್ಚೇರಿ ಕೊಲೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಝುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದ ವೇಳೆ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಝುಬೇರ್ನನ್ನು ಕೊಲೆ ಮಾಡಿತ್ತು. ತಡೆಯಲು ಹೋದ ಇಲ್ಯಾಸ್ ನಿಗೂ ತಲವಾರಿನಿಂದ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಈ ಬಗ್ಗೆ ಅಂದಿನ ಇನ್ಸ್ಪೆಕ್ಟರ್ ಗೋಪಿಕೃಷ್ಣ…
-

ಕೆಎಸ್ಆರ್ಟಿಸಿ ಬಸ್ನಲ್ಲಿ ಪರ್ಸ್ ಕಳವು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಷ್ಟ
ಬಂಟ್ವಾಳ: ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನ ಬಲ್ಯ ನಿವಾಸಿ ಕ್ರಿಸ್ತಿನ್ ವೇಗಸ್ ಅವರ ಪರ್ಸ್ ಕಳವಾಗಿದೆ. ಪರ್ಸ್ ನಲ್ಲಿ ಐದೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರ ಮತ್ತು ನಾಲ್ಕು ಗ್ರಾಂ ತೂಕದ ಚಿನ್ನದ ಉಂಗುರ ಒಟ್ಟು 48 ಗ್ರಾಂ ತೂಕದ ಚಿನ್ನಾಭರಣದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











