Category: ಕ್ರೈಂ ಸುದ್ದಿ
Your blog category
-

ಬಂಟ್ವಾಳ: 2020ರ ಗಾಂಜಾ ಪ್ರಕರಣಕ್ಕೆ ತೀರ್ಪು- ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ
ಬಂಟ್ವಾಳ: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷಗಳ ಶಿಕ್ಷೆ ಹಾಗೂ ₹70,000 ದಂಡ ವಿಧಿಸಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದಿನಾಂಕ 10-11-2020 ರಂದು ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ಆಗಿನ ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ₹49,000 ಮೌಲ್ಯದ 1.480…
-

ವಿಟ್ಲ: ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಗಂಭೀರ..!! ಚಾಲಕ ಮತ್ತು ನಿರ್ವಾಹಕರು ಬೇಜವಾಬ್ದಾರಿಗೆ ಜನ ಆಕ್ರೋಶ
ವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿದ್ದ ಬಸ್ಸೊಂದು ಕಂಡಕ್ಟರ್ ಬೇಜವಾಬ್ದಾರಿಯಿಂದಾಗಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ-ಮುಡಿಪು-ಸ್ಟೇಟ್ಬ್ಯಾಂಕ್ ಸಂಚರಿಸುವ ಮಹೇಶ್ ಹೆಸರಿನ ಖಾಸಗಿ ಬಸ್ (KA 19 AF 4649) ವಿಟ್ಲದ ಖಾಸಗಿ ನಿಲ್ದಾಣದಲ್ಲಿ ಹಿಂದಕ್ಕೆ ಬರುತ್ತಿತ್ತು. ಇದೇ ಸಂದರ್ಭ ಇನ್ನೊಂದು ಬಸ್ಸಿಂದ ಇಳಿದು ಹೋಗುತ್ತಿದ್ದ ಮಹಿಳೆಗೆ ಮಹೇಶ್ ಬಸ್ ಡಿಕ್ಕಿ ಹೊಡೆದಿದೆ. ಮಹಿಳೆ ಬಸ್ಸಿನ ಅಡಿಗೆ ಬೀಳುತ್ತಿರುವುದನ್ನು ನೋಡನೋಡುತ್ತಲೇ ಸ್ಥಳೀಯ ಜ್ಯೂಸ್ ಅಂಗಡಿ ಮಾಲಿಕ ರಘುಶೆಟ್ಟಿಯವರು ಮತ್ತು ಆಟೋ ಚಾಲಕರು ಸಾಕಷ್ಟು ಬೊಬ್ಬೆ…
-

ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು. ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ,…
-

ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ!
ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ…
-

ಆರೀಫ್ ಹತ್ಯೆ ಪ್ರಕರಣ : ಸಿಸಿಬಿ ಪೊಲೀಸರನ್ನೊಳಗೊಂಡ ವಿಶೇಷ ಪತ್ತೆ ದಳ ರಚನೆ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು ಹೋಗಿದ್ದರು. ಬಳಿಕ ರಿಕ್ಷಾವೊಂದರಲ್ಲಿ…
-

ಮಂಗಳೂರು ಗ್ಯಾಂಗ್ ವಾರ್ ನ ನಟ್ಟ್ ಬೋಲ್ಟ್ ಟೈಟ್ ಮಾಡುತ್ತಾರಾ ಪೊಲೀಸರು..?
ಏನಾಗುತ್ತಿದೆ ಮಂಗಳೂರಿನಲ್ಲಿ..? ಅಬ್ಬಬ್ಬಾ.. ವರ್ಷದ ಹಿಂದೆ ಮಂಗಳೂರಿನಲ್ಲಿ ಇಂತಹ ಮಾತುಗಳು ಬೀದಿ ಬೀದಿಗಳಲ್ಲಿ ಕೇಳಿ ಬರುತ್ತಿತ್ತು. ದಿನ ಬೆಳಗಾದರೆ ಸಾಕು, ಗ್ಯಾಂಗ್ ವಾರ್ ಗಳ ಅಬ್ಬರ ಮಂಗಳೂರಿನಲ್ಲಿ ಕೇಳಿ ಬರುತ್ತಿತ್ತು. ಪೊಲೀಸರ ಎಚ್ಚರಿಕೆಗಿಂತಲೂ ಹೆಚ್ಚಾಗಿ ದುಬೈ, ಮುಂಬೈ ನಲ್ಲಿ ಅಡಗಿರುವ ‘ಬಾಯಿ ಲೋಗ್’ ಗಳ ಆದೇಶವೇ ಇಲ್ಲಿ ಜಾರಿಗೊಳ್ಳುತ್ತಿತ್ತು. ಅಪರಾಧ ಸುದ್ದಿಗಳು ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿತ್ತು. ದ್ವೇಷ ಭಾಷಣಕಾರರ ಅಟ್ಟಹಾಸ ಮಂಗಳೂರಿನಲ್ಲಿ ಮುಗಿಲು ಮುಟ್ಟುತ್ತಿತ್ತು. ಮತೀಯ ಗಲಭೆಗಳಿಗೆ ಕರಾವಳಿ ಕುಖ್ಯಾತಿ ಪಡೆದಿತ್ತು. ಚೂರಿಗಳದ್ದೇ ಅಬ್ಬರ, ಅಮಾಯಕರ…
-

ಅಪಾರ್ಟ್ಮೆಂಟ್ವೊಂದರ ಫ್ರಿಜ್ನಲ್ಲಿ ಭ್ರೂಣ ಪತ್ತೆ!
ಕೇರಳದ ತ್ರಿಶೂರ್ ಜಿಲ್ಲೆಯ ಕೊಡುಂಗಲ್ಲೂರು ಪ್ರದೇಶದ ಅಪಾರ್ಟ್ಮೆಂಟ್ವೊಂದರಲ್ಲಿ ಫ್ರಿಜ್ ಒಳಗೆ ಭ್ರೂಣವನ್ನು ಸಂರಕ್ಷಿಸಿ ಇಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ದಂಪತಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಂಜೆ ಕೊಡುಂಗಲ್ಲೂರು ಸಮೀಪದ ಚತೇದತುಪರಂಬುವಿನ ಫ್ಲಾಟ್ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ರೆಫ್ರಿಜರೇಟರ್ ಒಳಗೆ “AMY” ಎಂದು ಗುರುತಿಸಲಾದ ಹಸಿರು ಪೆಟ್ಟಿಗೆಯಲ್ಲಿ ಸುಮಾರು 3ರಿಂದ 4 ತಿಂಗಳ ವಯಸ್ಸಿನ ಭ್ರೂಣ ಪತ್ತೆಯಾಗಿದೆ. ತ್ರಿಶೂರ್ ಜಿಲ್ಲೆಯ ಅನಪ್ಪುಳ ಮೂಲದ…
-

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ..!! ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆಗೆ ಯತ್ನ..!!
ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ-ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
-

ವೃದ್ಧನನ್ನು ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸಲ್ ಮಾಡಲು ಮುಂದಾದ ತಂಡ!
ಬೆಂಗಳೂರು: ರೀಲ್ಸ್ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್ ಮಾಡಲು ಬಂದ ಕೊರಿಯರ್ ಆಫೀಸ್ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್ನಲ್ಲಿರುವ ಕೊರಿಯರ್ ಆಫೀಸ್ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್ನಲ್ಲಿರುವ ಕೊರಿಯರ್ ಆಫೀಸ್ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ…
-

ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್ಪೆಕ್ಟರ್..!!
ಮೂಡಬಿದ್ರೆ: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ. ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಾಯಿಸಿದರು ಎಂದು ಮಹಿಳೆ ಆರೋಪ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











