Category: ಕ್ರೈಂ ಸುದ್ದಿ
Your blog category
-

ಮಂಗಳೂರು KFC ವಿರುದ್ಧ ಗಂಭೀರ ಆರೋಪ: ಹಳೆಯ ಚಿಕನ್ ಬಳಕೆ ಶಂಕೆ, FSSAI ನವೀಕರಣಕ್ಕೆ ವಿರೋಧ
ಮಂಗಳೂರು: ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಚಿಕನ್ನಿಂದ ದುರ್ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ, ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಶನಿವಾರ ದಿಢೀರ್ ಪರಿಶೀಲನೆ ನಡೆಸಿದರು. ತಪಾಸಣೆ ವೇಳೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಚಿಕನ್ ಉತ್ಪನ್ನಗಳ ದಾಸ್ತಾನು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಉತ್ಪನ್ನಗಳಿಗೆ ಆರು ತಿಂಗಳಿಗಿಂತ ಹೆಚ್ಚಿನ ಶೆಲ್ಫ್ ಲೈಫ್ ಇದೆ ಎಂದು ಮಳಿಗೆ ಸಿಬ್ಬಂದಿ ಅಧಿಕಾರಿಗಳಿಗೆ…
-

ಪುತ್ತೂರು: ಅಕ್ರಮ ಮರ ಸಾಗಾಟ- ಲಾರಿ, ಮರದ ದಿಮ್ಮಿಗಳ ಸಹಿತ ಆರೋಪಿ ಬಂಧನ
ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ…
-

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಅರೆಸ್ಟ್!!
ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು…
-

ಕೋಟಿ ಕೋಟಿ ವಂಚನೆ ಕೇಸ್: ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣನವರ್ ಅರೆಸ್ಟ್, 12 ದಿನ ED ಕಸ್ಟಡಿಗೆ
ತಿಂಗಳಿಗೆ ಶೇಕಡಾ 3ರಷ್ಟು ಅಧಿಕ ಲಾಭಾಂಶ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಗೆ ಬರೋಬ್ಬರಿ ₹2,110 ಕೋಟಿ ವಂಚಿಸಿದ ಆರೋಪದಡಿ ‘ಶಿವಂ ಅಸೋಸಿಯೇಟ್ಸ್’ ಮುಖ್ಯಸ್ಥ ಶಿವಾನಂದ ಸಿದ್ದಪ್ಪ ನೀಲಣ್ಣವರ್ನನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಮಂಗಳೂರು ಉಪ ವಲಯ ಕಚೇರಿಯ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಶಿವಾನಂದ್ನನ್ನು ಬಂಧಿಸಿದ್ದು, ವಿಚಾರಣೆಗಾಗಿ 12 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ವಂಚನೆ ಪ್ರಕರಣದ ಎಫ್ಐಆರ್ ಆಧಾರದ…
-

ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ..!!
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಐಜಿಪಿ ಅವರ ಆದೇಶ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ…
-

ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!
ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ…
-

ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ- ಮತ್ತೆ ನಾಲ್ವರ ಬಂಧನ..!!
ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ ಸಿಪಿಐ ಪಕ್ಷದ ಸ್ಥಳೀಯ ಮಟ್ಟದ ನಾಯಕನಾಗಿದ್ದು, ದರೋಡೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ತನಿಖೆ ಚುರುಕುಗೊಂಡ ಬೆನ್ನಲ್ಲೇ ಶ್ರೀರಾಗ್ ವಕೀಲರ ಮೂಲಕ…
-

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ…
-

ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ!!
ಕಾರ್ಕಳ : ಲಾಭಾಂಶದ ಆಸೆಗೆ ಆನ್ಲೈನ್ನಲ್ಲಿ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 32 ಲಕ್ಷ ರೂ. ಕಳೆದುಕೊಂಡ ಘಟನೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು. 17ರಂದು ಲಕ್ಷ್ಮಣ್ ಎಂಬವರಿಗೆ ಫೇಸ್ ಬುಕ್ನಲ್ಲಿ ಒಂದು ವೀಡಿಯೋ ಬಂದಿದ್ದು ಅದರಲ್ಲಿ JB (Julius Baer VIP Group) ಮತ್ತು 5paisa ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಲಾಭಾಂಶ ಕೊಡುವುದಾಗಿ ಇತ್ತು. ಅದರಲ್ಲಿದ್ದ ಲಿಂಕನ್ನು ಲಕ್ಷ್ಮಣ್ ಅವರು ಕ್ಲಿಕ್ ಮಾಡಿದಾಗ JB (Julius Baer VIP…
-

ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ
ಸರ್ಕಾರಿ ಬಿಲ್ಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಮತ್ತು ಮಂಜೂರಾತಿಗಾಗಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಬೆನ್ನಲ್ಲೇ, ರಾಜಧಾನಿಯ ವಿವಿಧ ಖಜಾನೆ (ಟ್ರೆಜರಿ) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಭಾರಿ ಪ್ರಮಾಣದ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಹಾಗೂ ಎಡಿಜಿಪಿ ಮನೀಶ್ ಖರ್ಭೀಕರ್ ಅವರ ನೇತೃತ್ವದಲ್ಲಿ ಈ ಮೆಗಾ ಕಾರ್ಯಾಚರಣೆ ನಡೆದಿದೆ. ಒಟ್ಟು 11 ನ್ಯಾಯಾಂಗ ಅಧಿಕಾರಿಗಳು ಮತ್ತು 39…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











